33 ಕೋಟಿ ವೆಚ್ಚದಲ್ಲಿ ಕಾಮಗಾರಿ
Team Udayavani, Jun 19, 2020, 6:06 AM IST
ಮಾಗಡಿ: ಅಂದಾಜು 33 ಕೋಟಿ ರೂ. ವೆಚ್ಚದಲ್ಲಿ ಸುಮಾರು 28 ಕಿ.ಮೀ. ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಎ.ಮಂಜುನಾಥ್ ಭೂಮಿ ಪೂಜೆ ನೆರವೇರಿಸಿ ದರು. ತಾಲೂಕಿನ ಆಗಲಕೋಟೆ ಹ್ಯಾಂಡ್ಪೋಸ್ಟ್ನಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ರಾಮನಗರದಿಂದ ಜಾಲಮಂಗಲದ ಕೊಟ್ಟಗಾರಹಳ್ಳಿವರೆಗೆ ಮೊದಲ ಪ್ಯಾಕೇಜ್ ಮುಗಿದಿದೆ.
ಕೊಟ್ಟಗಾರಹಳ್ಳಿ, ಆಗಲಕೋಟೆ ಮಾರ್ಗವಾಗಿ ಕಾಳಾರಿ ರಸ್ತೆಯಿಂದ ಕುದೂರಿನ ಸುಗ್ಗನಹಳ್ಳಿವರೆಗೂ ರಸ್ತೆ ಅಗಲೀಕರಣಗೊಳಿಸಿ ದ್ವಿಪಥ ರಸ್ತೆಯ ಡಾಂಬರೀಕರಣ ಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ರಸ್ತೆ ಬದಿಯ ಗ್ರಾಮೀಣ ಜನರು ರಸ್ತೆ ಅಗಲೀಕರಣ, ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣಕ್ಕೆ ಸಹಕಾರ ನೀಡಬೇಕು. ರೈತರು ಸಂಚರಿಸುವ ಜಾಗದ ಚರಂಡಿ ಮೇಲೆ ಕಾಂಕ್ರೀಟ್ ಸ್ಲಾಬ್ ಹಾಕಲಾಗುವುದು.
ಕಾವೇರಿ ಕನಸ್ಟ್ರಕ್ಷನ್ಸ್ಗೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿದ್ದಾರೆ. ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಿದ್ದಾರೆ. ರಂಗನೇಹಳ್ಳಿ ರಸ್ತೆ, ಕೊಂಡಹಳ್ಳಿಯಿಂದ ತೂಬಿನಕೆರೆವರೆಗೆ ಹಾಗೂ ಕಾಳಾರಿ ರಸ್ತೆಯಿಂದ ಜಾನಿಗೆರೆ ರಸ್ತೆಗೆ ಇನ್ನೊಂದು ವಾರದಲ್ಲಿ ಕಾಮಗಾರಿಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಕೃಷ್ಣಮೂರ್ತಿ, ಸಾತನೂರು ಗ್ರಾಪಂ ಅಧ್ಯಕ್ಷ ಡಿ.ಸಿ,.ಮೂರ್ತಿ, ಜುಟ್ಟನಹಳ್ಳಿ ಜಯ ರಾಮು, ಎಪಿಎಂಸಿ ನಿರ್ದೇಶಕ ಕೆ.ಟಿ.ಮಂಜುನಾಥ್, ಮಾರೇಗೌಡ, ರಂಗಸ್ವಾಮಿ, ತಮ್ಮಣ್ಣಗೌಡ, ಶಿವಲಿಂಗ ಯ್ಯ, ಕೆಡಿಪಿ ಸದಸ್ಯ ಅಶೋಕ್, ಡಿ.ಜಿ.ಕುಮಾರ್, ರಾಮಣ್ಣ, ಶಿವರಾಮಯ್ಯ, ದೇವರಾಜು, ಗಂಗರಾಜು,ಎ.ಸಿ. ಗಂಗಣ್ಣ, ಗಿರಿಗೌಡ, ಸಂಜೀವ ಮೂರ್ತಿ,ಯೋಗಣ್ಣ, ರವಿಕುಮಾರ್, ವೆಂಕಟೇಶ್ ಎಇಇ ರಾಮಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್ಟಿಆರ್ಆರ್ ರಸ್ತೆ
Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.