ಮಲೆ ಮಹದೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ


Team Udayavani, Jun 20, 2020, 10:37 PM IST

ಮಲೆ ಮಹದೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ

ಹನೂರು(ಚಾಮರಾಜನಗರ): ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ತಡರಾತ್ರಿಯೇ ಆಗಮಿಸಿ ರಾಷ್ಟ್ರಪತಿ ಭನವದಲ್ಲಿ ವಾಸ್ತವ್ಯ ಹೂಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಬೆಳ್ಳಂಬೆಳಗ್ಗೆಯೇ ಶ್ರೀ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರದಲ್ಲಿಯೇ ಬೆಳಗ್ಗಿನ ಉಪಹಾರ ಸೇವಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಕೊಳ್ಳೇಗಾಲ   ಹನೂರು ತಾಲೂಕಿನಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಪರಿಶೀಲನೆಗಾಗಿ ಸರಗೂರಿನತ್ತ ಪ್ರಯಾಣ ಬೆಳೆಸಿದರು.

ಅಭಿವೃದ್ಧಿ ಕಾರ್ಯಗಳ ಮಾಹಿತಿ ಸಂಗ್ರಹ: ಇದೇ ವೇಳೆ ಸಚಿವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿಗಳ ಕೈಪಿಡಿಯನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದವತಿಯಿಂದ ಅನುದಾನ ನೀಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ತುರ್ತು ಅವಶ್ಯಕವಾದ ಕಾಮಗಾರಿಗಳನ್ನು ಪ್ರಾಧಿಕಾರದವತಿಯಿಮದಲೇ ಕೈಗೊಳ್ಳಿ, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಸಚಿವರಿಗೆ ದರ್ಶನ ಭಾಗ್ಯ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪೂಜಾ ಕೈಂಕರ್ಯಗಳಲ್ಲಿ ಭಕ್ತಾದಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತು ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮಸ್ಯೆಯಾಗುವುದನ್ನು ಮನಗಂಡ ಜಿಲ್ಲಾಡಳಿತ ಜೂನ್ 19 ರಿಂದ 21ರವರೆಗೆ 3 ದಿನಗಳ ಕಾಲ ಮಾದಪ್ಪನ ದರ್ಶನವನ್ನು ನಿಷೇಧಿಸಲಾಗಿತ್ತು. ಅಲ್ಲದೆ ಶ್ರೀ ಕ್ಷೇತ್ರದಲ್ಲಿ ಕೋವಿಡ್ 19 ನಿಂದಾಗಿ ರಾತ್ರಿ ವಾಸ್ತವ್ಯ ಹೂಡುವುದು ಮತ್ತು ಕೊಠಡಿಗಳನ್ನು ನೀಡುವುದನ್ನು ನಿಷೇಧಿಸಲಾಗಿದ್ದರೂ ಸಚಿವರು ಮತ್ತು ಅವರ ಹಿಂಬಾಲಕರಿಗೆ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಿ ಕೊಠಡಿಗಳನ್ನು ನೀಡಿದ್ದಕ್ಕೆ ಮಲೆ ಮಾದಪ್ಪನ ಭಕ್ತಗಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ದೇವರ ದರ್ಶನಕ್ಕೂ ಉಳ್ಳವರಿಗೊಂದು ನ್ಯಾಯ ಬಡ ಭಕ್ತಾದಿಗಳಿಗೆ ಮತ್ತೊಂದು ನ್ಯಾಯ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.