ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್


Team Udayavani, Jun 23, 2020, 10:22 PM IST

ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್

ಯಾದಗಿರಿ: ಹೆಚ್.ವಿಶ್ವನಾಥ್ ಅನುಭವಿ ಮತ್ತು ಮುತ್ಸದ್ದಿ ರಾಜಕಾರಣಿ ಅವರು ಏಕಾಂಗಿಯಲ್ಲ. ಅವರೊಂದಿಗೆ ನಾವೆಲ್ಲರೂ ಇದ್ದೇವೆ ಮಾತ್ರವಲ್ಲದೇ ಪಕ್ಷವೂ ಅವರ ಜೊತೆಗೆ ಇದೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

ವಿಶ್ವನಾಥ್ ಅವರಲ್ಲಿ ಅನಾಥ ಪ್ರಜ್ಞೆ ಕಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ತೊರೆದು ಬಂದವರೆಲ್ಲರಿಗೂ ಬಿಜೆಪಿಯಲ್ಲಿ ನ್ಯಾಯ ಸಿಕ್ಕಿದೆ ಎಂಬುದು ನನ್ನ ಅಭಿಮತ, ಮುಂಬರುವ ದಿನಗಳಲ್ಲಿ ಅವರಿಗೂ ನ್ಯಾಯ ಸಿಗುತ್ತದೆ ಮಾತ್ರವಲ್ಲದೇ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ದೊರಕುವ ಭರವಸೆಯಿದೆ ಎಂದು ಸಚಿವ ಭೈರತಿ ಬಸವರಾಜ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.

ನಗರಸಭೆ, ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ತಡೆಯಾಜ್ಞೆ ಇರುವುರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಿದೆ.

ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿದ್ದು ತಡೆಯಾಜ್ಞೆ ತೆರವಿಗೆ ಸರಕಾರ ಪ್ರಯತ್ನಿಸುತ್ತಿದೆ. ಸರ್ಕಾರ ನಿರ್ಲಕಷ್ಯ ಮಾಡಿಲ್ಲ ಆಡಳಿತ ಸುಧಾರಣೆ ಬಗ್ಗೆ ನಮಗೂ ಆಸಕ್ತಿಯಿದೆ ಶೀಘ್ರದಲ್ಲೆ ತಡೆಯಾಜ್ಞೆ ತೆರವಾಗುವ ಸಾಧ್ಯತೆಯಿದೆ ಎಂದರು.

ಕೋವಿಡ್ 19 ಸೋಂಕು ನಿಯಂತ್ರಣ ಸರಕಾರದ ಮೊದಲ ಆದ್ಯತೆಯಾಗಿದೆ. ಹೀಗಾಗಿ ಅಭಿವೃದ್ದಿ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿರಬಹುದು ಹೊರತು ಯಾವುದೇ ಕಾರಣಕ್ಕೆ ಆಡಳಿತ ಯಂತ್ರ ಕುಸಿ ಯಲು ಬಿಡುವುದಿಲ್ಲ. ಕೋವಿಡ್ 19 ನಿಯಂತ್ರಣದೊಂದಿಗೆ ನರೇಗಾ ಯೋಜನೆ ಆರಂಭಿಸಿ ಕಾರ್ಮಿಕರಿಗೆ ಕೃಷಿಕರಿಗೆ ಕೆಲಸ ನೀಡುವ ಮೂಲಕ ಅಭಿವೃದ್ದಿಗೂ ಒತ್ತು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಆರು ತಾಲೂಕಿನ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಒಳ ಚರಂಡಿ ವ್ಯವಸ್ಥೆ ಕೈಗೊಂಡು ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಿದೆ. ಜಿಲ್ಲೆಯ ಅಭಿವೃದ್ಧಿಯ ಕುರಿತು ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು ಎಂದು ಸಚಿವ ಭೈರತಿ ಅವರು ನುಡಿದರು.

ಸುರಪುರ ಕುಡಿಯುವ ನೀರಿನ ಸೌಕರ್ಯಕ್ಕೆ 60 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಯಾದಗಿರಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರ ಬೆಳವಣಿಗೆಯಾಗುತ್ತಿದ್ದು ಹೊಸ ಬಡಾವಣೆಗಳಿಗೆ ಸೂಕ್ತ ರಸ್ತೆ ಮತ್ತು ನೀರು ಸರಬರಾಜಿಗೆ ಕ್ರಮವಹಿಸಲು ಸೂಚಿಸಲಾಗುವುದು. ಖಾಸಗಿ ಲೇಔಟ್ ನಿರ್ಮಾಣಕ್ಕೆ ಕಡಿವಾಣ ಹಾಕಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡವಣೆ ನಿರ್ಮಿಸಿ ಆದಾಯ ಸಂಪನ್ಮೂಲ ಕ್ರೋಢೀಕರಿಸಲು ಒತ್ತು ನೀಡಲಾಗುವುದು ಎಂದು ಸಚಿವ ಭೈರತಿ ಅವರು ಭರವಸೆ ನೀಡಿದರು.

ಶಾಸಕ ನರಸಿಂಹ ನಾಯಕ, ವೆಂಕಟರೆಡ್ಡಿ ಮುದ್ನಾಳ, ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 638 ಅಂಕ ಕುಸಿತ; ನಿಫ್ಟಿಯೂ ಇಳಿಕೆ

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.