ರಾಜಧಾನಿಯಲ್ಲಿ ಮತ್ತೆ ಲಾಕ್‌ಡೌನ್‌ ಕೂಗು


Team Udayavani, Jun 24, 2020, 6:19 AM IST

raja lock

ಬೆಂಗಳೂರು: ಕೋವಿಡ್‌ 19 ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಗರದಲ್ಲಿ ಮತ್ತೆ ಲಾಕ್‌ಡೌನ್‌ ಕೂಗು ವ್ಯಾಪಕವಾಗಿ ಕೇಳಿಬರುತ್ತಿದೆ. ನಗರದಲ್ಲಿ ಕೋವಿಡ್‌ 19 ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ್ದ ವೇಳೆ  ಸೋಂಕು ನಿಯಂತ್ರಣದಲ್ಲಿತ್ತು. ಆದರೆ, ಈ ಸಂದರ್ಭದಲ್ಲಿ ಬಡ ಮತ್ತು ಮಧ್ಯವ ವರ್ಗದ ಜನ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದರು.

ಬಂಧ ಮುಕ್ತವಾದ ನಂತರ ಅಂದರೆ ಕಳೆದ 15 ದಿನಗಳಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳು  ಚುರುಕುಗೊಂಡಿದ್ದು, ಜನಜೀವನ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿತ್ತು. ಈ ಮಧ್ಯೆಯೇ ಹೆಚ್ಚುತ್ತಿರುವ ಪಾಸಿಟಿವ್‌ ಪ್ರಕರಣಗಳು ಜನರನ್ನು ಮನೆಗಳಲ್ಲೇ ಕಟ್ಟಿಹಾಕುತ್ತಿದೆ. ಮಂಗಳವಾರ ಮೆಜೆಸ್ಟಿಕ್‌ನಂತಹ ಜನನಿ ಬಿಡ ಪ್ರದೇಶಗಳು  ಕೂಡ ಬಿಕೋ ಎನ್ನುತ್ತಿದ್ದವು. ಇನ್ನಷ್ಟು ದಿನ ಲಾಕ್‌ಡೌನ್‌ ಮಾಡುವುದು ಸೂಕ್ತ ಎಂಬ ಅಭಿಪ್ರಾ ಯಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿವೆ.

ಜತೆಗೆ ಇದಕ್ಕೆ ವಿರೋಧ ಕೂಡ ಅಷ್ಟೇ ಬಲವಾಗಿದೆ. ಸಾಮಾನ್ಯ ಜನ ಮಾತ್ರವಲ್ಲ,  ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಮತ್ತೆ ಎರಡು-ಮೂರು ವಾರಗಳ ಕಾಲ ಲಾಕ್‌ಡೌನ್‌ ಮಾಡು ವುದು ಸೂಕ್ತ ಎಂದು ಟ್ವೀಟ್‌ ಮಾಡಿದ್ದಾರೆ. ಮತ್ತೂಂದೆಡೆ ಸರ್ಕಾರ ಈಗಾಗಲೇ ನಗರದಲ್ಲಿ ಐದು  ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿದ್ದು, ಅಗತ್ಯಬಿದ್ದರೆ ಲಾಕ್‌ಡೌನ್‌ ಮಾಡುವ ಬಗ್ಗೆಯೂ ಚಿಂತನೆ ನಡೆಸಿದೆ. ಆದರೆ ಇದು ಕೈಗಾರಿಕೆಗಳು, ಕಾರ್ಮಿಕ ವರ್ಗವನ್ನು ಆತಂಕಕ್ಕೆ ತಳ್ಳಿದೆ.

ಉತ್ಪಾದನಾ ಕ್ಷೇತ್ರಕ್ಕೆ ಹೊಡೆತ: ಚಿಕ್ಕಪೇಟೆ ಸೇರಿ ಕೆಲವು ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿರುವುದರಿಂದ ಉತ್ಪಾದನಾ ವಲಯಗಳ ಮೇಲೆ ಮತ್ತೆ ಹೊಡೆತ ಬೀಳುವ ಸಾಧ್ಯತೆ ಇದೆ. ಲಾಕ್‌ಡೌನ್‌ ಸಡಿಲಿಕೆಯಾದ ಮೇಲೆ ಲಾಕ್‌ ಡೌನ್‌  ಅವಧಿಯಲ್ಲಿ ಮಾಡಿಕೊಂಡಿದ್ದ ಸಾಲ ತೀರಿಸಬಹುದು ಎಂದು ಜನ ನಿರೀಕ್ಷಿಸಿದ್ದರು. ಆದರೆ, ನಗರದಲ್ಲಿ ಮತ್ತೆ ಸೋಂಕು ಹೆಚ್ಚಾಗುತ್ತಿದ್ದು, ಮುಂದೇನು ಎನ್ನುವ ಪ್ರಶ್ನೆ ಉದ್ಭವಿಸಿದೆ. ಕೈಗಾರಿಕೆಗಳಿಗೆ ಸಂಬಂಧಿಸಿದ ಎಲೆಕ್ಟ್ರಾನಿಕ್‌ ಬಿಡಿ  ಭಾಗಗಳು ಚಿಕ್ಕಪೇಟೆಯಲ್ಲೇ ದೊರೆಯಲಿವೆ. ಸಣ್ಣ ಪ್ರಮಾಣದ ಎಲೆಕ್ಟ್ರಾನಿಕ್‌ ವಸ್ತುಗಳಿಂದ ಹಿಡಿದು ದೊಡ್ಡ ಪ್ರಮಾಣದ ವಸ್ತುಗಳು ಕೂಡ ಇಲ್ಲಿಯೇ ಸಿಗಲಿವೆ.

ಹೀಗಾಗಿಯೇ ಶೇ.15 ರಿಂದ 20 ರಷ್ಟು ಮಂದಿ ಚಿಕ್ಕಪೇಟೆಯಲ್ಲಿನ ಎಲೆಕ್ಟ್ರಾನಿಕ್‌ ಸಂಬಂಧಿಸಿದ ವಸ್ತುಗಳ ಮೇಲೆ ನಿರತರಾಗಿದ್ದಾರೆ. ಬೆಂಗಳೂರು ಸುತ್ತ ಇರುವಂತಹ ಕೈಗಾರಿಕೆಗಳಿಗೆ ಚಿಕ್ಕಪೇಟೆಯಿಂದಲೇ ಕಚ್ಚಾ ವಸ್ತುಗಳು ಪೊರೈಕೆ ಆಗುತ್ತಿವೆ. ಈಗಾ ಗಲೇ ಕೈಗಾರಿಕೆಗಳು ಶೇ. 30ರಷ್ಟು ಕಾರ್ಮಿಕರ ಸಮಸ್ಯೆ  ಅನುಭವಿಸುತ್ತಿವೆ. ಮತ್ತೆ ಲಾಕ್‌ಡೌನ್‌ ಜಾರಿಯಾದರೆ, ಪರಿಸ್ಥಿತಿ ಮತ್ತಷ್ಟು ಉಲ್ಬಣಿಸಲಿದೆ ಎಂದು ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ)ದ ಅಧ್ಯಕ್ಷ ಆರ್‌. ರಾಜು ಆತಂಕ ವ್ಯಕ್ತಪಡಿಸಿದರು.

ಉದ್ಯೋಗ ಕಳೆದುಕೊಳ್ಳುವ ಭೀತಿ: ನಗರದಲ್ಲಿ ಲಾಕ್‌ ಡೌನ್‌ ಸಂದರ್ಭದಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ವೇತನ ಮತ್ತು ಉದ್ಯೋಗಕ್ಕೂ ಕತ್ತರಿ ಹಾಕಲಾಗಿದೆ. ಈಗ ಮತ್ತೂಮ್ಮೆ ಲಾಕ್‌ಡೌನ್‌ ಜಾರಿಯಾದರೆ, ಮತ್ತಷ್ಟು ಜನ ಬೀದಿಗೆ  ಬೀಳಲಿದ್ದಾರೆ. ಈಗಾಗಲೇ ಹಲವು ಸಂಸ್ಥೆಗಳು ನಷ್ಟದಲ್ಲಿದ್ದು, ಮತ್ತೂಮ್ಮೆ ಲಾಕ್‌ಡೌನ್‌ ಆದರೆ ಪರಿಸ್ಥಿತಿ ಕಷ್ಟವಾಗುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿಯ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಈ ಹಿಂದೆ ಯಾವುದೇ  ಸಿದ್ಧತೆಗಳನ್ನು ಮಾಡಿಕೊಳ್ಳದೆ ಸರ್ಕಾರ ದಿಢೀರ್‌ ಲಾಕ್‌ಡೌನ್‌ ಘೋಷಣೆ ಮಾಡಿತ್ತು. ಇದು ಗಾರ್ಮೆಂಟ್‌ ಉದ್ಯೋಗಿಗಳನ್ನು ಕೆಲಸ ಕಳೆದು ಕೊಳ್ಳುವಂತೆ ಮಾಡಿತು. ಉತ್ಪಾದನಾ ವಲಯಕ್ಕೆ ತನ್ನದೆ ಕೊಡುಗೆ ನೀಡುತ್ತಿದ್ದ ಗಾರ್ಮೆಂಟ್‌  ಉದ್ಯೋಗಿಗಳು ಈಗಾ ಗಲೇ ಉದ್ಯೋಗ ಕಳೆದುಕೊಂಡು ಪರದಾಡುತ್ತಿದ್ದಾರೆ. ಬೆಂಗಳೂರು ಸುತ್ತ ಸುಮಾರು ಐದು ಲಕ್ಷ ಜನ ಕೆಲಸ ಕಳೆದು ಕೊಂಡಿದ್ದಾರೆ. ಇದಕ್ಕೆಲ್ಲ ಯಾರು ಹೊಣೆ ಎಂದು ಸಿಐಟಿಐ ಅಧ್ಯಕ್ಷೆ ವರಲಕ್ಷ್ಮೀ  ಪ್ರಶ್ನಿಸುತ್ತಾರೆ.

ಸರ್ಕಾರದ ಕೆಲವು ತಪ್ಪು ನಿರ್ಧಾರಗಳಿಂದ ಕಾರ್ಮಿಕ ವಲಯ ಕಣ್ಣೀರು ಹಾಕುತ್ತಿದೆ. ಈಗಾಗಲೇ ಸುಮಾರು 4,500ಕ್ಕೂ ಹೆಚ್ಚು ಕಾರ್ಮಿಕರು ಹಲವು ತಿಂಗಳ ವೇತನ ಇಲ್ಲದೆ ನ್ಯಾಯಕ್ಕಾಗಿ ಕಾರ್ಮಿಕ ಇಲಾಖೆ  ಮೊರೆಹೋಗಿದ್ದಾರೆ. ಸರ್ಕಾರ ಕಾರ್ಮಿಕರ ಖಾತೆಗಳಿಗೆ ಹಣ ಹಾಕಿ ಮುಂದಿನ ಹೆಜ್ಜೆ ಇಡಲಿ ಎಂದು ಒತ್ತಾಯಿಸಿದ ಅವರು, ಲಾಕ್‌ಡೌನ್‌ನಿಂದಲೇ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಹೆಲ್ತ್‌ಕೇರ್‌ ಸೆಂಟರ್‌ ತೆರೆಯಲಿ ಎಂದು ಸಲಹೆ ನೀಡಿದ್ದಾರೆ.

ಶ್ರಮಿಕ ವರ್ಗದ ನಿದ್ದೆಗೆಡಿಸಿದ ಲಾಕ್‌ಡೌನ್‌ ಕೂಗು: ಹಿಂದಿನ ಲಾಕ್‌ಡೌನ್‌ನಿಂದ ಬೀದಿ ವ್ಯಾಪಾರಿಗಳು ನಲುಗಿಹೋಗಿದ್ದಾರೆ. ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಶೇ. 95ರಷ್ಟು ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ಮತ್ತೆ ಸರ್ಕಾರ ಲಾಕ್‌ಡೌನ್‌  ಮಾಡಿದರೆ, ಬೀದಿ ವ್ಯಾಪಾರಿಗಳು ಅಕ್ಷರಶಃ ಬೀದಿಗೆ ಬೀಳಲಿದ್ದಾರೆ ಎಂದು ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುಮಾರು 24 ಸಾವಿರಕ್ಕೂ ಅಧಿಕ  ನೋಂದಾಯಿತ ವ್ಯಾಪಾರಿಗಳಿದ್ದಾರೆ. ಕೆಲವು ಕಡೆಗಳಲ್ಲಿ ವ್ಯಾಪಾರ ಕಷ್ಟವಾಗಿದೆ. ಹೀಗೆ ಪರಿಸ್ಥಿತಿ ಮುಂದುವರಿದರೆ ಜೀವನವೂ ಕಷ್ಟವಾಗಲಿದೆ ಎಂದು ಅಲವತ್ತುಕೊಂಡರು. ಅದೇ ರೀತಿ, ಆಟೋ ಚಾಲಕರು, ಆ್ಯಪ್‌ ಆಧಾರಿತ ಟ್ಯಾಕ್ಸಿ,  ಮ್ಯಾಕ್ಸಿ ಕ್ಯಾಬ್‌, ಟೂರಿಸ್ಟ್‌ ಟ್ಯಾಕ್ಸಿ ಚಾಲಕರು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದರು. ಕಳೆದ ಮೂರ್‍ನಾಲ್ಕು ದಿನಗಳಿಂದ ಜನರ ಸಂಚಾರ ವಿರಳವಾಗಿದ್ದು, ವ್ಯಾಪಾರ ಇಲ್ಲದಂತಾಗಿದೆ. ಈ ಮಧ್ಯೆ  ಲಾಕ್‌ಡೌನ್‌ ಕೂಗು ಈ ವಲಯದ  ನಿದ್ದೆಗೆಡಿಸಿದೆ.

“ಲಾಕ್‌ಡೌನ್‌ ಮುಂಚೆ ತಜ್ಞರ ಅಭಿಪ್ರಾಯ ಪಡೆಯಲಿ’: ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತೆ ಲಾಕ್‌ ಡೌನ್‌ ಮಾಡುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ನಿರ್ಧಾರ ಕೈಗೊಳ್ಳಲಿ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆಯಿಲ್ಲದೆ ಲಾಕ್‌ಡೌನ್‌ ಮಾಡಿದ್ದರಿಂದ ಸಾಕಷ್ಟು ಸಮಸ್ಯೆಯಾಗಿದೆ.  ವೆಂಟಿಲೇಟರ್‌ ದುಬಾರಿ ಬೆಲೆಗೆ ಖರೀದಿ ಮಾಡಿದ್ದಾರೆ. ಪಿಪಿಎ ಕಿಟ್‌ ಕಳಪೆಯಾಗಿವೆ ಎಂಬ ಆರೋಪವಿದೆ ಎಂದು ಖಂಡ್ರೆ ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.