ಕೋವಿಡ್‌ 19 ಸೋಂಕಿಗೆ ಮತ್ತೊಂದು ಬಲಿ


Team Udayavani, Jun 24, 2020, 7:09 AM IST

gramantara

ಹೊಸಕೋಟೆ: ನಗರದಲ್ಲಿ ಕೋವಿಡ್‌ 19 ಸೋಂಕಿನಿಂದ 80 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜತೆಗೆ ಒಂದೇ ದಿನ ಒಟ್ಟು 8 ಪ್ರಕರಣ ದೃಢಪಟ್ಟಿದ್ದು, ಹೊಸಕೋಟೆಯಲ್ಲಿ ಒಂದು ಹಾಗೂ ನೆಲಮಂಗಲದಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ  ಸಂಖ್ಯೆ 38ಕ್ಕೇರಿದೆ.

ಜೂ.19ರಂದು ನಗರದ 19ನೇ ವಾರ್ಡ್‌ನ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿತ್ತು. ಸೋಂಕಿತ  ಮಹಿಳೆಯನ್ನು ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. 18ನೇ ವಾರ್ಡ್‌ನಲ್ಲಿ ವಾಸಿಸುತ್ತಿರುವ 49 ವರ್ಷ ವಯಸ್ಸಿನ ವೈದ್ಯರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜೂ.20ರಂದು ಮೊದಲ ಬಾರಿಗೆ ನಗರದ 28ನೇ  ವಾರ್ಡಿನಲ್ಲಿ 60 ವರ್ಷದ ಮಹಿಳೆ ಮೃತಪಟ್ಟಿದ್ದು, ಈಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಮಂಗಳವಾರ ಮೃತಪಟ್ಟಿರುವ ಮಹಿಳೆ ಪುತ್ರ, ಸೊಸೆ, ಇಬ್ಬರು ಮೊಮ್ಮಕ್ಕಳನ್ನು ತಪಾಸಣೆ ನಡೆಸಿದ್ದು, ವರದಿಯ ಫ‌ಲಿತಾಂಶ ನಿರೀಕ್ಷಿಸಲಾಗುತ್ತಿದೆ. ಇದರೊಂದಿಗೆ ರೋಗ ಲಕ್ಷಣಗಳಿರುವ ಸಂಬಂಧಿತ 70 ವರ್ಷದ ವ್ಯಕ್ತಿಯನ್ನು ತಪಾಸಣೆ ಮಾಡಲಾಗಿದೆ. ನಗರದಲ್ಲಿ ಇದುವರೆಗೂ 6 ತಾಲೂಕಿನಲ್ಲಿ ಜಡಿಗೇನಹಳ್ಳಿ, ಆಲಪ್ಪನಹಳ್ಳಿ ಸೇರಿದಂತೆ  ಒಟ್ಟು 8 ಕಂಟೈನ್‌ಮೆಂಟ್‌ ವಲಯಗಳಾಗಿವೆ. ಸೋಂಕಿತರ ಸಂಖ್ಯೆ ದಿನೆ ದಿನೇ ಏರಿಕೆಯಾಗುತ್ತಿದ್ದು, ನಿವಾಸಿಗಳಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ಒಂದೇ ದಿನ 7 ಕೋವಿಡ್‌ 19 ಪಾಸಿಟಿವ್‌
ನೆಲಮಂಗಲ: ಲಾಕ್‌ಡೌನ್‌ ಆರಂಭ ದಿಂದ ಮುಕ್ತಾಯದವರೆಗೂ ಕೋವಿಡ್‌ 19 ಸಮಸ್ಯೆಯಿಲ್ಲದ ನಗರಕ್ಕೆ ದಿನೆ ದಿನೆ ಪಾಸಿಟಿವ್‌ ಪ್ರಕರಗಣಗಳು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್‌ಡೌನ್‌ಗೆ ತಿರ್ಮಾನಿಸಲಾಗಿದೆ ಎಂದು ಶಾಸಕ  ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ. ಮಂಗಳವಾರ ನಗರದ ಸುಭಾಷ್‌ ನಗರದ 52 ವರ್ಷ, 22 ವರ್ಷದ  ವ್ಯಕ್ತಿಗಳಿಗೆ ಹಾಗೂ 14 ವರ್ಷದ ಬಾಲಕಿಗೆ ಕೋವಿಡ್‌ 19 ಸೋಂಕು ತಗುಲಿದ್ದರೆ,

ಮೊದಲಕೋಟೆ 38 ವರ್ಷದ ಮಹಿಳೆ ಹಾಗೂ10 ವರ್ಷದ ಬಾಲಕ, ಅರಿಶಿನಕುಂಟೆಯ ಮಹಿಳೆ ಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಹ ಶೀಲ್ದಾರ್‌ ತಿಳಿಸಿದ್ದಾರೆ. ಅದರ ಜತೆ ಲೋಹಿತ್‌ ನಗರದ  ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಗೆ ತುಮಕೂರಿನ ಸರಕಾರಿ  ಆಸ್ಪತ್ರೆ  ಯಲ್ಲಿ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಸರಕಾರ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ಸಂಖ್ಯೆ ನಮೂದಿಸಿಲ್ಲ.

ಲಾಕ್‌ಡೌನ್‌ ಸುಳಿವು: ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರವ ನ್ನು ಲಾಕ್‌ಡೌನ್‌ ಮಾಡುವುದು. ಪಾಸಿಟಿವ್‌ ಪ್ರಕರಣವಿರುವ ಬಡವಾಣೆ  ಸೀಲ್‌ಡೌನ್‌ ಮಾಡಲಾಗುತ್ತದೆ ಎಂದು  ಶಾಸಕರು ತಿಳಿಸಿದ್ದಾರೆ. ಜೂ.25ರಂದು ಮಧ್ಯಾಹ್ನ 12ಕ್ಕೆ ತಹಶೀಲ್ದಾರ್‌ ಎಸ್‌ಎಲ್‌ಆರ್‌ ಕಲ್ಯಾಣ ಮಂಟಪದಲ್ಲಿ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಸಭೆ ಕರೆದಿದ್ದು, ಲಾಕ್‌ಡೌನ್‌ ಮಾಡುವ ತೀರ್ಮಾನ ಮಾಡಲಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.