ಪ್ರೊ ಕಬಡ್ಡಿ ಚಾಂಪಿಯನ್‌ಶಿಪ್‌ ಶ್ರೀಲಂಕಾಕ್ಕೆ ಸ್ಥಳಾಂತರ?

ಕೋವಿಡ್-19 ವೈರಸ್‌ ಹಿನ್ನೆಲೆಯಲ್ಲಿ ಕ್ರಮ ಸಾಧ್ಯತೆ ; "ಆತಿಥ್ಯಕ್ಕೆ ನಾವು ಸಿದ್ಧ' ಎಂದ ಲಂಕಾ ಕಬಡ್ಡಿ ಅಧ್ಯಕ್ಷ

Team Udayavani, Jun 26, 2020, 5:45 AM IST

ಪ್ರೊ ಕಬಡ್ಡಿ ಚಾಂಪಿಯನ್‌ಶಿಪ್‌ ಶ್ರೀಲಂಕಾಕ್ಕೆ ಸ್ಥಳಾಂತರ?

ಮುಂಬಯಿ: ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ವೈರಸ್‌ ಪ್ರಕರಣ ಹೆಚ್ಚುತ್ತಲೇ ಇದೆ. ಐಪಿಎಲ್‌ ಸೇರಿದಂತೆ ದೇಶದಲ್ಲಿ ನಡೆಯಬೇಕಿರುವ ಹಲವು ಕ್ರೀಡಾಕೂಟಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯ ವಾಗುತ್ತಿಲ್ಲ. ಈ ಬೆನ್ನಲ್ಲೇ ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯನ್ನು ಈ ಸಲ ಶ್ರೀಲಂಕಾ ಆತಿಥ್ಯದಲ್ಲಿ ಆಯೋಜಿಸುವ ಸಾಧ್ಯತೆ ಯೊಂದು ಕಂಡುಬಂದಿದೆ.

ಈ ಬಗ್ಗೆ ಶ್ರೀಲಂಕಾ ಕಬಡ್ಡಿ ಸಂಸ್ಥೆ ಅಧ್ಯಕ್ಷ ಅನುರ ಪಥಿರಣ ನೀಡಿರುವ ಹೇಳಿಕೆ ಇನ್ನಷ್ಟು ಪುಷ್ಟಿ ನೀಡಿದೆ. ವರ್ಷಾಂತ್ಯದ ಕೂಟವನ್ನು ಲಂಕಾದಲ್ಲಿ ಆಯೋಜಿಸಲು ಸಿದ್ಧವಾಗಿದ್ದೇವೆ. ಇದರಿಂದ ನಮ್ಮಲ್ಲಿ ಕಬಡ್ಡಿ ಕ್ರೀಡೆಯನ್ನು ಜನಪ್ರಿಯಗೊಳಿಸಬಹುದು ಎಂದಿದ್ದಾರೆ.

“ಭಾರತದಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರೊ ಕಬಡ್ಡಿ ಆಯೋಜಿಸುವುದು ಕಷ್ಟ. ಭಾರತ ಒಪ್ಪಿದರೆ ಕೂಟವನ್ನು ನಮ್ಮಲ್ಲಿ ನಡೆಸಬಹುದು, ಅದಕ್ಕೆ ಬೇಕಾಗಿರುವ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ. ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಮಾತನಾಡಿದ್ದೇವೆ. ಅವರು ಈ ವಿಚಾರದಲ್ಲಿ ಆಸಕ್ತಿ ವ್ಯಕ್ತಪಡಿಸಿದ್ದಾರೆ’ ಎಂದು ಅನುರ ಪಥಿರಣ ತಿಳಿಸಿದರು.

ಲಂಕಾದಲ್ಲಿ ಯಶಸ್ವಿಯಾದೀತೇ?
ಶ್ರೀಲಂಕಾದಲ್ಲಿ ಕಬಡ್ಡಿ ನಿಧಾನವಾಗಿ ಬೆಳೆಯುತ್ತಿದೆ. ಮೂಲಗಳ ಪ್ರಕಾರ ಅಲ್ಲಿನ ಹೆಚ್ಚಿನ ಯುವಕರು ಪ್ರೊ ಕಬಡ್ಡಿಯಿಂದ ಆಕರ್ಷಿತರಾಗಿದ್ದಾರೆ. ಅನೇಕ ಪ್ರತಿಭೆಗಳು ಇದರಿಂದ ಉತ್ತೇಜಿತರಾಗಿ ಕಬಡ್ಡಿ ಕಣಕ್ಕೆ ಇಳಿದಿದ್ದಾರೆ.

2019ರಲ್ಲಿ ನಡೆದಿದ್ದ ಪುರುಷರ ದಕ್ಷಿಣ ಏಶ್ಯ ಕ್ರೀಡಾಕೂಟದಲ್ಲಿ ಶ್ರೀಲಂಕಾ ಕಬಡ್ಡಿ ತಂಡ ಮೊದಲ ಸಲ ಫೈನಲ್‌ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿತ್ತು. ಪ್ರಶಸ್ತಿ ಸುತ್ತಿನಲ್ಲಿ ಭಾರತ ತಂಡವನ್ನು ಸೋಲಿಸಲು ಲಂಕಾಕ್ಕೆ ಸಾಧ್ಯವಾಗದಿದ್ದರೂ ಬೆಳ್ಳಿ ಪದಕ ಗೆದ್ದ ಲಂಕಾ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಆ ಬಳಿಕ ಲಂಕಾದಲ್ಲಿ ಕಬಡ್ಡಿ ಅಭಿಮಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿತು.

ಸ್ಥಳಾಂತರ ಅನಿವಾರ್ಯ
ಭಾರತೀಯ ಅಮೆಚೂರ್‌ ಕಬಡ್ಡಿ ಒಕ್ಕೂಟ (ಎಕೆಎಫ್ಐ) ಹಾಗೂ ಕೂಟದ ನೇರ ಪ್ರಸಾರಕರು ಪ್ರಸಕ್ತ ಸಾಲಿನ ಪ್ರೊ ಕಬಡ್ಡಿ ನಡೆಸಲೇಬೇಕೆಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಆದರೆ ಆಟಗಾರರ,ಸಿಬಂದಿ ಹಾಗೂ ವೀಕ್ಷಕರ ಆರೋಗ್ಯ ದೃಷ್ಟಿ ಯಿಂದ ಕೂಟವನ್ನು ಭಾರತದಲ್ಲಿ ಆಯೋಜಿ ಸುವುದು ಕಷ್ಟ ಎನ್ನಲಾಗಿದೆ. ಹೀಗಾಗಿ ಕೂಟವನ್ನು ವಿದೇಶಕ್ಕೆ ವರ್ಗಾಯಿಸುವ ಕುರಿತು ಚರ್ಚೆ ನಡೆದಿದೆ. ಎಪ್ರಿಲ್‌ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಬೇಕಿತ್ತು. ಜುಲೈಯಲ್ಲಿ ಪಂದ್ಯಾವಳಿ ಆರಂಭವಾಗಬೇಕಿತ್ತು.

ಪ್ರೊ ಕಬಡ್ಡಿಯಲ್ಲಿ ಲಂಕಾ ಆಟಗಾರರು
ಶ್ರೀಲಂಕಾದ ಆಟಗಾರರಿಬ್ಬರು ಹಿಂದಿನ ಆವೃತ್ತಿಗಳಲ್ಲಿ ಪ್ರೊ ಕಬಡ್ಡಿ ಲೀಗ್‌ನಲ್ಲಿ ವಿವಿಧ ತಂಡಗಳನ್ನು ಪ್ರತಿನಿಧಿಸಿದ್ದಾರೆ. ರಾಣಿಡು ಚಾಮರ ಯುಪಿ ಯೋಧಾ ತಂಡವನ್ನು ಪ್ರತಿನಿಧಿಸಿದ್ದರೆ, ಮತ್ತೋರ್ವ ಆಟಗಾರ ಮಿಲಿಂದ ಚತುರಂಗ ಜೈಪುರ ಪಿಂಕ್‌ ಪ್ಯಾಂಥರ್ಸ್‌ ಪರ ಆಡಿದ್ದಾರೆ. ಈ ಸಲ ಪಿಕೆಎಲ್‌ ಲಂಕಾದಲ್ಲಿ ನಡೆದದ್ದೇ ಆದರೆ ಅಲ್ಲಿನ ಮತ್ತಷ್ಟು ಆಟಗಾರರು ವಿವಿಧ ತಂಡಗಳಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.