![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 28, 2020, 7:01 AM IST
ತುಮಕೂರು: ಇಂದು ನಮ್ಮ ಬೆಂಗಳೂರು ಇಷ್ಟು ವಿಶಾಲವಾಗಿ ಬೆಳೆಯಲು ತಳಹದಿ ಹಾಕಿದವರೇ ನಾಡಪ್ರಭು ಕೆಂಪೇಗೌಡರು, ಅವರು ಕನ್ನಡ ನಾಡಿನ ಬಗ್ಗೆ ಇಟ್ಟಿದ್ದ ಅಭಿಮಾನ ಮತ್ತು ಜನಾನುರಾಗಿ ವ್ಯಕ್ತಿತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್ 19ನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಏರ್ಪಡಿಸಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರು ಬೆಂಗಳೂರು ಕಟ್ಟಿ ಮುಂದೆ ಈ ನಗರ ಬೆಳೆಯುತ್ತದೆ ಎನ್ನುವ ದೂರದೃಷ್ಟಿ ಹೊಂದಿದ್ದರು. ಅದಕ್ಕೆ ಪೂರಕವಾಗಿ ವ್ಯವಸ್ಥೆ ಮಾಡಿದ್ದಾರೆ.
ಅವರ ಆಡಳಿತದ ಅವಧಿಯಲ್ಲಿ ನೂರಾರು ಕೆರೆಕಟ್ಟೆಗಳನ್ನು ಕಟ್ಟಿಸಿದ್ದಾರೆ. ದೇವಾಲಯಗಳು, ಮಾರುಕಟ್ಟೆ ನಿರ್ಮಾಣಗೊಂಡಿವೆ. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಮಾತನಾಡಿ, ವಿಶ್ವಕ್ಕೆ ಮಾದರಿಯಾಗುವಂತ ನಗರ ನಿರ್ಮಿಸಿ ಕೊಟ್ಟು, 16ನೇ ಶತಮಾನದಲ್ಲೆ ಆಡಳಿತ ಮಾದರಿಯನ್ನು ಅಳವಡಿಸಿಕೊಂಡು ನಗರ ಹಾಗೂ ಕೋಟೆಯನ್ನು ನಿರ್ಮಿಸಿದ ಮಹಾನ್ ವ್ಯಕ್ತಿ, ಅವರು ನಡೆದ ದಾರಿ, ನೀಡಿದ ಕೊಡುಗೆ ನಾಡಿನ ಜನತೆಗೆ ಅವಿಸ್ಮರಣೀಯ ವಾದುದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಬಿ.ಸುರೇಶ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಎಚ್. ಹುಚ್ಚಯ್ಯ, ಉಪ ವಿಭಾಗಾಧಿಕಾರಿ ಅಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಆಪಿನಕಟ್ಟೆ, ಜಿಲ್ಲಾ ಒಕ್ಕಲಿಗರ ಸಂಘದ ಮುಖಂಡರು, ತಾಲೂಕು ಪಂಚಾಯಿತಿ ಸದಸ್ಯರು ಇದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.