![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 29, 2020, 12:26 PM IST
ಆಲಮಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ವಾಡಿಕೆಗಿಂತಲೂ ಮುಂಚೆಯೇ ನದಿಗೆನೀರು ಹರಿದು ಬಂದಿದ್ದು ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ತುಂಬಲು ಇನ್ನು ಕೇವಲ 4 ಮೀ.ಬಾಕಿಯಿದೆ.
ಜಲಾಶಯದಲ್ಲಿ ರವಿವಾರ 515 ಮೀ.ನೀರು ಸಂಗ್ರಹಗೊಂಡಿದೆ. ಗರಿಷ್ಠ 519.6ಮೀ. ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ ಬೆಳಗಿನ ಮಾಹಿತಿಯಂತೆ 515.25ಮೀ. ಎತ್ತರವಾಗಿ 65.439 ಟಿಎಂಸಿ ಅಡಿ ನೀರು ಸಂಗ್ರಹವಾಗಿ ಜಲಾಶಯಕ್ಕೆ 11,997 ಕ್ಯೂಸೆಕ್ ನೀರು ಒಳಹರಿವಿದ್ದು 1130 ಕ್ಯೂಸೆಕ್ ನೀರು ಕುಡಿಯುವ ನೀರು ಸೇರಿ ವಿವಿಧ ಮೂಲಗಳಿಂದ ಹೊರಹರಿವಿದೆ. ಕಳೆದ ವರ್ಷ ಇದೇ ದಿನ 507.95ಮೀ. ಎತ್ತರದಲ್ಲಿ 21.225 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಆಲಮಟ್ಟಿ ಜಲ ವಿದ್ಯುದಾಗಾರದಲ್ಲಿರುವ 55 ಮೆ.ವ್ಯಾ.ನ 5 ಘಟಕ ಹಾಗೂ 15 ಮೆ. ವ್ಯಾ.ನ ಒಂದು ಘಟಕದಿಂದ ಒಟ್ಟು 290 ಮೆ. ವ್ಯಾ.ನ ಘಟಕದ ಆರಂಭಕ್ಕೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಇನ್ನಷ್ಟು ಒಳಹರಿವು ಹೆಚ್ಚಾದರೆ ವಿದ್ಯುತ್ ಉತ್ಪಾದನೆಗೆ ಎಲ್ಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಎಲ್ನ ಮೂಲಗಳಿಂದ ತಿಳಿದು ಬಂದಿದೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.