ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಿದ್ಧತೆ: ನಿರಾಣಿ


Team Udayavani, Jun 30, 2020, 2:46 PM IST

ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಿದ್ಧತೆ: ನಿರಾಣಿ

ಬೀಳಗಿ: ಇಡೀ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ ಹಾಗೂ ರಾಜ್ಯದ ಮೊದಲ ಸಕ್ಕರೆ ಕಾರ್ಖಾನೆ ಹೆಗ್ಗಳಿಕೆ ಹೊಂದಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಷ್ಟದಲ್ಲಿರುವ ಅಲ್ಲಿನ ರೈತರ ಕಣ್ಣೀರೊರೆಸುವ ಪ್ರಾಮಾಣಿಕ ಪ್ರಯತ್ನ ಜನ್ಮಭೂಮಿ ಬೀಳಗಿಯಿಂದ ಆಗುತ್ತಿರುವುದು ನನಗೆ ಹೆಮ್ಮೆಯ ವಿಷಯ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ-ಮೈಸೂರಲ್ಲಿ ಇರುವ 9 ಸಕ್ಕರೆ ಕಾರ್ಖಾನೆಗಳಲ್ಲಿ 6 ಕಾರ್ಖಾನೆಗಳು ತಮಿಳುನಾಡಿನವರ ಒಡೆತನದಲ್ಲಿದ್ದರೆ, ಇನ್ನುಳಿದ ಮೂರು ಕಾರ್ಖಾನೆಗಳು ಬಂದ್‌ ಆಗಿವೆ. ಕಾರಣ, ಸಕ್ಕರೆ ನಾಡು ಖ್ಯಾತಿಯ ಮಂಡ್ಯದಲ್ಲಿ ಪುನಃ ಕಬ್ಬು ಅರೆಯುವ ಮೂಲಕ ಸಕ್ಕರೆ ನಾಡಿನ ಕೀರ್ತಿ ಹೆಚ್ಚಿಸುವ ಆತ್ಮವಿಶ್ವಾಸ ನನಗಿದೆ ಎಂದರು.

ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕ ಎಂಬ ಭೇದ ಮಾಡದೇ ಸಹೋದರತೆ ಭಾವದಿಂದ ಅಖಂಡ ಕರ್ನಾಟಕದ ಅಳಿಲು ಸೇವೆ ಮಾಡುವ ಸದಿಚ್ಛೆ ನನ್ನದಾಗಿದೆ. ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭಿಸುವ ಕುರಿತು ಅಲ್ಲಿನ ಎಲ್ಲ ವರ್ಗದ ಜನಾಭಿಪ್ರಾಯ ಹಾಗೂ ಮಠಾಧೀಶರ ಆಶೀರ್ವಾದ ಪಡೆದುಕೊಂಡಿರುವೆ. ಕಾರ್ಖಾನೆಯ ಕಬ್ಬು ನುರಿಸುವ ಮಹತ್ಕಾರ್ಯಕ್ಕೆ ಅಲ್ಲಿನವರ ಸಂಪೂರ್ಣ ಸಹಕಾರ ಮತ್ತು ಸಲಹೆ ಸಿಕ್ಕಿರುವುದು ಸಂತಸ ತಂದಿದೆ ಎಂದರು.

ಪಕ್ಷಾತೀತ ಮತ್ತು ಜಾತ್ಯತೀತವಾಗಿ ಕರ್ತವ್ಯದ ಕಡೆಗೆ ಗಮನಹರಿಸುವ ಮೂಲಕ ಎಲ್ಲರ ವಿಶ್ವಾಸ ಪಡೆದುಕೊಳ್ಳುವೆ. ಈಗಾಗಲೇ ಕಾರ್ಖಾನೆ ರಿಪೇರಿ ಕೆಲಸ ಆರಂಭವಾಗಿದೆ. ಸದ್ಯ 3500 ಟನ್‌ ಕಬ್ಬು ನುರಿಸುವ ಸಾಮರ್ಥ್ಯ ಹೊಂದಿರುವ ಕಾರ್ಖಾನೆಯ ಅದೇ ಮಷಿನ್‌ಗಳಿಗೆ ಹೊಸ ಸ್ಪರ್ಶ ನೀಡುವ ಮೂಲಕ 4500ರಿಂದ 5000 ಟನ್‌ ಕಬ್ಬು ನುರಿಸುವ ಸಾಮರ್ಥ್ಯಕ್ಕೆ ಕಾರ್ಖಾನೆ ಸಜ್ಜುಗೊಳಿಸುವುದಾಗಿ ತಿಳಿಸಿದರು.

1933ರಲ್ಲಿ ಕರುನಾಡಿನ ಭವಿಷ್ಯಕ್ಕಾಗಿ ಬುನಾದಿ ಹಾಕಿದ ಸಕ್ಕರೆ ಕಾರ್ಖಾನೆ ಪುನರುಜ್ಜೀವನಗೊಳಿಸುವ ಮೂಲಕ ನಾಡಿನ ರೈತರ ಸೇವೆಯ ಸದಾವಕಾಶ ಸದ್ಬಳಕೆ ಮಾಡಿಕೊಳ್ಳುವೆ. ಕೃಷ್ಣೆಯಿಂದ ಕಾವೇರಿಯವರೆಗೆ ಬೀಳಗಿ ನೆಲದ ಹೆಸರು ಬೆಳೆಗಬೇಕು ಹಾಗೂ ಜನಮಾನಸದಲ್ಲಿ ಸದಾಕಾಲ ಉಳಿಯುವಂತಾಗಬೇಕೆನ್ನುವುದೇ ನನ್ನ ಸದಾಶಯವಾಗಿದೆ ಎಂದರು.

ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಸಂಗಪ್ಪ ಕಟಗೇರಿ, ಮಲ್ಲಪ್ಪ ಶಂಭೋಜಿ, ಪಪಂ ಸದಸ್ಯ ವಿಠuಲ ಬಾಗೇವಾಡಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.