ಬೆಂಗಳೂರು ಪ್ರಯಾಣ ರದ್ದು : ಮಾತಿನ ಚಕಮಕಿ


Team Udayavani, Jul 1, 2020, 2:55 PM IST

01-July-24

ಮುದ್ದೇಬಿಹಾಳ: ಬಸ್‌ ಎದುರು ವಾಗ್ವಾದ ನಿರತರಾಗಿರುವ ಬಸ್‌ನ ಸಿಬ್ಬಂದಿ, ಪ್ರಯಾಣಿಕರು

ಮುದ್ದೇಬಿಹಾಳ: ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯಲು ನಿರಾಕರಿಸಿ, ಬಲವಂತ ಹೆಚ್ಚಾದಾಗ ಘಟಕ ವ್ಯವಸ್ಥಾಪಕನ ಸೂಚನೆ ಮೇರೆಗೆ ಸಾರಿಗೆ ಸಂಸ್ಥೆಯ ಬಸ್ಸನ್ನೇ ಇಲ್ಲಿನ ಪೊಲೀಸ್‌ ಠಾಣೆಗೆ ತಂದು ನಿಲ್ಲಿಸಿದ ಘಟನೆ ಮಂಗಳವಾರ ರಾತ್ರಿ ಇಲ್ಲಿ ನಡೆದಿದೆ.

ಬಸವನ ಬಾಗೇವಾಡಿ- ಬೆಂಗಳೂರು ಬಸ್‌ ಇಲ್ಲಿನ ಬಸ್‌ ನಿಲ್ದಾಣಕ್ಕೆ ಸಂಜೆ 6ಕ್ಕೆ ಬಂದಿತ್ತು. ನಾಲತವಾಡದ ಒಬ್ಬ ಮಹಿಳೆ ಸೇರಿ ವಿವಿಧೆಡೆಯಿಂದ ಆಗಮಿಸಿದ್ದ 5-6 ಪ್ರಯಾಣಿಕರು ಬೆಂಗಳೂರಿಗೆ ಹೊರಡಲು ಏರಿದ್ದರು. ಕಡಿಮೆ ಪ್ರಯಾಣಿಕರಿರುವುದನ್ನು ಅರಿತ ಚಾಲಕ, ನಿರ್ವಾಹಕರು ಬೆಂಗಳೂರಿಗೆ ಬಸ್‌ ಬಿಡಲು ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ.

ವಿಷಯ ತಿಳಿದ ಬಸವನಬಾಗೇವಾಡಿ ಘಟಕ ವ್ಯವಸ್ಥಾಪಕರು ಆದಾಯ ಬರುವುದಿಲ್ಲವಾದ್ದರಿಂದ ಬಸ್‌ ಓಡಿಸುವುದಿಲ್ಲ ಎಂದು ಹೇಳಿದ್ದಾರೆ. ಒತ್ತಡ ಹೆಚ್ಚಾದಾಗ ಬಸ್‌ನ್ನು ಪೊಲೀಸ್‌ ಠಾಣೆಗೆ ಒಯ್ದು ನಿಲ್ಲಿಸುವಂತೆ ಘಟಕ ವ್ಯವಸ್ಥಾಪಕರು ಚಾಲಕನಿಗೆ ಸೂಚಿಸಿದ್ದಾರೆ. ಅವರು ಹೇಳಿದಂತೆ ಚಾಲಕ ನಡೆದುಕೊಂಡಿದ್ದಾನೆ.

ಪ್ರಯಾಣಿಕರು ಪೊಲೀಸರಿಗೆ ತಿಳಿಸಿದರೂ, ಶಾಸಕರ ಬಳಿ ಹೋಗಿ ಅಳಲು ತೋಡಿಕೊಂಡರೂ ಪ್ರಯೋಜನ ಆಗಲಿಲ್ಲ. ಕೊನೆಗೆ ನಾಲತವಾಡದ ಮಹಿಳೆ ನಮ್ಮೂರಿಗೆ ಮರಳಿ ಹೋಗಲು ಬಸ್‌ ಇಲ್ಲ. ಈಗ ನಾನೇನು ಮಾಡಬೇಕು ಎಂದು ರಂಪಾಟ ಮಾಡಿದರೂ ಪ್ರಯೋಜನ ಕಂಡುಬರಲಿಲ್ಲ. ಬಸ್‌ ಚಾಲಕ, ನಿರ್ವಾಹಕರು ಮರಳಿ ಬಸ್‌ನ್ನು ತಮ್ಮ ಘಟಕದತ್ತ ಚಲಾಯಿಸಿಕೊಂಡು ಹೋಗುವ ಮೂಲಕ ಇಡಿ ಘಟನೆ ಗೊಂದಲದಲ್ಲೇ ಮುಗಿಯಿತು. ಪ್ರಯಾಣಿಕರು ಯಥೇತ್ಛವಾಗಿ ಶಾಪ ಹಾಕಿ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.