ಕುರುಗೋಡಲ್ಲಿ ಕೋವಿಡ್ ಪ್ರಕರಣ ಪತ್ತೆ: ಆತಂಕ
Team Udayavani, Jul 1, 2020, 12:05 PM IST
ಕುರುಗೋಡು: 7ನೇ ವಾರ್ಡಿನ ನಿವಾಸಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.
ಕುರುಗೋಡು: ಪಟ್ಟಣದ 7ನೇ ವಾರ್ಡಿನ ನಿವಾಸಿ 56 ವರ್ಷದ ಮಹಿಳೆಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ. ಪಟ್ಟಣದಲ್ಲಿ ಮೊದಲನೇ ಪ್ರಕರಣ ದೃಢವಾಗಿರುವುದರಿಂದ ಕುರುಗೋಡಿನ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ನಾಲ್ಕು ದಿನದ ಹಿಂದೆ ಚಿಕಿತ್ಸೆ ಪಡೆಯಲು ಬಳ್ಳಾರಿ ಆಸ್ಪತ್ರೆಗೆ ದಾಖಾಲಾಗಿದ್ದಳು. ಅಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗಿದ್ದು ಪಾಸಿಟಿವ್ ಇರುವುದು ಕಂಡುಬಂದಿದೆ.
ಕೋವಿಡ್ ಸೋಂಕಿತ ಮಹಿಳೆಯನ್ನು ಪಟ್ಟಣದ ಬಸ್ ಡಿಪೋದ ಹಿಂದುಗಡೆಯಿರುವ ಮನೆಯಿಂದ ಬಳ್ಳಾರಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಯಿತು. ಸೋಂಕಿತ ಮಹಿಳೆಯ ಮನೆಯಲ್ಲಿರುವ 10 ಜನರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ತಾಲೂಕು ಆಡಳಿತ 7ನೇ ವಾರ್ಡ್ನನ್ನು ಕಂಟೈನ್ಮೆಂಟ್ ಪ್ರದೇಶವನ್ನಾಗಿಸಿ ಬ್ಯಾರಿಕೇಡ್ ಅಳವಡಿಸಿ ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಗ್ರೇಡ್ 1 ತಹಶೀಲ್ದಾರ್ ಕೆ.ರಾಘವೇಂದ್ರ ರಾವ್, ಗ್ರೇಡ್ 2 ತಹಶೀಲ್ದಾರ್ ಮಲ್ಲೇಶಪ್ಪ, ಹಿರಿಯ ಆರೋಗ್ಯ ಸಹಾಯಕ ಕೆ. ಮಂಜುನಾಥ, ಕಂದಾಯ ನಿರೀಕ್ಷಕ ಬಸಲಿಂಗಪ್ಪ, ಆರ್.ಆರ್.ಟಿ ತಂಡ ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
MUST WATCH
ಹೊಸ ಸೇರ್ಪಡೆ
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?
Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ
ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!
ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.