![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 2, 2020, 5:02 AM IST
ಕೊಲಂಬೊ: 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ “ಫಿಕ್ಸಿಂಗ್ ಪ್ರಕರಣ’ವನ್ನು ಶ್ರೀಲಂಕಾ ಸರಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ವಿಚಾರಣೆ ತೀವ್ರಗೊಂಡಿದೆ. ಅಂದಿನ ಶ್ರೀಲಂಕಾ ಕ್ರಿಕೆಟ್ ಆಯ್ಕೆ ಸಮಿತಿ ಅಧ್ಯಕ್ಷ ಅರವಿಂದ ಡಿ ಸಿಲ್ವ ಅವರನ್ನು ಪೊಲೀಸರು ಸತತ 6 ಗಂಟೆಗಳ ವಿಚಾರಣೆ ನಡೆಸಿದ್ದಾರೆ.
ವಿಶೇಷ ಪೊಲೀಸ್ ತನಿಖಾ ದಳ ಅರವಿಂದ ಡಿ ಸಿಲ್ವ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತು. ಬಳಿಕ ಅಂದಿನ ನಾಯಕ ಕುಮಾರ ಸಂಗಕ್ಕರ ಅವರಲ್ಲಿ ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ. ಸಂಗಕ್ಕರ ಗುರುವಾರ ಬೆಳಗ್ಗೆ 9 ಗಂಟೆಗೆ ತನಿಖಾ ಆಯೋಗದ ಮುಂದೆ ಹಾಜರಾಗಲಿದ್ದಾರೆ.
ಮುಂದಿನ ವಿಚಾರಣೆಯ ಸರದಿ, 2011ರ ಫೈನಲ್ ಪಂದ್ಯದ ಆರಂಭಿಕನಾಗಿದ್ದ ಉಪುಲ್ ತರಂಗ ಅವರದದ್ದು ಎನ್ನಲಾಗಿದೆ.
ಈ ಪಂದ್ಯವನ್ನು ಶ್ರೀಲಂಕಾ ಭಾರತಕ್ಕೆ ಬಿಟ್ಟುಕೊಟ್ಟಿತ್ತು ಎಂಬ ಲಂಕೆಯ ಅಂದಿನ ಕ್ರೀಡಾ ಸಚಿವ ಮಹಿಂದಾನಂದ ಅಲುತಗಾಮಗೆ ಅವರ ಸ್ಫೋಟಕ ಆರೋಪಕ್ಕೆ ಅರವಿಂದ ಡಿ ಸಿಲ್ವ ಖಾರವಾಗಿ ಪ್ರತಿಕ್ರಿಯಿಸಿದ್ದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ, ಬಿಸಿಸಿಐ ಮತ್ತು ಐಸಿಸಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಅಂಕಣವೊಂದರಲ್ಲಿ ಬರೆದಿದ್ದರು. ಬಳಿಕ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.