![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 3, 2020, 1:34 PM IST
ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚುತ್ತಿದೆ. ಸೋಂಕು ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ. ಸೋಂಕು ನಿಯಂತ್ರಣಕ್ಕೆ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಆದರೆ ಸ್ವೇಚ್ಛಾಚಾರದ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಹ ಸೋಂಕಿತರ ಸಂಖ್ತೆ ಹೆಚ್ಚುತ್ತಿದ್ದು, ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ. ಶೇ.95ಜನ ಮಾಸ್ಕ್ ಧರಿಸುತ್ತಿದ್ದಾರೆ. ಆದರೆ ಗುಂಪು ಸೇರುವುದು, ಸಾಮಾಜಿಕ ಅಂತರ ಪಾಲಿಸದೇ ಇರುವ ದೃಶ್ಯ ಸಾಮಾನ್ಯವಾಗಿದೆ.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳ ಹಿನ್ನಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆ ಕರೆಯಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಗೆ 60 ಸಂಸ್ಥೆಗಳ ಪ್ರತಿನಿಧಿಗಳು ಬರಲಿದ್ದಾರೆ. ಲಾಕ್ ಡೌನ್ ಅಥವ ಇನ್ನಿತರ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಲಾಕ್ ಡೌನ್ ಬೇಕು- ಬೇಡಗಳ ಬಗ್ಗೆ ಜನರೇ ನಿರ್ಧರಿಸಲಿ ಎಂದರು.
ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಕ್ಕೂ ಕೋವಿಡ್-19 ಸೋಂಕು ಹರಡುತ್ತಿರುವುದು ಆತಂಕಕಾರಿ. ಶಿವಮೊಗ್ಗದಲ್ಲಿ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ 150 ಬೆಡ್ ವ್ಯವಸ್ಥೆ ಇದೆ. ಹೆಚ್ಚುವರಿಯಾಗಿ ಗಾಜನೂರು ಮೊರಾರ್ಜಿ ಶಾಲೆಯಲ್ಲಿ 190 ಬೆಡ್, ಭದ್ರಾವತಿಯಲ್ಲಿ 50 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.