![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 5, 2020, 6:17 AM IST
ಹೊಸದಿಲ್ಲಿ: ಕೋವಿಡ್ ಲಸಿಕೆ “ಕೊವಾಕ್ಸಿನ್’ (covaxin)ಅನ್ನು ಆ.15ರ ಒಳಗಾಗಿ ಕ್ಲಿನಿಕಲ್ ಟ್ರಯಲ್ ನಡೆಸಿ ಬಳಕೆಗೆ ಬಿಡುಗಡೆ ಮಾಡಬೇಕು ಎಂಬ ನಿರ್ದೇಶನವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಮರ್ಥನೆ ನೀಡಿದೆ.
ಸ್ವಾತಂತ್ರ್ಯ ದಿನದಂದೇ ಲಸಿಕೆ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಈ ನಿರ್ದೇಶನ ನೀಡಲಾಗಿದೆ ಎಂಬ ಆರೋಪಗಳ ನಡುವೆಯೇ, ಈ ಬೆಳವಣಿಗೆ ನಡೆದಿದೆ. “ಜನರ ಆರೋಗ್ಯ ಸಂರಕ್ಷಣೆಯ ನಿಟ್ಟಿನಲ್ಲಿ ದೇಶಿಯವಾಗಿಯೇ ಲಸಿಕೆ ಕಂಡುಹಿಡಿದು ಅದನ್ನು ಜನರ ಉಪಯೋಗಕ್ಕೆ ಬಿಡುಗಡೆ ಮಾಡುವುದು ಉದ್ದೇಶ. ಜಗತ್ತಿನ ಇತರ ರಾಷ್ಟ್ರಗಳಲ್ಲಿ ಕೂಡ ಇದೇ ರೀತಿ ಶೀಘ್ರವಾಗಿ ಪ್ರಯೋಗಕ್ಕೆ ಒಳಪಡಿಸಲು ಸೂಚನೆ ಇದೆ’ ಎಂದು ಸ್ಪಷ್ಟನೆ ನೀಡಿದೆ.
ಕರ್ನಾಟಕದ ಬೆಳಗಾವಿಯಲ್ಲಿನ ಜೀವನರೇಖಾ ಆಸ್ಪತ್ರೆ ಸೇರಿದಂತೆ ಒಟ್ಟು 12 ಸಂಸ್ಥೆಗಳಿಗೆ ಶೀಘ್ರ ಲಸಿಕೆ ಪ್ರಯೋಗಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ.
ಕಾಂಗ್ರೆಸ್ ನಾಯಕ, ಮಹಾರಾಷ್ಟ್ರ ಕಂದಾಯ ಸಚಿವ ಅಶೋಕ್ ಚವಾಣ್ ಪ್ರತಿಕ್ರಿಯೆ ನೀಡಿ, ಪ್ರಧಾನಿಯವರು ಆ.15ರಂದು ಕೆಂಪು ಕೋಟೆಯಿಂದ ಭಾಷಣ ಮಾಡುವ ವೇಳೆ ದೊಡ್ಡ ಘೋಷಣೆ ಮಾಡುವ ನಿಟ್ಟಿನಲ್ಲಿಯೇ ಈ ದಿನಾಂಕ ನಿಗದಿ ಮಾಡಲಾಗಿದೆ ಎಂದು ದೂರಿದ್ದಾರೆ.
ಮತ್ತೊಂದೆಡೆ, ಕ್ಷಿಪ್ರ ಗತಿಯಲ್ಲಿ ಸೋಂಕು ಪತ್ತೆ ಕಿಟ್ಗೆ ಸಂಬಂಧಿಸಿದಂತೆ ಭಾರತ ಮತ್ತು ದಕ್ಷಿಣ ಕೊರಿಯಾ ಸಹಭಾಗಿತ್ವದ 14 ಕಂಪನಿಗಳ ಪೈಕಿ ಒಂದು ಸಂಸ್ಥೆಗೆ ಮಾತ್ರ ಐಸಿಎಂಆರ್ ಅನುಮತಿ ನೀಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.