ಹೋರಾಟ ನಿರತರಿಂದ ಬೀದಿ ನಾಟಕ ಪ್ರದರ್ಶನ
Team Udayavani, Jul 8, 2020, 10:58 AM IST
ದಾವಣಗೆರೆ: ಕಳೆದ 16 ತಿಂಗಳನಿಂದ ಬಾಕಿ ಇರುವ ಶಿಷ್ಯವೇತನಕ್ಕೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಗೃಹ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ “ಸರ್ಕಾರಕ್ಕೆ ಚೆಲ್ಲಾಟ, ವೈದ್ಯರಿಗೆ ಪ್ರಾಣಸಂಕಟ’ ಎಂಬ ಬೀದಿ ನಾಟಕದ ಮೂಲಕ ಸಮಸ್ಯೆಗಳನ್ನು ಎಳೆಎಳೆಯಾಗಿ ತೆರೆದಿಟ್ಟರು.
“ಸರ್ಕಾರಕ್ಕೆ ಚೆಲ್ಲಾಟ, ವೈದ್ಯರಿಗೆ ಪ್ರಾಣಸಂಕಟ’ ಎನ್ನುವ ಶೀರ್ಷಿಕೆಗೆ ಅನುಗುಣವಾಗಿ ಡಾಕ್ಟರ್ ಕಲಿಸಲು ಹಂಬಲಿಸುವ ಬಡ ತಂದೆ-ತಾಯಿ, ಆದಕ್ಕಾಗಿ ಮಾಡುವ ಸಾಲ, ಸರ್ಕಾರಿ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿ ಸಕಾಲದಲ್ಲಿ ಶಿಷ್ಯವೇತನ ದೊರೆಯದೆ ಪಡುವ ಪಡಿಪಾಟಲು, ಒಂದೊತ್ತಿನ ತಿಂಡಿಗೂ ನಡೆಸುವ ಹೆಣಗಾಟಸೇರಿದಂತೆ ಪ್ರತಿಯೊಂದು ಮಜಲಿನ ದರ್ಶನದ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಡಾ| ಗಾಯನ ಮತ್ತು ತಂಡದವರು ಮನಮುಟ್ಟುವಂತೆ ನಾಟಕವನ್ನು ಕಟ್ಟಿ ಕೊಟ್ಟರು. ನಾಟಕದ ಜೀವಾಳವಾಗಿ ಡಾ| ನಿಧಿ ನಿರೂಪಣೆ ಇತ್ತು. ಬೀದಿನಾಟಕ ಪ್ರದರ್ಶನದ ನಂತರ ಹೋರಾಟ ನಿರತರು ಚೀನಾ ವಿರುದ್ಧ ಹೋರಾಡುತ್ತಿರುವ ಯೋಧರಿಗೆ ಬ್ಯಾನರ್ ಮೂಲಕ ನಮನ ಸಲ್ಲಿಸಿದರು.
ರಾಷ್ಟ್ರಗೀತೆ ಹಾಡಿದರು. ಗಾಲ್ವಾನ್ ಕಣಿವೆಯಲ್ಲಿ ಹೋರಾಡುತ್ತಿರುವ ನಿಜವಾದ ಯೋಧರು ಸ್ಪೂರ್ತಿ. ಸೈನಿಕರು ಪ್ರಾಣವನ್ನೇ ಪಣಕಿಟ್ಟು ಹೋರಾಡುತ್ತಿದ್ದಾರೆ. ನಾವೂ ಸಹ ನಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟದ ಜೊತೆ ಜೊತೆಗೆ ಕೋವಿಡ್-19 ವಿರುದ್ಧ ಹೋರಾಡುತ್ತಿದ್ದೇವೆ ಎಂದು ಡಾ| ರಾಹುಲ್ ತಿಳಿಸಿದರು. ಆದಷ್ಟು ಬೇಗ ಶಿಷ್ಯವೇತನದ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.