![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 8, 2020, 5:54 PM IST
ಕೆಂಭಾವಿ: ತೈಲ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಕೆಂಭಾವಿ: ತೈಲ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿ ಅವರಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಾಮನರಾವ ದೇಶಪಾಂಡೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸತತವಾಗಿ ತೈಲ ಏರಿಸುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ ಎಂದು ದೂರಿದರು. ಕಳೆದ ಮೂರು ತಿಂಗಳಲ್ಲಿ ಲಾಕ್ ಡೌನ್ನಿಂದಾಗಿ ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಚಿಂಚೋಳಿ, ಪುರಸಭೆ ಮಾಜಿ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ರಹೆಮಾನ್ ಪಟೇಲ್ ಯಲಗೋಡ, ಸಾಹೇಬಲಾಲ ಆಂದೇಲಿ, ರಂಗಪ್ಪ ವಡ್ಡರ, ಕುಮಾರ ಭೋವಿ, ಗೌಡಪ್ಪಗೌಡ, ಮುತ್ತುಗೌಡ, ಶಾಂತಗೌಡ ಇದ್ದರು.
You seem to have an Ad Blocker on.
To continue reading, please turn it off or whitelist Udayavani.