ಸೋಂಕಿತರ ಸಂಚಾರಕ್ಕೆ 500 ವಾಹನ


Team Udayavani, Jul 9, 2020, 5:46 AM IST

onkitara-sanchara

ಬೆಂಗಳೂರು: ಕೋವಿಡ್‌ ಸೋಂಕಿತರ ಸುಗಮ ಓಡಾಟಕ್ಕೆ ಆ್ಯಂಬುಲೆನ್ಸ್‌ ಸೇರಿದಂತೆ ಸದ್ಯ 400 ವಾಹನಗಳಿದ್ದು, ಒಟ್ಟು 500 ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಮುಖ್ಯಮಂತ್ರಿ  ಬಿ.ಎಸ್‌.ಯಡಿಯೂರಪ್ಪ ಅವರು “ಕಾವೇರಿ’ ನಿವಾಸದಲ್ಲಿ ಬುಧವಾರ ಬೆಳಗ್ಗೆ ನಡೆಸಿದ ತುರ್ತು ಸಭೆ ಬಳಿಕ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ನೂತನವಾಗಿ 10,000 ಹಾಸಿಗೆ ವ್ಯವಸ್ಥೆ ಅಳವಡಿಸಲಾಗುತ್ತಿ ದ್ದು, ಮುಖ್ಯಮಂತ್ರಿಗಳು ಗುರುವಾರ ಪರಿಶೀಲಿಸಲಿದ್ದಾರೆ. ಮೂಲ ಸೌಕರ್ಯದ ಜತೆಗೆ ನಿರ್ವಹಣೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 2000 ಹಾಸಿಗೆ   ಗಳಿದ್ದು ನಿತ್ಯ 200- 300 ಮಂದಿ ದಾಖಲಾಗುತ್ತಿ  ದ್ದಾರೆ. ಸರಿಸುಮಾರು ಅಷ್ಟೇ ಸಂಖ್ಯೆಯ ಜನ ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದರು.

ತಪ್ಪು ಅರ್ಥ ಬೇಡ: ಕೋವಿಡ್‌ ಕೇರ್‌ ಸೆಂಟರ್‌ಗೆ ಹೋಗುವವರಿಗೆ ಆ್ಯಂಬುಲೆನ್ಸ್‌  ಅಗತ್ಯವಿಲ್ಲ. ರೋಗ ಲಕ್ಷಣವಿಲ್ಲದವರು ಯಾವುದೇ ವಾಹನದಲ್ಲಾದರೂ ಹೋಗಬಹುದು. ಇದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳುವುದು ಬೇಡ. ಆ್ಯಂಬುಲೆನ್ಸ್‌ ಲಭ್ಯತೆ ಇಲ್ಲ ಎಂಬ ಕಾರಣಕ್ಕೆ ಬೇರೆ ವಾಹನ ಮಾಡುತ್ತಿಲ್ಲ. ಬದಲಿಗೆ  ರೋಗ ಲಕ್ಷಣವಿಲ್ಲದವರಿಗೆ ಆ್ಯಂಬುಲೆನ್ಸ್‌ ಅಗತ್ಯವಿಲ್ಲ ಎಂಬ ಕಾರಣಕ್ಕೆ ಬೇರೆ ವಾಹನ ಕಳುಹಿಸಲಾಗಿದೆ ಎಂದರು.

ಸದ್ಯ ಬೆಂಗಳೂರಿನಲ್ಲಿ 400 ಆ್ಯಂಬುಲೆನ್ಸ್‌ ಇತರೆ ವಾಹನಗಳಿದ್ದು, ಇನ್ನೂ 100 ವಾಹನ ಸೇರ್ಪಡೆ ಮಾಡಿ ಒಟ್ಟು 500  ವಾಹನ ವ್ಯವಸ್ಥೆ ಕಲ್ಪಿಸಲಾಗುವುದು. ಈ ಮಾಹಿತಿಯನ್ನು ಎರಡೇ ದಿನದಲ್ಲಿ ಬಿಬಿಎಂಪಿ ವಾರ್‌ರೂಮ್‌ಗೆ ಅಳವಡಿಸಲಾಗುವು ದು. ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕೂಡಲೇ ಬಿಬಿಎಂಪಿ ವಾರ್‌ ರೂಮ್‌ನಿಂದ ದೂರವಾಣಿ ಕರೆ  ಹೋಗಲಿದೆ. ಇಷ್ಟು ಹೊತ್ತಿಗೆ ವಾಹನ ಬರಲಿದೆ ಎಂಬ ಮಾಹಿತಿ ನೀಡಿ ನಂತರ ಅವರನ್ನು ಆಸ್ಪತ್ರೆ ಇಲ್ಲವೇ ಕೋವಿಡ್‌ ಕೇರ್‌ ಸೆಂಟÃಗೆ ದಾಖಲಿಸುವ ವ್ಯವಸ್ಥೆ ವೈಜ್ಞಾನಿಕವಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

1000 ವೈದ್ಯರ  ಅಗತ್ಯ: ಮುಖ್ಯಮಂತ್ರಿಗಳು ಕೋವಿಡ್‌ ಚಿಕಿತ್ಸೆಗೆ ಉತ್ತಮ ಸೌಲಭ್ಯವನ್ನು ವ್ಯವಸ್ಥಿತವಾಗಿ ರೂಪಿಸುವಂತೆ ಸೂಚಿಸಿದ್ದಾರೆ. ಬಿಐಇಸಿಯಲ್ಲಿ 10,000 ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಆದರೆ ಅಲ್ಲಿ 10,000 ಸೋಂಕಿತರು ಇರುವುದಿಲ್ಲ.  ಆದರೆ 100 ರೋಗಿ ಗಳಿಗೆ ಒಬ್ಬ ವೈದ್ಯರಿರಬೇಕಿದ್ದು, ಅದರಂತೆ 1000 ವೈದ್ಯರು ಬೇಕಾಗುತ್ತಾರೆ. ಪಾಳಿಯಲ್ಲಿ ಕಾರ್ಯ ನಿರ್ವಹಣೆಗೆ ಒಟ್ಟು 1,500 ಮಂದಿ ಅಗತ್ಯವಿದೆ ಎಂದು ಹೇಳಿದರು.

ಇತರೆ ಜಿಲ್ಲೆಗಳಿಗೆ  ಹೋಗುತ್ತಿರುವವರ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ನಮ್ಮದು ಸೋಂಕಿನ ವಿರುದ್ಧ ಹೋರಾಟವೇ ಹೊರತು ಸೋಂಕಿತರ ವಿರುದ್ಧವಲ್ಲ. ಈ ಸೋಂಕು ಗುಣಮುಖವಾಗದ ಸೋಂಕೆ? ಇದು ಸಾಮಾನ್ಯ  ಸೋಂಕು ಎಂದರು. ನವೆಂಬರ್‌ ಹೊತ್ತಿಗೆ ಬೆಂಗಳೂರಿನಲ್ಲಿ ಸೋಂಕು ಲಕ್ಷ ದಾಟುವ ಸಾಧ್ಯತೆ ಇದೆ ಎಂಬ ಮಾತಿಗೆ ಉತ್ತರಿಸಿದ ಸುಧಾಕರ್‌, ಅಧಿಕಾರಿಗಳ ಮಟ್ಟದಲ್ಲಿ ಸೋಂಕು ಹೆಚ್ಚಳ ಪ್ರಮಾಣ ಗೊತ್ತಾಗುವುದಿಲ್ಲ. ಪರಿಣಿತರು ಸೋಂಕು  ಹೆಚ್ಚಳದ ಬಗ್ಗೆ ನಿಯಮಿತವಾಗಿ ಸಲಹೆ ನೀಡುತ್ತಾರೆ. ಪರಿಣಿತರೊಂದಿಗೆ ಸಮಾಲೋಚನೆ ನಡೆಸುತ್ತಿದೆ. ಅದರ ಆಧಾರದ ಮೇಲೆ ಸರ್ಕಾರ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಕೇಂದ್ರಗಳಲ್ಲಿ 50ಸಾವಿರ ರೋಗಿಗಳಿಗೆ ಚಿಕಿತ್ಸೆ: ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ 50,000 ರೋಗಿಗಳಿಗೆ ಚಿಕಿತ್ಸೆ ಕೊಡಲು ಸಿದ್ಧತೆ ನಡೆದಿದೆ. ರಾತ್ರೋರಾತಿ ಯಾವುದೂ ಆಗುವುದಿಲ್ಲ. ಎಲ್ಲದಕ್ಕೂ ಸಮಯ ಬೇಕಾಗುತ್ತದೆ.ಸುಮಾರು 60  ಗರ್ಭಿಣಿಯರನ್ನು ಬೇರೆ ಬೇರೆ ಆಸ್ಪತ್ರೆಗಳಿಂದ ವಾಣಿ ವಿಲಾಸ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಹೆರಿಗೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮೂರು ಆಸ್ಪತ್ರೆಗಳನ್ನು ಮೀಸಲಿರಿಸಲಾಗುತ್ತಿದೆ. ಒಟ್ಟು 150 ಹಾಸಿಗೆ  ಇರುವ ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್‌ 19 ಇರುವವರಿಗೂ ವಿಶೇಷವಾಗಿ ಹೆರಿಗೆ ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತಿ ದೆ ಎಂದು ತಿಳಿಸಿದರು.

ರೊಬೋಟ್‌ ಮೂಲಕ ಸೋಂಕಿತರ ಆರೈಕೆ: ಜಯದೇವ ಆಸ್ಪತ್ರೆ ನಿರ್ದೇಶಕ ಹಾಗೂ ಕೋವಿಡ್‌ 19 ನಿಯಂತ್ರಣ ಪಡೆ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ಮಾತನಾಡಿ, ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ  ಮಾಡಿರುವ 10 ಸಾವಿರ ಹಾಸಿಗೆಯ ಕೋವಿಡ್‌ 19 ಸೋಂಕಿತರ ಆರೈಕೆ ಕೇಂದ್ರದಲ್ಲಿ ರೊಬೋಟ್‌ ಮೂಲಕ ನಿತ್ಯ ಸೋಂಕಿತರ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ವೈದ್ಯರ ರೀತಿಯಲ್ಲೇ ರೊಬೋಟ್‌ ಪ್ರತಿ ಸೋಂಕಿತರ ಬಳಿಯೂ  ಹೋಗಿ ಮಾತನಾಡಿ ಆರೋಗ್ಯದ ಬಗ್ಗೆ ತಿಳಿಯುತ್ತದೆ. ಇದನ್ನು ತಜ್ಞ ವೈದ್ಯರು ದೂರದಿಂದಲೇ ಮಾನಿಟರ್‌ ಮಾಡುತ್ತಿರುತ್ತಾರೆ. ಇದರಿಂದ ತಜ್ಞ ವೈದ್ಯರು ಸೋಂಕಿಗೆ ಒಳಗಾಗುವ ಸಾಧ್ಯತೆಯೂ ಕಡಿಮೆ ಯಾಗುತ್ತದೆ.  ಸೋಂಕಿತರು ಹೆಚ್ಚಾದರೂ ಸುಲಭವಾಗಿ ಆರೈಕೆ ಮಾಡಬಹುದು ಎಂದರು.

6000 ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ: ನಗರದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಕೋವಿಡ್‌ 19 ಚಿಕಿತ್ಸೆಗೆ ಹೆಚ್ಚುವರಿ 6,000 ಹಾಸಿಗೆಗಳನ್ನು ಮೀಸ ಲಿಡಲು ಖಾಸಗಿ ಆಸ್ಪತ್ರೆಗಳು  ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, 6,000 ದಿಂದ 7,000 ಹಾಸಿಗೆಗಳನ್ನು ತಮ್ಮದೇ ಆದ ಕೋವಿಡ್‌ ಕೇರ್‌ ಸೆಂಟರ್‌ ಮತ್ತು ಆಸ್ಪತ್ರೆಗಳಲ್ಲಿ  ಮೀಸಲಿ ಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎಂದರು.

ವೈದ್ಯರು ಕೋವಿಡ್‌ 19ಗೆ ಭಯಪಡ ಬೇಕಿಲ್ಲ. ನನ್ನ ಕುಟುಂಬದಲ್ಲೇ ಮೂವರಿಗೆ ಸೋಂಕು ತಗುಲಿತ್ತು. ಆದರೂ ನಾನು ಹೆದರಲಿಲ್ಲ. ಇದೇನು ಗುಣವಾಗದ ಕಾಯಿಲೆಯಲ್ಲ. ವೈದ್ಯರಿಗೆ ನಾನೇ ಬ್ರ್ಯಾಂಡ್‌ ಅಂಬಾಸಿಡರ್‌. ನಾನು  ವೈದ್ಯನಾಗಿ ಹೆದರಲಿಲ್ಲ. ವೈದ್ಯರು ಹೆದರದೆ ಕರ್ತವ್ಯದಲ್ಲಿ ಧೈರ್ಯವಾಗಿ ತೊಡಗಿಸಿಕೊಳ್ಳಬೇಕು.
-ಡಾ.ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.