ವಸತಿ ರಹಿತರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ


Team Udayavani, Jul 11, 2020, 6:41 AM IST

asati-rahita

ತುಮಕೂರು: ನಗರದಲ್ಲಿ ನಿವೇಶನ, ವಸತಿ ಇಲ್ಲದವರಿಗೆ ಸರ್ವರಿಗೂ ಸೂರು ಯೋಜನೆಯಲ್ಲಿ ವಸತಿ ನೀಡಲು ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲೇ ಸುದ್ದಿ ನೀಡಲಾಗು ವುದು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಹೇಳಿದರು.

ಇಲ್ಲಿಯ ನಗರ ವಂಚಿತ ಯುವ ಜನ ಸಂಪನ್ಮೂಲ ಕೇಂದ್ರದಲ್ಲಿ ಶುಕ್ರವಾರ ಜಿಲ್ಲಾ ಕೊಳಗೇರಿ ನಿವಾಸಿಗಳ ಸಮಿತಿ ಮತ್ತು ನಮ್ಮ ಮನೆ ಹಕ್ಕು ಹೋರಾಟ ಸಮಿತಿ ಪದಾಧಿಕಾರಿ ಗಳೊಂದಿಗೆ ನಿವೇಶನ, ವಸತಿ ರಹಿತರ ಬೇಡಿಕೆಗಳ ಕುರಿತು  ನಡೆದ ಸಭೆಯಲ್ಲಿ ಮಾತ ನಾಡಿ, ನಗರದಲ್ಲಿ ನಡೆದಿರುವ 2018ರ ಬೇಡಿಕೆ ಸಮೀಕ್ಷೆಯನ್ವಯ 22 ಸಾವಿರ ವಸತಿ ರಹಿತರು ಇದ್ದಾರೆ, ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ವಸತಿ ರಹಿತರು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಭೂಮಿ ಗುರುತಿಸಿ: ನಗರದಲ್ಲಿ 1994ರಲ್ಲಿ ನಿವೇಶನ ಹಂಚಿಕೆ ಮಾಡಿದ್ದು ಬಿಟ್ಟರೆ, ನಂತರ ನಗರದಲ್ಲಿ ಯಾವುದೇ ನಿವೇಶನಗಳ ಹಂಚಿಕೆ ಸಾಧ್ಯವಾಗಿಲ್ಲ, ಹಾಗಾಗಿ ಇಲ್ಲಿಯ ಉಪ ವಿಭಾ ಗಾಧಿಕಾರಿ ಮತ್ತು ತಹಶೀಲ್ದಾರ್‌ಗೆ ಸರ್ಕಾರಿ ಭೂಮಿಗಳನ್ನು ಗುರುತಿಸಿ ನೀಡುವಂತೆ  ಸೂಚಿಸ ಲಾಗಿದೆ ಭೂಮಿಯನ್ನು ಗುರುತಿಸಿದ ಮೇಲೆ ನಿವೇಶನ, ವಸತಿ ರಹಿತರಿಗೆ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮನೆಗಳ ಮಂಜೂರಾತಿ: ವಸತಿ ಇಲ್ಲದವರೊಂದಿಗೆ ಶಾಸಕರು ಸಮಾಲೋಚನೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾಗ ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ನಗರಕ್ಕೆ ಸೇರಿರುವ ವಿವಿಧ  ಕಸಬಾ ಸರ್ವೆ ನಂಬರ್‌ ಗಳಲ್ಲಿ ಲಭ್ಯವಿರುವ ಸರ್ಕಾರಿ ಭೂ ಮಿಗಳ ವಿವಿರದ ಬಗ್ಗೆ ತಿಳಿಸಿ, ತಮ್ಮ ಅಧಿಕಾರವಧಿ ಯಲ್ಲಿ 5 ಸಾವಿರ ನಿವೇಶನ ರಹಿತರಿಗೆ ಸೈಟು ಮತ್ತು ವಸತಿಗಳಿಲ್ಲದ 10 ಸಾವಿರ ಬಡಕುಟುಂಬಗಳಿಗೆ ಪ್ರಧಾನ ಮಂತ್ರಿ  ಆವಾಸ್‌ ಯೋಜನೆಯಲ್ಲಿ ಮನೆಗಳ ಮಂಜೂರಾತಿ ಪಡೆಯುವಂತೆ ಕೋರಿದ್ದರು.

ಶೀಘ್ರದಲ್ಲೇ ಸಿಹಿ ಸುದ್ದಿ: ಇದಕ್ಕೆ ಪ್ರತಿಕ್ರಿಯಿಸಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಈ ಸಂಬಂಧ ವಾಗಿ ಈಗಾಗಲೇ ವಸತಿ ಸಚಿವ ವಿ. ಸೋಮಣ್ಣರೊಂದಿಗೆ ಸಮಾಲೋಚಿಸಿದ್ದು ಶೀಘ್ರದಲ್ಲಿ ನಗರದ ವಸತಿ ರಹಿತರಿಗೆ ಸಿಹಿ ಸುದ್ದಿ ನೀಡಲಾಗುವುದು  ಎಂದರು.

ಪ್ರತಿಯೊಬ್ಬರಿಗೂ ಸೂರು: ಈ ಹಿಂದೆ ನಡೆಸಿರುವ ಸಮೀಕ್ಷೆಯಲ್ಲಿ ಮತ್ತು ಅರ್ಜಿ ಸಲ್ಲಿಸಿರುವವರಲ್ಲಿ ಮನೆ ಇರುವವರು ಅರ್ಜಿ ಸಲ್ಲಿಸಿರುವ ಗುಮಾನಿ ಇದ್ದು ಪುನರ್‌ ಸಮೀಕ್ಷೆಗೆ ಸರ್ಕಾರವನ್ನು ಕೋರಲಾಗಿದೆ, ಸೂರು ಇಲ್ಲದ  ಪ್ರತಿಯೊಬ್ಬರಿಗೂ ಸೂರು ದೊರಕಬೇಕು ಎನ್ನುವುದೇ ಸರ್ಕಾರದ ಆಶಯ ಎಂದರು. ಜಿಲ್ಲಾ ಕೊಳಗೇರಿ ನಿವಾಸಿಗಳ ಸಂಘದ ಪದಾಧಿಕಾರಿಗಳಾದ ದೀಪಿಕಾ, ಕಣ್ಣನ್‌, ಅರುಣ್‌, ಚಕ್ರಪಾಣಿ, ಶಂಕರಯ್ಯ, ಮಂಜಮ್ಮ, ಮೊಹಮ್ಮದ್‌ ಹಯತ್‌,  ರಂಗನಾಥ್‌, ರಜಿಯಾಬಿ, ತಿರುಮಲಯ್ಯ, ಗಂಗಮ್ಮ, ಮಾರಿಮುತ್ತು, ಕೃಷ್ಣ, ವಿಶ್ವನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.