ಬೆಂಗಳೂರಲ್ಲಿ ಸ್ವಪ್ನಾ ಪತ್ತೆಯಾಗಿದ್ದು ಹೇಗೆ?


Team Udayavani, Jul 13, 2020, 11:18 AM IST

ಬೆಂಗಳೂರಲ್ಲಿ ಸ್ವಪ್ನಾ ಪತ್ತೆಯಾಗಿದ್ದು ಹೇಗೆ?

ಪಾಲಕ್ಕಾಡ್‌/ಕೊಚ್ಚಿ: ತೀವ್ರ ಕುತೂಹಲ ಕೆರಳಿಸಿದ್ದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳಾದ ಸ್ವಪ್ನಾ ಹಾಗೂ ಸಂದೀಪ್‌ ಪತ್ತೆಯಾಗಿದ್ದರ ಹಿಂದೆ ಎರಡು ಕುತೂಹಲಕಾರಿ ಕಥೆಗಳಿವೆ.

ಜು. 4ರಂದು ಪ್ರಕರಣ ಹೊರಬರುತ್ತಲೇ ನಾಪತ್ತೆ ಯಾಗಿದ್ದ ಸ್ವಪ್ನಾ ಸುರೇಶ್‌ ಹಾಗೂ ಸಂದೀಪ್‌ ಬಂಧನ ಕ್ಕೊಳಗಾಗಿರುವುದು ಜು. 11ರ ರಾತ್ರಿ 7 ಗಂಟೆಗೆ. ಆರಂಭದಲ್ಲಿ ಅನೇಕ ತನಿಖಾಧಿಕಾರಿಗಳು ಸ್ವಪ್ನಾ ಹಾಗೂ ಸಂದೀಪ್‌ ಕೇರಳದ ಕೊಚ್ಚಿಯಲ್ಲೇ ಇರಬಹುದು ಎಂದು ಶಂಕಿಸಿದ್ದರು. ಆದರೆ ಕೆಲವರು ಮಾತ್ರ ಅವರಿ ಬ್ಬರೂ ಹೊರರಾಜ್ಯಗಳಿಗೆ ಪಲಾಯನ ಮಾಡಿರಬ ಹುದು ಎಂದು ಊಹಿಸಿದ್ದರು. ಕೊನೆಗೆ ಆ ಊಹೆಯೇ ನಿಜವಾಯಿತು. ಅಷ್ಟಕ್ಕೂ ಅವರಿಬ್ಬರೂ ಪತ್ತೆಯಾಗಿದ್ದೇ ಒಂದು ಕುತೂಹಲಕಾರಿ ಕಥೆ.

ಇದೇ ಪ್ರಕರಣದ ಬೆನ್ನು ಹತ್ತಿದ್ದ ಕಸ್ಟಮ್ಸ್‌ ಅಧಿಕಾರಿ ಗಳು, ಜು. 10ರಂದು ಸಂದೀಪ್‌ನ ಸಹೋದರನ ಮನೆಯ ಮೇಲೆ ದಾಳಿ ನಡೆಸಿದ್ದರು. ಅದೇ ಸಮಯ ದಲ್ಲಿ ಸಂದೀಪ್‌ ಸಹೋದರನ ಮೊಬೈಲಿಗೆ, ಆ ಮೊಬೈಲಿನಲ್ಲಿ ಸೇವ್‌ ಆಗಿರದ ಸಂಖ್ಯೆಯೊಂದರಿಂದ ಫೋನ್‌ ಕರೆ ಬಂದಿತ್ತು. ಆ ಕರೆಯನ್ನು ಅಧಿಕಾರಿಗಳೇ ಸ್ವೀಕರಿಸಿದ್ದರು. ಆ ಕರೆಯ ತನಿಖೆ ನಡೆಸಿದಾಗ ಅದು ಸಂದೀಪ್‌ನದ್ದೇ ಕರೆ ಎಂಬುದು ಗೊತ್ತಾಗಿತ್ತು. ಆಗ ಆ ಕರೆಯ ಜಾಡು ಹಿಡಿದ ಅಧಿಕಾರಿಗಳಿಗೆ ಸಂದೀಪ್‌ ಬೆಂಗಳೂರಿನಲ್ಲಿ ಇರುವುದು ತಿಳಿದುಬಂದಿತ್ತು.

ಇನ್ನು ಸ್ವಪ್ನಾ ಅವರು ಬೆಂಗಳೂರಿನಲ್ಲೇ ಇರುವುದು ತಿಳಿದಿದ್ದು ಹೇಗೆಂದರೆ ವಾರದಿಂದ ಸ್ವಿಚ್‌ ಆಫ್ ಆಗಿದ್ದ ಸ್ವಪ್ನಾರ ಮೊಬೈಲನ್ನು ಶನಿವಾರ ಅಪರಾಹ್ನ ಆಕೆಯ ಮಗಳು ಆನ್‌ ಮಾಡಿದ್ದಳು. ಆಗ ಸಿಗ್ನಲ್‌ ಕ್ಯಾಚ್‌ ಆದ ಕೂಡಲೇ ಅದರ ಲೊಕೇಶನ್‌ ವಿವರಗಳನ್ನು ಎನ್‌ಐಎ ಅಧಿಕಾರಿಗಳು ಹೈದರಾಬಾದ್‌ನಲ್ಲಿರುವ ತಮ್ಮ ವಿಭಾಗಕ್ಕೆ ತಲುಪಿಸಿದರು. ತತ್‌ಕ್ಷಣವೇ ಕಾರ್ಯೋನ್ಮು ಖರಾದ ಅಧಿಕಾರಿಗಳ ತಂಡ, ಬೆಂಗಳೂರಿಗೆ ಬಂದು ಆಕೆಯನ್ನು ವಶಕ್ಕೆ ಪಡೆಯಿತು.

ಕೇರಳಕ್ಕೆ ಬಂದ ಆರೋಪಿಗಳು: ಆರೋಪಿಗಳನ್ನು ವಶಕ್ಕೆ ಪಡೆದ ಅನಂತರ ಕೇರಳಕ್ಕೆ ಪ್ರಯಾಣಿಸಿದ್ದ ಎನ್‌ಐಎ ವಾಹನಗಳು, ರವಿವಾರ ಬೆಳಗ್ಗೆ 11 ಗಂಟೆಗೆ ಕೇರಳ ಗಡಿಯನ್ನು ಪ್ರವೇಶಿಸಿ ದವು. ಕೇರಳ ಗಡಿ ದಾಟುತ್ತಲೇ ಕೆಲವು ಜಾಗಗಳಲ್ಲಿ ಕೇರಳ ಕಾಂಗ್ರೆಸ್‌ ಕಾರ್ಯಕರ್ತರು, ದಾರಿಯ ಇಕ್ಕೆಲಗಳಲ್ಲಿ ಪ್ರತಿಭಟನ ಘೋಷಣೆ ಕೂಗಿದರು. ಅಪರಾಹ್ನ ಆರೋಪಿಗಳನ್ನು ಅಲುವಾದಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅವರ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಅನಂತರ ಎನ್‌ಐಎ ಕಚೇರಿಯಲ್ಲಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಯಿತು. ವಿಶೇಷ ಕೋರ್ಟ್‌ ಮುಂದೆ ಹಾಜರುಪಡಿಸಿದಾಗ ಹತ್ತು ದಿನಗಳ ಕಾಲ ವಶಕ್ಕೆ ಒಪ್ಪಿಸಬೇಕೆಂದು ಎನ್‌ಐಎ ಮನವಿ ಮಾಡಿತು. ಕೋರ್ಟ್‌ ಅವರಿಬ್ಬರನ್ನು ಮೂರು ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿತು. ಸೋಮವಾರ ಮತ್ತೆ ವಿಚಾರಣೆ ಮುಂದುವರಿಯಲಿದೆ. ಸ್ವಪ್ನಾ ಸುರೇಶ್‌ಳನ್ನು ಕೊರೊನಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

ಪಂಕ್ಚರ್‌: ಆರಂಭದಲ್ಲಿ ಸ್ವಪ್ನಾ ಸುರೇಶ್‌ ಹಾಗೂ ಸಂದೀಪ್‌ ಅವರನ್ನು ಪ್ರತ್ಯೇಕ ಕಾರುಗಳಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೆ ತೃಶೂರ್‌ ಜಿಲ್ಲೆಯ ಗಡಿ ದಾಟಿದ ಅನಂತರ ವಡಕ್ಕ ಚೇರಿ ಬಳಿ ಸಂದೀಪ್‌ ಹಾಗೂ ಇನ್ನಿತರ ಅಧಿಕಾರಿಗಳು ಇದ್ದ ಕಾರಿನ ಚಕ್ರ ವೊಂದು ಪಂಕ್ಚರ್‌ ಆಯಿತು. ಆಗ ಕಾರು ನಿಲ್ಲಿಸಿದ ಅಧಿಕಾರಿಗಳು ಸಂದೀಪ್‌ನನ್ನು ಸ್ವಪ್ನಾ ಇದ್ದ ಕಾರಿನಲ್ಲಿ ಹತ್ತಿಸಿ ಪ್ರಯಾಣ ಮುಂದುವರಿಸಿದರು.

ಬೆಂಗಳೂರಿಗೆ ಹೇಗೆ ಹೋದರು?
ಇವರು ತಿರುವನಂತಪುರದಲ್ಲಿ ತ್ರಿಬಲ್‌ ಲಾಕ್‌ಡೌನ್‌ ಇದ್ದಾಗಲೂ ಹೇಗೆ ತಪ್ಪಿಸಿಕೊಂಡು ಬೆಂಗ ಳೂರಿಗೆ ಹೋದರು ಎನ್ನುವುದು ಚರ್ಚೆಯ ವಿಷಯವಾಗಿದೆ. ಎನ್‌ಐಎ ಅಧಿಕಾರಿಗಳ ಪ್ರಕಾರ, ರಸ್ತೆ ಮಾರ್ಗದಲ್ಲಿ ಬಂದಿರಬಹುದು ಎನ್ನಲಾಗಿದೆ. ಬೆಂಗಳೂರಿನಿಂದ ನಾಗಾಲ್ಯಾಂಡ್‌ಗೆ ತಪ್ಪಿಸಿಕೊಂಡು ಹೋಗುವ ಸಂಚು ಇವರದ್ದಾಗಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.