![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 15, 2020, 10:42 AM IST
ವಾಡಿ: ಜಿಲ್ಲಾಡಳಿತ ಘೋಷಿಸಿದ ಲಾಕ್ಡೌನ್ ಆದೇಶ ಸಿಮೆಂಟ್ ನಗರಿಯ ಜನರಲ್ಲಿ ಗೊಂದಲ ಉಂಟುಮಾಡಿದ್ದರಿಂದ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಪರದಾಡಿದ ಪ್ರಸಂಗ ನಡೆಯಿತು.
ಪತ್ರಿಕೆಗಳಲ್ಲಿ ಜು.14 ಸಂಜೆ 8 ರಿಂದ ಲಾಕ್ ಡೌನ್ ಜಾರಿಯಾಗಲಿದೆ ಎಂದು ಪ್ರಕಟವಾಗಿದ್ದರೆ, ಪೊಲೀಸರು ಮತ್ತು ಪುರಸಭೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯೇ ನಗರದ ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾದ ಪ್ರಸಂಗ ನಡೆಯಿತು. ಇದರಿಂದ ಹೋಟೆಲ್, ಖಾನಾವಳಿ, ತರಕಾರಿ, ಕಿರಾಣಿ, ಸಿಮೆಂಟ್ ಅಂಗಡಿಗಳು ಸೇರಿದಂತೆ ಇತರ ವ್ಯಾಪಾರಿಗಳು ಗೊಂದಲಕ್ಕೆ ಇಡಾದರು. ಲಾಕ್ಡೌನ್ ಆದೇಶ ಸರಿಯಾಗಿ ಅರ್ಥವಾಗದ ಕಾರಣ ಮಂಗಳವಾರ ಪಟ್ಟಣದಲ್ಲಿ ಸಹವಾಗಿ ವ್ಯಾಪಾರ, ವಹಿವಾಟು ಶುರುವಾಗಿತ್ತು. ಲಾಟಿ ಹಿಡಿದು ಬಂದ ಪೊಲೀಸರು ವ್ಯಾಪಾರಾ ಸ್ಥಗಿತಗೊಳಿಸುವಂತೆ ತಿಳಿಸಿದರು.
ಪೌರಕಾರ್ಮಿಕರು ಧ್ವನಿವರ್ಧಕದ ಮೂಲಕ ಅಂಗಡಿಗಳು ಬಂದ್ ಮಾಡುವಂತೆ ಪ್ರಚಾರ ನಡೆಸಿದರು. ಇದು ವ್ಯಾಪಾರಿಗಳು ಕೆರಳುವಂತೆ ಮಾಡಿತು. ಸೋಮವಾರವೇ ನಮಗೆ ಮಾಹಿತಿ ನೀಡಿದ್ದರೆ ಮಂಗಳವಾರ ಅಂಗಡಿ ತೆರೆಯುತ್ತಿರಲಿಲ್ಲ. ಆಹಾರ ಪದಾರ್ಥಗಳು ಸಿದ್ಧಪಡಿಸಿದ ಬಳಿಕ ಬಂದ್ ಎಂದರೆ ನಷ್ಟ ಭರಿಸುವವರು ಯಾರು ಎಂದು ಪ್ರಶ್ನಿಸಿದರು. ತರಕಾರಿ, ಹಣ್ಣು, ಹಾಲು, ಕಿರಾಣಿ, ಔಷಧ ಅಂಗಡಿ ಹಾಗೂ ಆಸ್ಪತ್ರೆಗಳಿಗೆ ಲಾಕ್ಡೌನ್ ನಿಯಮ ಅನ್ವಹಿಸುವುದಿಲ್ಲ. ಹೋಟೆಲ್, ಮಾಂಸ ವ್ಯಾಪಾರ ಸೇರಿದಂತೆ ಇತರ ಎಲ್ಲಾ ವ್ಯಾಪಾರಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ. ಖಾನಾವಳಿಗಳಿಂದ ಪಾರ್ಸಲ್ ವಿತರಣೆಗೆ ಅವಕಾಶವಿದೆ.
ಗುರುವಾರದ ವಾರದ ಸಂತೆ ಇರುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರಿ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.