ಕಳಪೆ ಕಾಮಗಾರಿಗೆ ಕೋಟ್ಯಂತರ ರೂ.ನಷ್ಟ


Team Udayavani, Jul 18, 2020, 8:39 AM IST

ಕಳಪೆ ಕಾಮಗಾರಿಗೆ ಕೋಟ್ಯಂತರ ರೂ.ನಷ್ಟ

ಮಾಗಡಿ: ತಾಲೂಕಿನಲ್ಲಿ ನಿರ್ಮಿಸಿರುವ ಬಹುತೇಕ ಚೆಕ್‌ ಡ್ಯಾಂಗಳು ಚರಂಡಿಯಂತಿವೆ ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಣ್ಣ ನೀರಾವರಿ ಇಲಾಖೆಯವರು ನಿರ್ಮಿಸಿರುವ ಬಹುತೇಕ ಚೆಕ್‌ ಡ್ಯಾಂಗಳು ಚರಂಡಿಗಳಂತಿವೆ. ಅಧಿಕಾರಿಗಳು ಸ್ಥಳ ಪರಿಶೀಲಿಸದೇ, ಕಚೇರಿಯಲ್ಲಿ ಕುಳಿತು ಯೋಜನೆ ಸಿದ್ಧಪಡಿಸಿ, ಚರಂಡಿಗಳ ರೀತಿ ಯಲ್ಲಿ ಚೆಕ್‌ ಡ್ಯಾಂ ನಿರ್ಮಿಸಿದರೆ ಉಪ ಯೋಗವಾಗು ದಿಲ್ಲ. ಜೊತೆಗೆ ಕಳಪೆ ಕಾಮ ಗಾರಿಯಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಈ ಸಂಬಂಧ ಸಮಿತಿ ಒಳಗೊಂಡಂತೆ ಚೆಕ್‌ ಡ್ಯಾಂಗಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಕೆಆರ್‌ಡಿಎಲ್‌ ನವರು ಇದೇ ರೀತಿ ಕಳಪೆ ಕಾಮಗಾರಿ ನಡೆ ಸಿದ್ದು, ಕನಿಷ್ಠ ಪಕ್ಷ ಬೋರ್ಡ್‌ ಹಾಕಿರುವುದಿಲ್ಲ ಎಂದು ಆರೋಪಿಸಿದರು.

ಸಮನ್ವಯತೆ ಕಾಪಾಡಿ: ತಾಲೂಕಿನ ಬಹು ತೇಕ ಗ್ರಾಪಂ ಆಡಳಿತ ಮಂಡಳಿ ಅವಧಿ ಮುಗಿದಿದ್ದು, ಆಡಳಿತಾಧಿಕಾರಿಗಳ ನೇಮಕ ಮಾಡಲಾಗಿದೆ. ಪಂಚಾಯಿತಿ ಪಿಡಿಒಗಳು ಆಡಳಿತಾಧಿಕಾರಿಗಳೊಂದಿಗೆ ಸಮನ್ವಯ ಕಾಪಾ ಡಿಕೊಂಡು, ಸರ್ವ ತೋಮುಖ ಅಭಿವೃದ್ಧಿಗೆ ಸಹಕರಿಸಬೇಕು. ಪ್ರತಿ ಪಂಚಾಯಿತಿ ಫ‌ಲಕದಲ್ಲಿ ಆಡಳಿತಾಧಿಕಾರಿಗಳ ಹೆಸರು, ಮೊಬೈಲ್‌ ನಂಬರ್‌ ಪ್ರಕಟಿಸಬೇಕು. ಅವರಿಗಾಗಿ ಪ್ರತ್ಯೇಕ ಕಚೇರಿ ಸಿದ್ಧಪಡಿಸಿರಬೇಕು. ಹೊಸ ನೇಮಕಾತಿ ಮಾಡುವಂತಿಲ್ಲ. ಅಭಿವೃದ್ಧಿ ವಿಚಾರ ಹಣಕಾಸಿನ ವ್ಯವಹಾರ ಜಂಟಿಯಾಗಿಯೇ ನಡೆಸಬೇಕು. ಪಿಡಿಒಗಳು ಕ್ರಿಯಾ ಯೋಜನೆ ಸಿದ್ಧ ಪಡಿಸಿ, ಅಡಳಿತಾಧಿಕಾರಿ ಗಳ ಅನುಮೋದನೆ ಪಡೆದು ಕೆಲಸ ಮಾಡಬೇಕು. ರೆಕಾರ್ಡ್‌ಗಳನ್ನು ಸಮರ್ಪಕ ವಾಗಿ ನಿರ್ವಹಿಸ ಬೇಕು. ಗ್ರಾಪಂ ಸ್ವತ್ತು ರಕ್ಷಿಸ ಬೇಕು ಎಂದು ತಾಪಂ ಸಿಇಒ ಟಿ.ಪ್ರದೀಪ್‌, ಪಿಡಿಒಗಳಿಗೆ ಆದೇಶಿಸಿದರು.

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಿ: ನಗರ ಪ್ರದೇಶದಿಂದ ಗ್ರಾಮಗಳಿಗೂ ಕೋವಿಡ್ ಒಕ್ಕರಿಸಿದ್ದು, ತಾಲೂಕಿನ ಎಲ್ಲ ಗ್ರಾಪಂ ಪಿಡಿಒ ಗಳು ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಬೇಕು. ಗ್ರಾಮದ ಸಮಸ್ಯೆಗಳಿಗೆ ಪಿಡಿಒಗಳು ಸ್ಪಂದಿಸ ಬೇಕು. ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮುಂಗಾರು ಮಳೆಯಾಗುತ್ತಿದ್ದು, ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳಾದ ಚಿಕನ್‌ಗೂನ್ಯ, ಡೆಂಗ್ಯೂ, ಎಚ್‌1ಎನ್‌1 ಹರಡುವ ಸಾಧ್ಯತೆ ಇರುವುದರಿಂದ ಗ್ರಾಮದಲ್ಲಿ ಚರಂಡಿಗಳಿಗೆ ಸಿಂಪಡಣೆ ಮಾಡ ಬೇಕು ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ಅಂಬಿಕಾ, ಸದಸ್ಯ ಎಂ. ಎಚ್‌. ಸುರೇಶ್‌, ಕೆ.ಎಚ್‌.ಶಿವರಾಜು, ಧನಂಜಯ ನಾಯಕ್‌, ನರಸಿಂಹ ಮೂರ್ತಿ, ಹನುಮೇಗೌಡ, ಶಿವಮ್ಮ, ಸುಮಾ ರಮೇಶ್‌, ದಿವ್ಯಾರಾಣಿ, ಅಧಿಕಾರಿಗಳಾದ ನಾಗರಾಜು, ಶಿವ ಶಂಕರ್‌, ಚಿದಾನಂದ್‌, ರಂಗನಾಥ್‌, ಜನಾರ್ಧನ್‌, ಕುಮಾರಸ್ವಾಮಿ ಹಾಗೂ ಬಹುತೇಕ ಎಲ್ಲ ಪಂಚಾಯಿತಿ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.