ಕೋವಿಡ್ 19ನಿಂದ ತಿರುಮಲ ತಿರುಪತಿ ದೇವಳದ ಮಾಜಿ ಪ್ರಧಾನ ಅರ್ಚಕ ಸಾವು

ಕಳೆದ ಮೂರು ದಶಕಗಳಿಂದ ತಿರುಪತಿ ಬಾಲಾಜಿಗೆ ವಂಶಪಾರಂಪರ್ಯವಾಗಿ ನಾಲ್ಕು ಕುಟುಂಬಸ್ಥರಿಂದ ಪೂಜೆ

Team Udayavani, Jul 20, 2020, 5:14 PM IST

ಕೋವಿಡ್ 19ನಿಂದ ತಿರುಮಲ ತಿರುಪತಿ ದೇವಳದ ಮಾಜಿ ಪ್ರಧಾನ ಅರ್ಚಕ ಸಾವು

ಹೈದರಾಬಾದ್:ಪುರಾಣ ಪ್ರಸಿದ್ಧ ತಿರುಮಲ ತಿರುಪತಿ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಲ್ಲೊಬ್ಬರಾದ ಪೆದ್ದಿಂಟಿ ಶ್ರೀನಿವಾಸಮೂರ್ತಿ ದೀಕ್ಷಿತುಲು(80ವರ್ಷ) ಅವರು ಸೋಮವಾರ ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ತಿರುಪತಿ ಎಸ್ ವಿಐಎಂಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.

ಕಳೆದ ಮೂರು ದಶಕಗಳಿಂದ ತಿರುಪತಿ ಬಾಲಾಜಿಗೆ ವಂಶಪಾರಂಪರ್ಯವಾಗಿ ನಾಲ್ಕು ಕುಟುಂಬಸ್ಥರಾದ 1)ಗೋಲ್ಲಾಪಲ್ಲಿ 2)ಪೈದಿಪಲ್ಲಿ 3)ತಿರುಪತಮ್ಮಾ 4)ಪೆದ್ದಿಂಟಿ ಕುಟುಂಬಸ್ಥರು ಪುರೋಹಿತರಾಗಿ ಪೂಜೆ ನೆರವೇರಿಸುತ್ತಿದ್ದರು. ಇದರಲ್ಲಿ ದೀಕ್ಷಿತುಲುಜೀ ಕೂಡಾ ಪೆದ್ದಿಂಟಿಯ ಪ್ರತಿನಿಧಿಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಶ್ರೀನಿವಾಸಮೂರ್ತಿ ಅವರು ಬ್ರಹ್ಮೋತ್ಸವ ಕಾನ್ಕಾನಾ ಭಟ್ಟರ್ ಸೇವೆ ಸಲ್ಲಿಸಿದ್ದರು.(ಪವಿತ್ರ ಜನಿವಾರ ಧರಿಸಿ 9 ದಿನಗಳ ಕಾಲ ನಡೆಯುವ ವಾರ್ಷಿಕ ಉತ್ಸವದ ಪೂಜೆ) ಅಲ್ಲದೇ ವೆಂಕಟೇಶ್ವರನಿಗೆ ಜಲಾಭಿಷೇಕ ಮಾಡುವುದು ಕೂಡಾ ಸೇರಿದೆ. ದೀಕ್ಷಿತುಲುಜೀ ಅವರು ವೈಖಾನ ಆಗಮ ಸಂಪ್ರದಾಯಸ್ಥರು. ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಗೆ ಈ ಸಂಪ್ರದಾಯದ ಪುರೋಹಿತರು ಮಾತ್ರವೇ ಪೂಜೆ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ ಎಂದು ವರದಿ ವಿವರಿಸಿದೆ.

ಕೋವಿಡ್ 19 ವೈರಸ್ ನಿಂದ ವಿಧಿವಶರಾದ ಹಿನ್ನೆಲೆಯಲ್ಲಿ ದೀಕ್ಷಿತುಲು ಅವರ ಶವವನ್ನು ಕೂಡಾ ಕುಟುಂಬಸ್ಥರಿಗೆ ಹಸ್ತಾಂತರಿಸಿಲ್ಲ ಎಂದು ಮೂಲಗಳು ತಿಳಿಸಿವೆ. ದೀಕ್ಷಿತುಲುಜೀ ನಿಧನಕ್ಕೆ ಟಿಟಿಡಿ ಟ್ರಸ್ಟ್ ನ ಮಾಜಿ ಅಧ್ಯಕ್ಷ ಬಿ.ಕರುಣಾಕರ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.