![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 21, 2020, 6:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಂಡನ್: ಕೋವಿಡ್ 19 ಲಸಿಕೆ ಸಂಶೋಧನೆಯಲ್ಲಿ ಜಗತ್ತಿನ ಗಮನ ಸೆಳೆದಿದ್ದ ಆಕ್ಸ್ ಫರ್ಡ್ ವಿವಿ ಲಸಿಕೆಯ ಆರಂಭಿಕ 2 ಹಂತದ ಪ್ರಯೋಗ ಫಲಿತಾಂಶಗಳು ಭರವಸೆ ಹೆಚ್ಚಿಸಿವೆ.
ಆಕ್ಸ್ಫರ್ಡ್ ತಜ್ಞರು ಶೋಧಿಸಿದ ‘ಎಝೆಡ್ಡಿ1222’ ಪಡೆದ ಹಲವರಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ.
ಯಾವುದೇ ಅಡ್ಡ ಪರಿಣಾಮ ನೀಡದೆ ಲಸಿಕೆ ಸೋಂಕಿತನ ದೇಹದಲ್ಲಿ ಕೆಲಸ ಮಾಡಿದೆ.
ಕೋವಿಡ್ 19 ವಿರುದ್ಧ ಪ್ರಬಲವಾಗಿ ಹೋರಾಡುವ ಟಿ-ಸೆಲ್ ರೋಗ ನಿರೋಧಕಗಳನ್ನು ಹೆಚ್ಚಿಸುವಲ್ಲಿ ಸಫಲವಾಗಿದೆ.
‘ಲಸಿಕೆ ದೀರ್ಘಕಾಲದವರೆಗೆ ರೋಗನಿರೋಧಕ ಶಕ್ತಿಯನ್ನು ರಕ್ಷಿಸುತ್ತದೆ. ಆದಾಗ್ಯೂ ಲಸಿಕೆ ಬಗ್ಗೆ ಹೆಚ್ಚಿನ ಸಂಶೋಧನೆಗೆ ಕಾಲಾವಕಾಶ ಬೇಕಿದೆ’ ಎಂದು ವಿವಿ ತಜ್ಞ ಆ್ಯಂಡ್ರೂ ಪೊಲಾರ್ಡ್ ಹೇಳಿದ್ದಾರೆ.
ಟೆಸ್ಟ್ ಯಶಸ್ವಿ
ಇಂಗ್ಲೆಂಡ್ನ ಸಂಸ್ಥೆ ಸೋಂಕಿತರ ಮೇಲೆ ನಡೆಸಿದ ಪ್ರೊಟೀನ್ ಆಧಾರಿತ ಚಿಕಿತ್ಸೆ ಪ್ರಯೋಗ ಪರೀಕ್ಷೆ ಸಫಲತೆ ಕಂಡಿದೆ. ಎಸ್ಎನ್ಜಿ-0001 ಸೂತ್ರೀ ಕರಣದ ಇಂಟರ್ಫೆರಾನ್ ಬೇಟಾ ಎಂಬ ಪ್ರೊಟೀನನ್ನು ಬಳಸಿ ಈ ಚಿಕಿತ್ಸೆ ನೀಡಲಾಗುತ್ತದೆ. 9 ಆಸ್ಪತ್ರೆಗಳಲ್ಲಿ ಉಸಿರಾಟದ ವೇಳೆ ಆಮ್ಲಜನಕದ ಕೊರತೆ ಅನುಭವಿಸಿದ್ದ 101 ಸೋಂಕಿತ ಪ್ರತಿನಿಧಿಗಳಿಗೆ ಪ್ರೊಟೀನ್ ಲಸಿಕೆ ನೀಡಲಾಗಿತ್ತು. ಅದರಲ್ಲಿ ಸರಿಸುಮಾರು ಅರ್ಧದಷ್ಟು ಮಂದಿ ಚೇತರಿಸಿಕೊಂಡಿದ್ದಾರೆ.
ಕೊವ್ಯಾಕ್ಸಿನ್ ಮಾನವ ಪ್ರಯೋಗ ಶೀಘ್ರ
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಆವಿಷ್ಕರಿಸಿದ ‘ಕೊವ್ಯಾಕ್ಸಿನ್’ ಅನ್ನು ಮಾನವನ ಮೇಲೆ ಪ್ರಯೋಗಿಸಲು ಸಂಸ್ಥೆ ಮುಂದಾಗಿದೆ. ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಈ ವಾರ ಕೊವ್ಯಾಕ್ಸಿನ್ ಮಾನವ ಪರೀಕ್ಷೆ ಆರಂಭಗೊಳ್ಳಲಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.