ಎನ್ಎನ್-32 ದುರಂತಕ್ಕೆ 4 ವರ್ಷ: ನಮ್ಮೂರು ವೀರಯೋಧ ಏಕನಾಥ ಶೆಟ್ಟಿ ನೆನಪು ಅಮರ


Team Udayavani, Jul 23, 2020, 2:53 PM IST

ಎನ್ಎನ್-32 ದುರಂತಕ್ಕೆ 4 ವರ್ಷ: ನಮ್ಮೂರು ವೀರಯೋಧ ಏಕನಾಥ ಶೆಟ್ಟಿ ನೆನಪು ಅಮರ

ಬೆಳ್ತಂಗಡಿ: ಚೆನೈ ತಾಂಬರಂ ವಾಯುನೆಲೆಯಿಂದ ಅಂಡಮಾನ್ ನಿಕೋಬರ್ ನ ಪೋರ್ಟ್‌ ಬ್ಲೇರ್ ಗೆ ಜು.22 ರಂದು ಪ್ರಯಾಣಿಸುತ್ತಿದ್ದ ಎಎನ್- 32 ಯುದ್ಧ ವಿಮಾನ ಬಂಗಾಲಕೊಲ್ಲಿ‌ ಸಮುದ್ರದಲ್ಲಿ ಸಂಪರ್ಕ ಕಡಿತಗೊಂಡು ಬುಧವಾರಕ್ಕೆ ನಾಲ್ಕು ವರ್ಷ ಸಂದಿದೆ.

ಸೇವೆಯ ನಿಮಿತ್ತ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ‌ ಸೇರಿ 29 ಜನ ಭಾರತೀಯ ಸೈನಿಕರು ಇಂದಿಗೂ ಕಣ್ಮರೆಯಾಗಿಯೇ ಉಳಿದಿದ್ದಾರೆ. ಏಕನಾಥ ಶೆಟ್ಟಿ ಬರುವಿಕೆಯ‌ ನಿರೀಕ್ಷೆಯಲಿರುವ ಕುಟುಂಬ ಸದಸ್ಯರು ಅನಾಥ ಭಾವದಲಿ ಮರುಗುತ್ತಿದ್ದಾರೆ.

ವಾಯು ಪಡೆ‌ ಇತಿಹಾಸದಲ್ಲೇ ಕರಾಳದಿನ
ವಿಮಾನವೊಂದು ನಾಪತ್ತೆಯಾಗಿ ಕಿಂಚಿತ್ತು ಕುರಿಹು ಪತ್ತೆಯಾಗದಿರುವುದು ಭಾರತೀಯ ವಾಯುಪಡೆ‌ ಇತಿಹಾಸದಲ್ಲೆ ಮೊದಲ ಕರಾಳ ನೆನಪಾಗಿದೆ. ಅಂದು ವಿಮಾನ ಪತ್ತೆ ಹಚ್ಚಲು ಕೇಂದ್ರ ಸರಕಾರ ಮತ್ತು ಮಿಲಿಟರಿ ತಜ್ಞರು ಸತತ ಮೂರು ತಿಂಗಳು ಎರಡು ಪಿ.8 ಎ ವಿಮಾನ, ಮೂರು ಡೋರ್ನಿಯರ್ ವಿಮಾನ, ಒಂದು ಜಲಾಂತರ್ಗಾಮಿ, ನೌಕಾಸೇನೆಯ 12 ನೌಕೆಗಳ ಮೂಲಕ ಪ್ರಯತ್ನಿಸಿದ್ದವು.

ಗುರುವಾಯನಕೆರೆ ವೀರ ಸೇನಾನಿ ಏಕನಾಥ ಶೆಟ್ಟಿಯವರು ಅದೇ ವಿಮಾನದಲ್ಲಿ ತಮ್ಮ ಸೇವಾ  ಪಯಣ ಆರಂಭಿಸಿದ್ದರು. ಆದರೆ ಅಂದು ಬೆಳಗ್ಗೆ 9.12 ಕ್ಕೆ ಸಂಪರ್ಕ ಕಡಿತಗೊಂಡು ಮಧ್ಯಾಹ್ನ 1.50ರ ವರೆಗೂ ಸಂಪರ್ಕ ಸಿಗದೇ ಇದ್ದಾಗ ವಾಯುಸೇನೆ ಮಾಹಿತಿ ನೀಡಿತ್ತು.

ಏಕನಾಥ ಶೆಟ್ಟಿ

ಅಂದಿನಿಂದ ಇಂದಿನವರೆಗೂ ಏಕನಾಥ ಶೆಟ್ಟಿ ನೆನಪಿನಲ್ಲೆ ಪತ್ನಿ ಜಯಂತಿ ಶೆಟ್ಟಿ, ಮಗ ಅಕ್ಷಯ್ ಶೆಟ್ಟಿ, ಪುತ್ರಿ ಅಶಿತಾ ಶೆಟ್ಟಿ ಮರುಗುವಂತಾಗಿದೆ.

ಪುತ್ರಿ ಉದ್ಯೋಗ ನಿರೀಕ್ಷೆಯೂ ಈಡೇರಿಲ್ಲ
ಮಗಳು ಅಶಿತಾ ಶೆಟ್ಟಿ ಎಂಎಚ್‌ಆರ್ ಡಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಬೆಂಗಳೂರು ಬಯೋಕಾನ್ ಲಿಮಿಟೆಡ್ ಕಂಪನಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಮಗ ಅಡ್ಯಾರು ಸಹ್ಯಾದ್ರಿ ಕಾಲೇಜಿನಲ್ಲಿ‌ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಪುತ್ರಿ ಸರಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದು, ಅವಕಾಶ ಸಿಕ್ಕಲ್ಲಿ ತಂದೆಯಂತೆ ದೇಶ ಸೇವೆಗೆ ಸನ್ನದ್ಧರಾಗಿದ್ದಾರೆ.

ಪತಿಯ ನೆನಪಲ್ಲಿ ವರ್ಷಗಳು ಕಳೆಯುತ್ತಿದ್ದೇವೆ. ಅಧಿಕಾರಿಗಳು, ಮಂತ್ರಿಗಳು ಮಗಳಿಗೆ ಸರಕಾರಿ ಉದ್ಯೋಗ ಭರವಸೆ ನೀಡಿದ್ದರು. ಇದೀಗ ಅವಳ ಶಿಕ್ಷಣ ಪೂರ್ಣಗೊಂಡಿದೆ. ಇನ್ನು ಭರವಸೆ ಈಡೇರಿಲ್ಲ ಎಂಬ ಬೇಸರ ಇದೆ ಎನ್ನುತ್ತಿದ್ದಾರೆ ಏಕನಾಥ ಶೆಟ್ಟಿ ಅವರ ಪತ್ನಿ ಜಯಂತಿ ಶೆಟ್ಟಿ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.