ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಮತ್ತೂಂದು ಕೋವಿಡ್ ಪಾಸಿಟಿವ್ ಪ್ರಕರಣ ದೃಢ!
Team Udayavani, Jul 23, 2020, 5:11 PM IST
ಈಶ್ವರಮಂಗಲ: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು ಸಮೀಪದ ಕೋಡಿಯಡ್ಕ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಕೋವಿಡ್ ಪಾಸಿಟಿವ್ ಧೃಡ ಪಟ್ಟಿದ್ದು ಅಧಿಕಾರಿಗಳು ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಮಂಗಳವಾರ ಈಶ್ವರಮಂಗಲ ಮೇನಾಲದಲ್ಲಿ ಕೋವಿಡ್ ಪಾಸಿಟಿವ್ ಬಂದ ಎರಡೇ ದಿನದಲ್ಲಿ ಇನ್ನೊಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.
ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ಕೆಲವು ತಿಂಗಳ ಹಿಂದೆ ಊರಿಗೆ ಮರಳಿ ಮತ್ತೆ ಬೆಂಗಳೂರಿಗೆ ತೆರಳಿ ಇತ್ತೀಚೆಗೆ ಊರಿಗೆ ಬಂದಿದ್ದಾರೆ ಹಾಗೂ ತಾಯಿಯನ್ನು ಡಯಾಲಿಸ್ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೆನ್ನಲಾಗಿದೆ. ಆದರೆ ವ್ಯಕ್ತಿಗೆ ಯಾವಾಗ ಕೋವಿಡ್ ವೈರಸ್ ಸಂಪರ್ಕವಾಗಿದೆ ಎನ್ನುವುದು ನಿಗೂಢವಾಗಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತನ ಸಂಪರ್ಕದಲ್ಲಿರುವವರನ್ನು 7 ದಿನ ಕ್ವಾರೆಂಟೈನ್ ಮಾಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
ಈಶ್ವರಮಂಗಲದಲ್ಲಿ ಸಾಮಾಜಿಕ ಅಂತರದ ಕೊರತೆ!
ಮಹಾಮಾರಿ ಕೋವಿಡ್ ಗ್ರಾಮೀಣ ಪ್ರದೇಶದಲ್ಲಿ ಹರಡಲು ಪ್ರಾರಂಭಿಸಿದ್ದು ಸಾರ್ವಜನಿಕರಲ್ಲಿ ಸ್ವಯಂ ಸುರಕ್ಷತೆ ಬಗ್ಗೆ ಕಾಳಜಿ ಇಲ್ಲದೆ ಇರುವುದು ಕಂಡು ಬರುತ್ತಿದೆ. ಈಶ್ವರಮಂಗಲದ ನ್ಯಾಯ ಬೆಲೆಯಲ್ಲಿ ಅಂಗಡಿಯಲ್ಲಿ ಪಡಿತರ ಪಡೆಯುವಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಂಡು ಬರುತ್ತಿದ್ದು ಇದನ್ನು ಸರಿಪಡಿಸಲು ಸ್ಥಳೀಯ ಪೊಲೀಸ್ ಠಾಣೆಯ ಪೇದೆ ಬರಬೇಕಾಯಿತು ಎನ್ನಲಾಗಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್, ಪೊಲೀಸರು, ಕೊವಿಡ್ ವಾರಿಯರ್ಸ್ ಗಳ ವಿನಂತಿಗೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.