![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 26, 2020, 6:03 PM IST
ಭೋಪಾಲ್: ಕೋವಿಡ್-19 ಸೋಂಕಿನ ಬಗ್ಗೆ ಯಾವುದೇ ರೀತಿಯ ಭಯ ಬೇಡ. ನಿಮಗೆ ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ಅಳುಕಿಲ್ಲದೆ ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಶಿವರಾಜ್ ಸಿಂಗ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ಶನಿವಾರ ದೃಢವಾಗಿದೆ. ಅವರು ರಾಜಧಾನಿ ಭೋಪಾಲ್ ನ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಿಂದ ವಿಡಿಯೋ ಮೂಲಕ ಮಾತನಾಡಿರುವ ಚೌಹಾಣ್, ರಾಜ್ಯದ ನನ್ನ ಪ್ರೀತಿಯ ಜನರೇ, ನಾನು ಕ್ಷೇಮವಾಗಿದ್ದೇನೆ. ಇಲ್ಲಿನ ಕೋವಿಡ್ ವಾರಿಯರ್ಸ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ತಮ್ಮ ಜೀವ ಒತ್ತೆಯಿಟ್ಟು ಕೋವಿಡ್ ನಿರ್ಮೂಲನೆಗೆ ಶ್ರಮಿಸುತ್ತಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಟ್ವೀಟ್ ಮಾಡಿ, ಯಾರಿಗಾದರೂ ರೋಗಲಕ್ಷಣಗಳು ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿ. ಇದರಿಂದ ಮಾತ್ರ ಕೋವಿಡ್ 19 ಸೋಂಕು ದೂರ ಮಾಡಬಹುದು ಎಂದು ಹೇಳಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.