ಎಂಬಿಎ ಪದವೀಧರನ ಡ್ರ್ಯಾಗನ್‌ ಫ್ರುಟ್‌ ಕೃಷಿ

ಕಾಗವಾಡದ ರೈತ ಮಹಾದೇವ ಕೋಳೆಕರ ಯಶೋಗಾಥೆ

Team Udayavani, Jul 27, 2020, 11:34 AM IST

ಎಂಬಿಎ ಪದವೀಧರನ ಡ್ರ್ಯಾಗನ್‌ ಫ್ರುಟ್‌ ಕೃಷಿ

ಕಾಗವಾಡ: ಕೋವಿಡ್ ಮಾಹಾಮಾರಿ ಎಲ್ಲ ಕ್ಷೇತ್ರಗಳನ್ನೂ ಸಂಕಷ್ಟಕ್ಕೆ ನೂಕಿದೆ. ಕೃಷಿಯೂ ಅದರಿಂದ ಹೊರತಾಗಿಲ್ಲ. ಎಷ್ಟೋ ರೈತರು ಬೆಳೆ ನಷ್ಟ ಅನುಭವಿಸಿದ್ದರೆ, ಇನ್ನಷ್ಟು ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಸಿಗದೆ ಬಸವಳಿದ ಉದಾಹರಣೆಗಳಿವೆ. ಈ ಮಧ್ಯೆ ಇಲ್ಲಿನ ಎಂಬಿಎ ಪದವೀಧರನೊಬ್ಬ ಡ್ರ್ಯಾಗನ್‌ ಹಣ್ಣು ಬೆಳೆದು ಮಾರುಕಟ್ಟೆ ಕಂಡುಕೊಂಡು ಮಾದರಿಯಾಗಿದ್ದಾರೆ.

ಯಾರು? ಎಲ್ಲಿಯವರು?: ಲಾಭದಾಯಕ ಕೃಷಿಗೆ ಹಲವರು ಸಾಕ್ಷಿಯಾಗಿದ್ದಾರೆ. ಆ ಸಾಲಿನಲ್ಲಿ ಕಾಗವಾಡ ಗ್ರಾಮದ ಯುವ ರೈತ ಮಹಾದೇವ ಕೋಳೆಕರ ನಿಲ್ಲುತ್ತಾರೆ. ಇಂದಿನ ವಿಜ್ಞಾನ ಯುಗದಲ್ಲಿ ಬೇರೆ ಬೇರೆ ಬೆಳೆಗಳನ್ನು ಬೆಳೆದು ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಆದಾಯ ಪಡೆದು ಕೃಷಿಯಲ್ಲಿ ಲಾಭ ಮಾಡಿಕೊಳ್ಳಲು ಸಾಧ್ಯವಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಎಂಬಿಎ ಪದವಿ ಪಡೆದು ನೌಕರಿ ಬೆನ್ನಿಗೆ ಬೀಳದೆ ಆಧುನಿಕ ಕೃಷಿಗೆ ಮುಂದಾಗಿದ್ದಾರೆ. ಕಳೆದ 4 ವರ್ಷಗಳಿಂದ ಡ್ರ್ಯಾಗನ್‌ ಫ್ರುಟ್‌ ಬೆಳೆಯುತ್ತಿದ್ದಾರೆ. ತಂದೆ ಹೆಸರಿನಲ್ಲಿ 8 ಎಕರೆ ಜಮೀನಿದ್ದು, ಇದರಲ್ಲಿಯ 1 ಎಕರೆ ಕ್ಷೇತ್ರದಲ್ಲಿ ಡ್ರ್ಯಾಗನ್‌ ಹಣ್ಣಿನ ತೋಟ ನಿರ್ಮಿಸಿದ್ದಾರೆ. ಮಹಾದೇವ ಅವರದು ಸಂಪೂರ್ಣ ಮಡ್ಡಿ ಜಮೀನು. ಒಂದೆಕರೆ ಕ್ಷೇತ್ರದಲ್ಲಿ 500 ಸಿಮೆಂಟ್‌ ಕಂಬಗಳಿದ್ದು, ಪ್ರತಿ ಕಂಬಕ್ಕೆ ನಾಲ್ಕರಂತೆ 640 ಕೆಂಪು ಹಾಗೂ 1360 ಬಿಳಿ ತಿರುಳಿನ ಒಟ್ಟು 2000 ಸಸಿಗಳನ್ನು ದಕ್ಷಿಣೋತ್ತರ ನಾಟಿ ಮಾಡಿದ್ದಾರೆ. ನಂತರ ಮಣ್ಣೇರಿಸಿ ಹನಿ ನೀರಾವರಿ ಅಳವಡಿಸಿದ್ದಾರೆ. ಇವರಿಗೆ ತಂದೆ ಮಾರುತಿ ಕೋಳೆಕರ, ಬಂಧು ಬಾಳಾಸಾಹೇಬ ಕೋಳೆಕರ ಹಾಗೂ ಕುಟುಂಬಸ್ಥರು ಸಾಥ ನೀಡಿದ್ದು, ಈಗ ಮನೆ ಮನೆಗೆ ಹಣ್ಣು ತಲುಪಿಸಲು ಪ್ರಯತ್ನಿಸುತ್ತಿದ್ದಾರೆ.

ಮಾರುಕಟ್ಟೆ ಎಲ್ಲಿ? : ಹಿಂದಿನ ವರ್ಷ ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು, ಕೊಲ್ಲಾಪುರ ನಗರದ ಹಣ್ಣಿನ ವ್ಯಾಪಾರಸ್ಥರಿಗೆ ಒಂದೆರಡು ಬಾಕ್ಸ್‌ ಕೊಟ್ಟು ಗ್ರಾಹಕರ ಒಲವು ತಿಳಿಯಲು ಪ್ರಯತ್ನಿದರು. ಈ ವರ್ಷ ಕೋವಿಡ್ ಮಹಾಮಾರಿಯಿಂದ ಲಾಕ್‌ಡೌನ್‌ದಲ್ಲಿ ಮಾರುಕಟ್ಟೆಗೆ ಹಣ್ಣು ಸಾಗಾಟ ಮಾಡಲು ತೊಂದರೆಯಾಗುತ್ತಿತ್ತು. ಈಗ ಬೆಳಗಾವಿ ಮಾರುಕಟ್ಟೆಯಲ್ಲಿ ಹಣ್ಣು ಮಾರಾಟ ಪ್ರಾರಂಭವಾಗಿದ್ದು, 150ರಿಂದ 200 ರೂ. ವರೆಗೆ ಹಣ್ಣು ಖರೀದಿಸುತ್ತಿದ್ದಾರೆ. ಕೋವಿಡ್ ಸೋಂಕಿತರಿಗೆ ಶಕ್ತಿವರ್ಧಕ ಹಣ್ಣಾಗಿದ್ದರಿಂದ ಪ್ರತಿದಿನ ಅವರ ತೋಟಕ್ಕೆ ಬಂದು ಸುಮಾರು 100 ಕೆಜಿ ವರೆಗೆ ಜನರು ಹಣ್ಣು ಖರೀದಿಸುತ್ತಿದ್ದಾರೆ. ಮಾಹಿತಿಗೆ ಮಹಾದೇವ ಕೋಳೆಕರ ಮೊ: 93438 28061 ಸಂಪರ್ಕಿಸಬಹುದು.

ಡ್ರ್ಯಾಗನ್‌ ಹಣ್ಣಿನ ಸಸಿಗಳನ್ನು ನಿರ್ಮಿಸಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯ ರೈತರಿಗೆ ನೀಡಿದ್ದೇನೆ. ಹನಿ ನೀರಾವರಿ ಮುಖಾಂತರ ಅಲ್ಪ ನೀರಿನಲ್ಲಿ ಉತ್ತಮ ಬೆಳೆ ಬೆಳೆಯಲು ಒಳ್ಳೆಯ ಅವಕಾಶವಿದೆ. ಯುವಕರು ಕೃಷಿಗೆ ಮುಂದಾದಲ್ಲಿ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. –ಮಹಾದೇವ ಕೋಳೆಕರ, ಪ್ರಗತಿಪರ ರೈತ

 

-ಸುಕುಮಾರ ಬನ್ನೂರೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.