![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 28, 2020, 8:26 AM IST
ಮದ್ದೂರು: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೋವಿಡ್-19 ಸೋಂಕು ತಾಲೂಕು ಕಚೇರಿ ಸೇರಿದಂತೆ ಎಲ್ಲೆಡೆ ಹರಡುತ್ತಿದೆ. ಹೀಗಾಗಿ ತಾಲೂಕು ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ವೈರಸ್ ಆತಂಕ ಮೂಡಿಸಿದೆ. ಜು.27ರವರೆಗೆ ತಾಲೂಕಿನಲ್ಲಿ 3050 ಮಂದಿ ಗಂಟಲು ಮತ್ತು ಮೂಗಿನ ದ್ರವವನ್ನು ತಪಾಸಣೆಗೆ ಕಳುಹಿಸಿದ್ದು, ಈವರೆವಿಗೆ ಒಟ್ಟು 158 ಪ್ರಕರಣಗಳು ಖಚಿತವಾಗಿದೆ. 158 ಪ್ರಕರಣಗಳ ಪೈಕಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 66 ಸೋಂಕಿತರು ಮಂಡ್ಯ ಮತ್ತು ಮದ್ದೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲೇ ಚಿಕಿತ್ಸೆಗಾಗಿ 63 ದಾಖಲಾಗಿದ್ದು, ಮದ್ದೂರು ಆಸ್ಪತ್ರೆಯಲ್ಲಿ 35 ಹಾಗೂ 28 ಮಂದಿ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಮದ್ದೂರು ತಾಲೂಕು ಕಚೇರಿ ಪ್ರಥಮದರ್ಜೆ ಸಹಾಯಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.30ರವರೆವಿಗೆ ತಾಲೂಕು ಕಚೇರಿ ಸೇರಿ ದಂತೆ ಉಪನೊಂದಣಿ, ಆಹಾರ ಶಾಖೆ ಮತ್ತು ಖಜಾನೆ ಶಾಖೆಗಳನ್ನು ಸೀಲ್ಡೌನ್ಗೊಳಿಸಿ, ಮದ್ದೂರು ತಹಸೀಲ್ದಾರ್ ವಿಜಯಕುಮಾರ್ ಆದೇಶ ಹೊರಡಿಸಿ ದ್ದಾರೆ. ಸೋಮವಾರ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ನೇತೃತ್ವದಲ್ಲಿ ಸಿಬ್ಬಂದಿ ಸೀಲ್ಡೌನ್ ಮಾಡಿ, ತಾಲೂಕು ಕಚೇರಿಗೆ ಸ್ಯಾನಿಟೈಸರ್ ಮಾಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.