ಲೀಫ್‌ ಆರ್ಟ್‌ ಕಲಾವಿದ ಅಕ್ಷಯ್‌ ಸಾಧನೆಗೆ ಡಾ| ಹೆಗ್ಗಡೆ ಪ್ರಶಂಸೆ


Team Udayavani, Jul 29, 2020, 9:10 AM IST

ಲೀಫ್‌ ಆರ್ಟ್‌ ಕಲಾವಿದ ಅಕ್ಷಯ್‌ ಸಾಧನೆಗೆ ಡಾ| ಹೆಗ್ಗಡೆ ಪ್ರಶಂಸೆ

ಬೆಳ್ತಂಗಡಿ: ಎಲೆಗಳ ಮೇಲೆ ಚಿತ್ರ ಮೂಡಿಸುವ (ಲೀಫ್‌ ಆರ್ಟ್‌) ಕಲೆಯಲ್ಲಿ ಅಕ್ಷಯ್‌ ಎಂ. ಕೋಟ್ಯಾನ್‌ ಮೂಡುಬಿದಿರೆ ಸಾಧನೆ ಮಾಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ಅವರ ಚಿತ್ರವನ್ನು ಅಶ್ವತ್ಥ ಎಲೆಗಳಲ್ಲಿ ಮೂಡಿಸುವ ಮೂಲಕ ಡಾ| ಹೆಗ್ಗಡೆ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೂಲತಃ ಮೂಡುಬಿದಿರೆಯ ಕಲ್ಲಬೆಟ್ಟುವಿನ ಮೋಹನ್‌ ಬಿ. ಪೂಜಾರಿ ಹಾಗೂ ಶೋಭಾ ಕೋಟ್ಯಾನ್‌ ದಂಪತಿಯ ಪುತ್ರ ಅಕ್ಷಯ್‌ ಪ್ರಸ್ತುತ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ಎರಡನೇ ವರ್ಷದ ಬಿ.ವಿ.ಎ. ವ್ಯಾಸಂಗ ಮಾಡುತ್ತಿದ್ದಾರೆ. ಕಾಗದದ ಮೂಲಕ ಚಿತ್ರ ಆರಂಭಿಸಿದ ಇವರು ಕಳೆದ ನಾಲ್ಕು ತಿಂಗಳುಗಳಿಂದ ಎಲೆಗಳ ಮೇಲೆ ಚಿತ್ರ ಮೂಡಿಸಿ (ಲೀಫ್‌ ಆರ್ಟ್‌) ಯಶಸ್ವಿಯಾಗಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಡಾ| ಹೆಗ್ಗಡೆ, ನಾರಾಯಣಗುರು, ಬೆಳ್ತಂಗಡಿ ಶಾಶಕ ಹರೀಶ್‌ ಪೂಂಜ ಸಹಿತ ಶಾಸಕರನೇಕರ ಚಿತ್ರ, ಸಿನೆಮಾ ನಟರು, ದೇವರ ಚಿತ್ರಗಳನ್ನು ಎಲೆಗಳಲ್ಲಿ ಮೂಡಿಸಿದ್ದಾರೆ.

ಬಹುಮುಖ ಪ್ರತಿಭೆ
ಅಕ್ಷಯ್‌ ಪೆನ್ಸಿಲ್‌ ಮೊನೆಗಳಲ್ಲಿ ಆಕೃತಿ, ಸೋಪಿನಲ್ಲಿ ಆಕೃತಿ, ಸ್ಪೀಡ್‌ ಪೈಂಟಿಂಗ್‌, ರಂಗೋಲಿ, ಮರಳಿನಲ್ಲಿ ಆಕೃತಿ, ಡಿಜಿಟಲ್‌ ಪೈಂಟಿಂಗ್‌ ಮೊದಲಾದ ಅನೇಕ ಬಗೆಗಳ ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ.

 ಡಾ| ಹೆಗ್ಗಡೆ ಪ್ರೋತ್ಸಾಹ ಪ್ರೇರಣೆ
ಕಲೆಯಲ್ಲಿ ಬಾಲ್ಯದಿಂದಲೂ ಆಸಕ್ತಿ ಇತ್ತು. ಎಲೆ ಮೇಲೆ ಆಕೃತಿಗೂ ಮುನ್ನ ಕಾಗದದಲ್ಲಿ ಅಭ್ಯಾಸ ನಡೆಸಿದ್ದೆ. ನಾಲ್ಕು ತಿಂಗಳ ಹಿಂದೆ ಎಲೆಗಳಲ್ಲಿ ಆಕೃತಿ ಬಿಡಿಸಲು ಮುಂದಾದೆ. ಡಾ| ಹೆಗ್ಗಡೆ ಅವರ ಪ್ರೋತ್ಸಾಹ, ಆಶೀರ್ವಾದ ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡಿದೆ.
ಅಕ್ಷಯ್‌ ಎಂ.ಕೋಟ್ಯಾನ್, ‌ ಲೀಫ್ ಆರ್ಟ್‌ ಕಲಾವಿದ

ಅತ್ಯಪೂರ್ವ ಕಲಾ ಸಾಧನೆ
ಅಕ್ಷಯ್‌ ಕೋಟ್ಯಾನ್‌ ಅವರು ಮೂಡಿಸಿದ ಎಲೆಗಳ ಮೇಲಿನ ಚಿತ್ರಕಲೆ ನನಗೆ ಮತ್ತು ಮನೆಮಂದಿಗೆ ಬಹಳಷ್ಟು ಇಷ್ಟವಾಗಿದೆ. ನನಗೆ ಅನೇಕರು ಅವರ ಕಲೆಯನ್ನು ಪ್ರಶಂಸಿಸಿ ಸಂದೇಶ ಕಳುಹಿಸಿದ್ದರು. ಅವರ ಅತ್ಯಪೂರ್ವ ಕಲಾ ಸಾಧನೆಗೆ ಪ್ರೋತ್ಸಾಹಿಸುತ್ತಾ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ
ಅನುಗ್ರಹ ಜತೆಗಿರಲಿ.
– ಡಾ| ಡಿ. ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.