![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 29, 2020, 11:17 AM IST
ಚಿಂತಾಮಣಿ: ರೈತರಿಂದ ಖರೀದಿಸಿ ಗ್ರಾಹಕರಿಗೆ ನೇರವಾಗಿ ಹಣ್ಣು ಹಂಪಲು, ಹೂಗಳನ್ನು ದೀನ್ ದಯಾಳ್ ಗ್ರಾಮೀಣಾ ಭಿವೃದ್ಧಿ ವತಿಯಿಂದ ಜೀವಫಲ ಮುಖಾಂತರ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದಾಗಿ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸತ್ಯನಾರಾಯಣ ಮಹೇಶ್ ಹೇಳಿದರು.
ನಗರದ ಪ್ರಭಾಕರ್ ಬಡಾವಣೆಯಲ್ಲಿರುವ ಜೀವಜಲ ಮತ್ತು ಜೀವಫಲ ಕಚೇರಿಯಲ್ಲಿ ಹಮ್ಮಿ ಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಪ್ರಯುಕ್ತ ಜನ ಜಂಗುಳಿ ಹೆಚ್ಚಾಗುತ್ತದೆ. ಕೋವಿಡ್ ನಿಯಂತ್ರಿಸಲು ಕಷ್ಟಕರವಾಗುತ್ತದೆ. ರೈತರು ಮಾರುಕಟ್ಟೆಯಲ್ಲಿ ತಮ್ಮ ಬೆಳೆ ಮಾರಾಟ ಮಾಡಲು ಹಾಗೂ ಗ್ರಾಹಕರು ತೆಗೆದುಕೊಳ್ಳಲು ತೊಂದರೆಯಾಗುತ್ತದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ರೈತರಿಂದ ನೇರವಾಗಿ ಪಡೆದು ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದರು.
ಎಲ್ಲಾ ವರ್ಗದ ಜನರು ಹಬ್ಬ ಸಂತೋಷದಿಂದ ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಜೀವಫಲ ಸ್ಥಾಪನೆ ಮಾಡಿದ್ದು, ಪ್ರಾರಂಭದಿಂದ 200 ಮತ್ತು 400 ರೂ.ಗೆ ಜೀವಫಲ ಮಾರಾಟ ಮಾಡುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪ್ರಭಾಕರ್ ಬಡಾವಣೆ ಮತ್ತು ವಾಸವಿ ರಿಜೆನ್ಸಿ ಬಳಿ ಮಾರಾಟ ಮಾಡುತ್ತಿದ್ದು, ಗೌರಿ ಗಣೇಶ ಹಬ್ಬಕ್ಕೆ 25 ರಿಂದ 30 ಕಡೆ ಈ ರೀತಿಯ ಮಾರಾಟ ಮಾಡುತ್ತೇವೆ ಎಂದು ತಿಳಿಸಿದರು. ವಕೀಲ ನಾ.ಶಂಕರ್, ರಾಜೇಶ್, ಶ್ರೀನಾಥ್, ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗೋವಿಂದ್, ನಗರ ಮಂಡಲ ಕಾರ್ಯದರ್ಶಿ ಸಿ.ಆರ್.ವೆಂಕಟೇಶ್, ಸುನೀಲ್, ಪಿ.ವಿ.ಕೃಷ್ಣ, ಭಾಸ್ಕರ್, ರಾಜೇಶ್ ಇದ್ದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.