ಸಹೋದರಿಯರೇ ಗಮನಿಸಿ: ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯಿಂದ ಬಂಪರ್ ಆಫರ್, ಏನದು ?
Team Udayavani, Jul 29, 2020, 2:30 PM IST
ಬೆಂಗಳೂರು: ಅಣ್ಣತಂಗಿಯರ ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸುತ್ತಿದೆ. ಆದರೇ ಕೋವಿಡ್ 19 ಕಾರಣದಿಂದ ಅಂಗಡಿಗೆ ತೆರಳಿ ತಮಗಿಷ್ಟವಾದ ರಾಖಿ ಖರೀದಿಸಲು ಆಗುವುದಿಲ್ಲ ಆಗುವುದಿಲ್ಲವೆಂದು ತಂಗಿಯಂದಿರು ಚಿಂತಿಸಬೇಕಾದ ಅವಶ್ಯಕತೆಯಿಲ್ಲ. ಯಾಕೆಂದರೇ ಭಾರತೀಯ ಅಂಚೆ ಇಲಾಖೆ ಮನೆಯಲ್ಲಿಯೇ ಕುಳಿತು ಸಹೋದರರಿಗೆ ರಾಖಿ ಕಳುಹಿಸುವ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.
ಹೌದು, ಇದಕ್ಕಾಗಿ ಅಂಚೆ ಇಲಾಖೆ ‘ರಾಖಿ ಪೋಸ್ಟ್’ ಎಂಬ ವಿನೂತನ ಸೇವೆಯನ್ನು ಜಾರಿಗೆ ತಂದಿದ್ದು ದೇಶದ ಯಾವುದೇ ಮೂಲೆಗೆ ಇದರ ಮೂಲಕ ರಾಖಿ ಕಳುಹಿಸಬಹುದಾಗಿದೆ. ಮಾತ್ರವಲ್ಲದೆ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶವಿದ್ದು ಅವರಿಗೆಂದೇ ಮುದ್ರಿತ ಸಂದೇಶವನ್ನು ಆಯ್ಕೆ ಮಾಡಿ ರವಾನಿಸಬಹುದಾಗಿದೆ.
www.karnatakapost.gov.in ಮುಖಾಂತರ ಮನೆಯಲ್ಲಿ ಕುಳಿತು ಕರ್ನಾಟಕ ರಾಜ್ಯದೊಳಗಿನ ಗ್ರಾಹಕರು ಭಾರತದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ತ್ವರಿತ ಅಂಚೆ (ಸ್ಪೀಡ್ ಪೋಸ್ಟ್) ಮುಖಾಂತರ ಬಹು ಸುಲಭವಾಗಿ ಕೇವಲ 100 ರೂಪಾಯಿ ವೆಚ್ಚದಲ್ಲಿ ಕಳುಹಿಸಬಹುದು. ಈ ಬೆಳವಣಿಗೆ ಕಳೆದ ಕೆಲವು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುತ್ತಿದ್ದು ರಾಖಿ ಲಕೋಟೆಗಳಿಗೆ ಹೊಸ ಆಯಾಮ ದೊರೆತಂತಾಗಿದೆ.
ಆದರೆ ಈ ವಿಧಾನದ ಮೂಲಕ ರಾಖಿ ಕಳುಹಿಸಲು ಜುಲೈ ತಿಂಗಳ 31 ನೇ ತಾರೀಕು ಕೊನೆಯ ದಿನವಾಗಿರುತ್ತದೆ ಎಂದು ಮಂಗಳೂರು ಪೋಸ್ಟಲ್ ವಿಭಾಗದ ಅಧೀಕ್ಷಕ ಎನ್. ಶ್ರೀಹರ್ಷ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.