ಜೇನು ನೊಣಗಳ ಸಂತತಿ ಕಡಿಮೆಯಿಂದ ಆಹಾರ ಉತ್ಪಾದನೆ ಇಳಿಕೆ


Team Udayavani, Jul 29, 2020, 8:20 PM IST

bee new

ಕ್ಯಾಲಿಫೋರ್ನಿಯಾ: ಆಹಾರ ಉತ್ಪಾದನೆ ಅಥವಾ ಹೊಸ ಸಸ್ಯ ಬೆಳವಣಿಗೆಗೆ ಕೆಲವೊಂದು ಜೀವಿಗಳ ಉಪಸ್ಥಿತಿ ಬಹಳ ಮುಖ್ಯವಾಗಿರುತ್ತದೆ.

ಉದಾಹರಣೆಗೆ ಹೂ ಅರಳಲು, ಪರಾಗಸ್ಪರ್ಶ ನಡೆಯಲು ಚಿಟ್ಟೆಗಳು ಹೇಗೆ ಅಗತ್ಯವೋ ಅದೇ ರೀತಿ ಕೆಲವು ಉತ್ಪಾದನೆಗಳಿಗೆ ಇನ್ನು ಕೆಲವು ಜೀವಿಗಳು ಅಗತ್ಯವಾಗಿರುತ್ತವೆ.

ಆ ಜೀವಿಗಳ ಸಂಖ್ಯೆ ಕಡಿಮೆಯಾದಂತೆ ಆಯಾ ಸಸ್ಯ ಉತ್ಪಾದನೆಗಳೂ ಕಡಿಮೆಯಾಗುತ್ತದೆ.

ಇದೀಗ ಅಮೆರಿಕದಲ್ಲಿ ನಡೆದ ಸಂಶೋಧನೆಯೊಂದರ ಪ್ರಕಾರ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾದುದರಿಂದ ಹಣ್ಣುಗಳ ಉತ್ಪಾದನೆಯೂ ಕಡಿಮೆಯಾಗಿದೆ ಎಂಬ ಆತಂಕಕಾರಿ ಅಂಶವೊಂದು ಹೊರಬಿದ್ದಿದೆ. ಈ ಬೆಳವಣಿಗೆಗೆ ಹಲವಾರು ಕಾರಣಗಳನ್ನು ಪಟ್ಟಿಮಾಡಲಾಗಿದೆ.

ಜೇನುನೊಣಗಳ ಸಂತತಿ ಅಭಿವೃದ್ಧಿಯಾಗದಿದ್ದರೆ ಮುಕ್ಕಾಲು ಭಾಗದಷ್ಟು ಆಹಾರ ಉತ್ಪಾದನೆಯಲ್ಲಿ ಕುಸಿತ ಉಂಟಾಗಬಹುದೆಂಬ ಆತಂಕವನ್ನು ತಜ್ಞರು ಹೊರಹಾಕಿದ್ದಾರೆ.

ಮಾರಕವಾದ ಆಧುನಿಕ ಕೃಷಿ ತಂತ್ರ
ಜೇನುನೊಣಗಳ ಪ್ರಮುಖ ಆಹಾರವೇ ಹೂಗಳ ಮಕರಂದ. ಆ ಕಾರಣಕ್ಕಾಗಿಯೇ ಅವುಗಳು ಕೃಷಿ ಭೂಮಿಯಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಆದರೆ ಇತ್ತೀಚೆಗಿನ ಬದಲಾದ ಕೃಷಿ ಪದ್ದತಿಯಿಂದ ಅವುಗಳ ಜೀವನ ಕ್ರಮವೇ ಬದಲಾಗಿದೆ. ಕೃಷಿಯಲ್ಲಿ ರಾಸಾಯನಿಕ ಪದಾರ್ಥಗಳ ಬಳಕೆ ಹೆಚ್ಚಾಗುತ್ತಿರುವುದು ಇದಕ್ಕೆ ಮತ್ತೂಂದು ಪ್ರಮುಖ ಕಾರಣವಾಗಿದೆ.

ಅಮೆರಿಕ 13 ರಾಜ್ಯಗಳಲ್ಲಿ ನಡೆದ ಸಂಶೋಧನೆಯಲ್ಲಿ ಈ ಮಾಹಿತಿ ಹೊರಬಿದ್ದಿದೆ. ಇದರಲ್ಲಿ 5 ರಾಜ್ಯಗಳಲ್ಲಿ ಜೇನುನೊಣಗಳ ಕೊರತೆಯೇ ಆಹಾರ ಉತ್ಪಾದನೆ ಕಡಿಮೆಯಾಗಲು ಕಾರಣ ಎಂಬುದನ್ನು ನಿರೂಪಿಸುತ್ತವೆ. ಸೇಬು ಹಾಗೂ ಚೆರ್ರಿ ಉತ್ಪಾದನೆ ಕುಂಠಿತಗೊಳ್ಳಲು ಕೂಡ ಇದೇ ಪ್ರಮುಖ ಕಾರಣವಾಗಿದೆ. ಅಮೆರಿಕ, ಸ್ವೀಡನ್‌ ಮತ್ತು ಕೆನಡಾ ವಿಜ್ಞಾನಿಗಳು ಜಂಟಿಯಾಗಿ ಇದರ ಬಗ್ಗೆ ಸಂಶೋಧನೆ ನಡೆಸಿ 131 ಕೃಷಿ ಭೂಮಿಗಳಲ್ಲಿ ಜೇನುನೊಣಗಳ ಉಪಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದಾರೆ.

ಪರಾಗಸ್ಪರ್ಶದಲ್ಲಿ ಕಾಡು ಜೇನುನೊಣಗಳು ಇತರ ಜೇನುನೊಣಗಳಿಗಿಂತ ಅತಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಆದರೆ ಅಮೆರಿಕದಲ್ಲಿ ವಿನಾಶದ ಭೀತಿಯಲ್ಲಿರುವ ಜೀವಿಗಳ ಪಟ್ಟಿಯಲ್ಲಿ ಈ ಕಾಡು ಜೇನುನೊಣಗಳು ಕೂಡ ಸೇರಿಕೊಂಡಿವೆ.


ವಿಶ್ವಸಂಸ್ಥೆಯ ಮಾಹಿತಿಯ ಪ್ರಕಾರ ಪರಾಗಸ್ಪರ್ಶದಲ್ಲಿ ಉಂಟಾಗುವ ಆಹಾರ ಉತ್ಪನ್ನಗಳ ಪ್ರಮಾಣ ಅಗಾಧವಾಗಿದೆ. ಪರಾಗಸ್ಪರ್ಶದ ಕೊರತೆಯು ಕೆಲವು ಹಣ್ಣು ಅಥವಾ ತರಕಾರಿಗಳು ದುಬಾರಿಯಾಗಲು ಕಾರಣವಾಗಬಹುದು. ಆದರೆ ಅಕ್ಕಿ, ಜೋಳ, ರಾಗಿಗಳಿಗೆ ಇದು ಅನ್ವಯವಾಗುವುದಿಲ್ಲ. ಅವುಗಳಿಗೆ ಗಾಳಿಯ ಮೂಲಕವೇ ಪರಾಗಸ್ಪರ್ಶ ನಡೆಯುತ್ತವೆ ಎಂದಿದೆ.

ಪ್ರಸ್ತುತ ಕೃಷಿ ತೀವ್ರವಾಗುತ್ತಿದೆ ಮತ್ತು ಜೇನುನೊಣಗಳು ಸೀಮಿತ ಸಂಖ್ಯೆಯಲ್ಲಿವೆ. ಈಗ ಅಷ್ಟೇನೂ ತೊಂದರೆ ಇಲ್ಲದಿದ್ದರೂ ಮುಂದೊಂದು ದಿನ ಅಪಾಯದ ಹಂತವನ್ನು ದಾಟಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.

 

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.