ಆ್ಯಂಟಿಜನ್ ಪರೀಕ್ಷಾ ಸ್ಥಳಕ್ಕೆ ಡಿಸಿ ಭೇಟಿ
Team Udayavani, Aug 3, 2020, 1:47 PM IST
ಯಾದಗಿರಿ: ನಗರದ ಲಾಡಿಜ್ ಗಲ್ಲಿಯಲ್ಲಿ ರವಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ. ಕೂರ್ಮ ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಪಾಸಿಟಿವ್ ಬಂದಿರುವ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ ಇರುವವರಿಗೆ, 65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಗುರುತಿಸಿದ ಪ್ರದೇಶಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ, ಫಲಿತಾಂಶ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಪೌರಾಯುಕ್ತ ಬಕ್ಕಪ್ಪ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು. 298 ನೆಗೆಟಿವ್, 9 ಪಾಸಿಟಿವ್ ದೃಢ: ಯಾದಗಿರಿ ತಾಲೂಕಿನ ಯಾದಗಿರಿ ನಗರದ ಲಾಡಿಜ್ ಗಲ್ಲಿಯಲ್ಲಿ ಒಟ್ಟು 85 ಪರೀಕ್ಷೆ ನಡೆಸಲಾಗಿ, ಅದರಲ್ಲಿ 83 ಆರ್ ಟಿಪಿಸಿಆರ್ ಹಾಗೂ 2 ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳಾಗಿದ್ದು, ಅವೆಲ್ಲವುಗಳ ಫಲಿತಾಂಶ ನೆಗೆಟಿವ್ ಆಗಿದೆ. ಮುಸ್ಲಿಂಪುರದಲ್ಲಿ ಒಟ್ಟು 33 ಜನರ ಮಾದರಿ ಪರೀಕ್ಷೆ ನಡೆಸಲಾಗಿ, 29 ಆರ್ಟಿಪಿಸಿಆರ್ ಹಾಗೂ 4 ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳಾಗಿವೆ. ಅವುಗಳ ಫಲಿತಾಂಶಗಳು ನೆಗೆಟಿವ್ ಆಗಿವೆ.
ಮೂಕಾಂಬಿಕಾ ಶಾಲಾ ಪ್ರದೇಶದ ವ್ಯಾಪ್ತಿಯಲ್ಲಿ 75 ಜನರಿಗೆ ಪರೀಕ್ಷೆ ನಡೆಸಲಾಗಿದ್ದು, 64 ಆರ್ಟಿಪಿಸಿಆರ್ ಹಾಗೂ 11 ರ್ಯಾಪಿಡ್ ಆಂಟಿಜನ್ ಪರೀಕ್ಷೆ ನಡೆಸಲಾಗಿದೆ. 74 ನೆಗೆಟಿವ್ ಫಲಿತಾಂಶ ಪ್ರಕಟವಾಗಿ, ಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಗುರುಮಠಕಲ್ ತಾಲೂಕಿನ ಗಡಿ ಮೊಹಲ್ಲಾದಲ್ಲಿ ಒಟ್ಟು 45 ಜನರಿಗೆ ಪರೀಕ್ಷೆ ನಡೆಸಲಾಗಿದ್ದು ಎಲ್ಲವೂ ನೆಗೆಟಿವ್ ವರದಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ ಇದ್ದಾರೆ… ಸಚಿವ ಮಧು ಬಂಗಾರಪ್ಪ
Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
Yadagiri: ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!
Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್ ಕುಸಿದು ಬಿದ್ದು ಸಾ*ವು
Ex MLA ವೆಂಕಟರೆಡ್ಡಿ ಮುದ್ನಾಳ ಅಂತಿಮ ದರ್ಶನ ಪಡೆದ ವಿಜಯೇಂದ್ರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.