![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 4, 2020, 8:20 AM IST
ಯಳಂದೂರು: ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತರ ಮರಣ ಶಾಸನವಾಗಿದೆ. ಇದನ್ನು ಕೂಡಲೇ ರದ್ದುಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಸದಸ್ಯರು ಉಪತಹಶೀಲ್ದಾರ್ ವೈ.ಎಂ. ನಂಜಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, 1961ರ ಭೂ ಸುಧಾರಣಾ ಕಾಯ್ದೆಯಲ್ಲಿರುವ 79 ಎಸಿಬಿ ಮತ್ತು 80ನೇ ಕಾಲಂಗಳನ್ನು ರದ್ದುಗೊಳಿಸಿ, ಕೃಷಿ ಭೂಮಿಯ ಖರೀದಿ ಮಿತಿಯನ್ನು ಹೆಚ್ಚುಗೊಳಿಸುವ ಕಲಂ 63ಕ್ಕೆ ಬದಲಾವಣೆಯನ್ನು ತರುತ್ತಿರುವ ಕ್ರಮ ಸರಿಯಾಗಿಲ್ಲ. ಈ ನಿರ್ಧಾರದಿಂದ ಕೃಷಿ ಕ್ಷೇತ್ರ ಸರ್ವನಾಶವಾಗುತ್ತದೆ ಎಂದರು.
ರೈತರಿಗೆ ಕೋವಿಡ್ ಸಂಕಷ್ಟ: ಕೋವಿಡ್ ಸಂಕಷ್ಟದಿಂದ ರೈತರು ಪರದಾಡುತ್ತಿದ್ದಾರೆ. ಮಾನವ ಕುಲವೇ ತತ್ತರಿಸಿರುವ ಇಂತಹ ಸಂದರ್ಭದಲ್ಲಿ ರೈತರ ಮರಣ ಶಾಸಕನವಾಗಿರುವ ಈ ಕಾನೂನು ಜಾರಿಯಾದರೆ, ಗ್ರಾಮೀಣ ಭಾಗದ ರೈತರು ಬೀದಿಗೆ ಬೀಳಲಿದ್ದಾರೆ. ಉಳ್ಳವರ ಪಾಲಿಗೆ ಜಮೀನು ಸೇರಲಿದೆ. ಈ ಬಗ್ಗೆ ಸರ್ಕಾರ ಕೃಷಿ ಪರಿಣಿತರ ರೈತರ ಸಲಹೆಗಳನ್ನು ಪಾಲಿಸದೆ ಏಕಾಏಕಿ ನಿರ್ಧಾರ ಮಾಡಿರುವುದು ಸರಿಯಲ್ಲ. ಇದಕ್ಕೆ ಸದನದ ಕಲಾಪಗಳೂ ಇಲ್ಲದ ಕಾಲದಲ್ಲಿ ವಿಷಯ ಚರ್ಚೆಗೊಳ್ಳದೆ ನಿರ್ಧಾರ ಮಾಡಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಇದನ್ನು ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಉಪ ತಹಶೀಲ್ದಾರ್ ವೈ.ಎಂ.ನಂಜಯ್ಯರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಹೋಬಳಿ ಅಧ್ಯಕ್ಷ ನಾಗಪ್ಪ, ಶಾಂತರಾಜು, ಚೇತನ್, ಸೋಮಣ್ಣ ಹಾಜರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.