![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 4, 2020, 12:06 PM IST
ಹೊಸದಿಲ್ಲಿ: ದೇಶವೇ ಕಾತರದಿಂದ ಕಾಯುತ್ತಿರುವ ರಾಮ ಮಂದಿರ ಭೂಮಿ ಪೂಜೆ ನಾಳೆ ( ಆ. 5) ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಭರ್ಜರಿ ಸಿದ್ದತೆಗಳು ನಡೆಯುತ್ತಿದೆ.
ರಾಮ ಮಂದಿರ ಭೂಮಿ ಪೂಜೆ ಪೂರ್ವ ಸಿದ್ದತೆಯಾಗಿ ಸೊಮವಾರ 21 ಅರ್ಚಕರು ವಿಘ್ನವಿನಾಶಕ ಗಣಪತಿ ಪೂಜೆ ನಡೆಸಿದ್ದಾರೆ. ಇಂದು ಅಯೋಧ್ಯೆಯ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ.
ಭೂಮಿ ಪೂಜೆ ಕಾರ್ಯಕ್ರಮದ ಮೇಲ್ವಿಚಾರಣೆ ಹೊತ್ತಿರುವ ಅರ್ಚಕ ವೃಂದದವರು ಭೂಮಿ ಪೂಜೆಗೆ ಶುಭ ಮುಹೂರ್ತ ನಿಗಧಿ ಮಾಡಿದ್ದು, ಬುಧವಾರ ಮಧ್ಯಾಹ್ನ ಕೇವಲ 32 ಸೆಕಂಡ್ ಗಳ ಕಾಲ ಉತ್ತಮ ಮುಹೂರ್ತವಿದೆ ಎಂದಿದ್ದಾರೆ. ಅಂದರೆ ಮಧ್ಯಾಹ್ನ 12.44.08 ರಿಂದ 12.44.40ರ ವರೆಗೆ ಉತ್ತಮ ಮುಹೂರ್ತವಿದೆ ಎಂದು ಅರ್ಚಕರು ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
175 ಜನರಿಗೆ ಆಹ್ವಾನ
ನಾಳೆಯ ಭೂಮಿ ಪೂಜೆ ಕಾರ್ಯಕ್ರಮಕ್ಕೆ ದೇಶಾದ್ಯಂತ 175 ಜನರಿಗೆ ಆಹ್ವಾನ ನೀಡಲಾಗಿದೆ. ಇದರಲ್ಲಿ 135 ಮಂದಿ ವಿವಿಧ ಸಾಧು ಸಂತರು, ಸ್ವಾಮೀಜಿಗಳು ಇರಲಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿ ಐವರು ಇರಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಮಹಾರಾಜ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೇದಿಕೆಯಲ್ಲಿರಲಿದ್ದಾರೆ.
ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ. ಬುಧವಾರದ ಕಾರ್ಯಕ್ರಮವನ್ನು ಅವರು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಇದು ನವ ಭಾರತಕ್ಕೆ ಅಡಿಪಾಯ ಎಂದು ಆದಿತ್ಯನಾಥ್ ವ್ಯಾಖ್ಯಾನಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.