ನನ್ನ ಬಹುದಿನಗಳ ಕನಸು ನನಸಾಗುತ್ತಿದೆ: ಅಡ್ವಾಣಿ ಮನದಾಳದ ಮಾತು


Team Udayavani, Aug 4, 2020, 10:24 PM IST

Advani

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲು ಪ್ರಮುಖ ಕಾರಣವಾಗಿದ್ದವರು ಎಲ್‌.ಕೆ. ಅಡ್ವಾಣಿ ಅವರು.

ಬಿಜೆಪಿಯ ರಥದ ಸಾರಥಿಯಾಗಿದ್ದ ಅವರು ಮಂಗಳವಾರ ಅಯೋಧ್ಯೆಯ ಕುರಿತಾಗಿ ಮಾತನಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ದೇವಾಲಯದ ಅಡಿಪಾಯ ಹಾಕಲು ಕ್ಷಣಗಣನೆ ಶುರುವಾಗಿರುವ ಸಂದರ್ಭದಲ್ಲಿ ದೇವಾಲಯದ ಆಂದೋಲನಕ್ಕೆ ಅಡಿಪಾಯ ಹಾಕಿದ ಅಡ್ವಾಣಿ ಅವರು ಭಾವುಕರಾಗಿ ವೀಡಿಯೋ ಮೂಲಕ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಅವರು ಏನು ಹೇಳಿದ್ದಾರೆ ಇಲ್ಲಿದೆ ಒದಿ.

ʼಜೀವನದ ಕೆಲವು ಕನಸುಗಳು ಈಡೇರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಆದರೆ ಅವು ಮುಖ್ಯವಾದಾಗ ನಾವು ಕಾಯಲೇಬೇಕಾಗಿದೆ. ಆದೇ ರೀತಿ ಅಯೋಧ್ಯೆಗಾಗಿ ನಾನು ಕಾಯುತ್ತಿದ್ದ ದಿನಗಳು ಸಾರ್ಥಕವಾಗಿದೆ ಎಂದು ತೋರುತ್ತದೆ. ನನ್ನ ಹೃದಯದ ಸಮೀಪವಿದ್ದ ಅಂತಹ ಒಂದು ಕನಸು ಈಗ ಈಡೇರುತ್ತಿದೆ. ಖಂಡಿತವಾಗಿಯೂ ಈ ಕ್ಷಣ ಐತಿಹಾಸಿಕ ಮಾತ್ರವಲ್ಲದೇ ಭಾವನಾತ್ಮಕವಾಗಿದೆ. ಅಂದಹಾಗೆ ಇದು ನನಗೆ ಮಾತ್ರ ಭಾವನಾತ್ಮಕ ಎಲ್ಲ ಇಡೀ ಸಮುದಾಯಕ್ಕೆ ಎಂದಿದ್ದಾರೆ.

ಮುಂದುವರಿದು ಮಾತನಾಡಿರುವ ಅವರು, ರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯ ಭಾರತೀಯ ಜನತಾ ಪಕ್ಷದ ಕನಸು ಹಾಗೂ ಮಿಷನ್‌ ಆಗಿದೆ. 1990ರಲ್ಲಿ ನಡೆದ ರಾಮ ಜನ್ಮಭೂಮಿ ಚಳವಳಿಯ ಸಂದರ್ಭದಲ್ಲಿ ಸೋಮನಾಥದಿಂದ ಅಯೋಧ್ಯೆಯ ವರೆಗಿನ ರಾಮ ರಥಯಾತ್ರೆಯ ಜವಾಬ್ದಾರಿಯನ್ನು ನಾನು ಹೊತ್ತುಕೊಂಡಿದ್ದೆ. ಈ ಕ್ಷಣ ನಾನು ಅದಕ್ಕೆ ವಿನಮ್ರನಾಗಿದ್ದೇನೆ. ಈ ರಥಯಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಬೆಂಬಲ ನೀಡಿದ್ದರು. ಇದು ಈ ಮಹತ್ಕಾರ್ಯಕ್ಕೆ ಹೆಚ್ಚಿನ ಶಕ್ತಿ ಮತ್ತು ಪ್ರೇರಣೆ ನೀಡಿತ್ತು.

ಈ ಶುಭ ಸಂದರ್ಭದಲ್ಲಿ ರಾಮ ಜನ್ಮಭೂಮಿ ಚಳವಳಿಗೆ ಸಹಕರಿಸಿದ ದೇಶದ ಮತ್ತು ವಿದೇಶದ ಎಲ್ಲ ಸಂತರು, ಮುಖಂಡರು ಹಾಗೂ ಜನರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. 2019ರ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಶಾಂತಿಯುತ ವಾತಾವರಣದಲ್ಲಿ ಪ್ರಾರಂಭವಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.

ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯಲ್ಲಿ ಶ್ರೀರಾಮನಿಗೆ ಅಗ್ರಸ್ಥಾನವಿದೆ. ಈ ದೇವಾಲಯವು ಶ್ರೀ ರಾಮ ನ ಎಲ್ಲಾ ಗುಣಗಳನ್ನು ಅಳವಡಿಸಿಕೊಳ್ಳಲು ಭಾರತೀಯರೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಭಾವಿಸುತ್ತೇನೆ. ರಾಮ ಮಂದಿರ ಶಾಂತಿಯುತ ಭಾರತವನ್ನು ಪ್ರತಿನಿಧಿಸಲಿದೆ, ಇಲ್ಲಿ ಎಲ್ಲರಿಗೂ ನ್ಯಾಯ ಇರುತ್ತದೆ. ಪ್ರತಿಯೊಬ್ಬರೂ ರಾಮನಿಂದ ಆಶೀರ್ವದಿಸಲಿ.ʼ

ಜೈ ಶ್ರೀರಾಮ್‌.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.