![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 5, 2020, 4:17 PM IST
ಕೊಪ್ಪ: ತಾಲೂಕಿನ ನಕ್ಸಲ್ ಪೀಡಿತ ಪ್ರದೇಶವಾದ ಮೇಗುಂದ ಹೋಬಳಿಯ ಬೈರೇದೇವರು, ಕಿತ್ಲೆಗುಳಿ, ಮೆಣಸಿಹಾಡ್ಯ ಭಾಗಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ, ದುರ್ಗಮ ಪ್ರದೇಶದಲ್ಲಿರುವ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಬೈರೇದೇವರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಕಿತ್ಲೆಗುಳಿಯ ಅಂಗನವಾಡಿಯಲ್ಲಿ ಸುಮಾರು ಅರವತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು ವಿದ್ಯಾರ್ಥಿಗಳಲ್ಲಿ ಆನ್ಲೈನ್ ಶಿಕ್ಷಣ ಕುರಿತಂತೆ ಮಕ್ಕಳ ಬಳಿ ಮಾತನಾಡಿದರು. ಆಗ ವಿದ್ಯಾರ್ಥಿಗಳು ಈ ಭಾಗದಲ್ಲಿ ಆನ್ಲೈನ್ ತರಗತಿಗೆ ಮೊಬೈಲ್ ನೆಟ್ವರ್ಕ್ ಸಮಸ್ಯೆ ಎದುರಾಗುತ್ತದೆ. ಆದ್ದರಿಂದ ಮೊಬೈಲ್ ಟವರ್ ಗಳನ್ನು ನಿರ್ಮಾಣ ಮಾಡಿಸುವಂತೆ ಬೇಡಿಕೆ ಇಟ್ಟರು. ಕುಗ್ರಾಮಗಳಲ್ಲಿ ಇಂದಿಗೂ ಸಹ ಬಸ್ ವ್ಯವಸ್ಥೆಯಿಲ್ಲ. ಶಾಲೆಗಳಿಗೆ ತೆರಳಲು ಸಮಸ್ಯೆ ಆಗುತ್ತದೆ ಎಂದು ವಿದ್ಯಾರ್ಥಿಗಳು ಸಚಿವರ ಗಮನಕ್ಕೆ ತಂದರು.
ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಮೆಣಸಿನಹಾಡ್ಯದ ಬಳಿ ವಿದ್ಯಾರ್ಥಿಯ ಮನೆಗೆ ಸಚಿವರು ಭೇಟಿ ನೀಡಿ ನಂತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊಪ್ಪದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಜಿಪಂ ಸದಸ್ಯ ಎಸ್.ಎನ್. ರಾಮಸ್ವಾಮಿ, ತಾಪಂ ಅಧ್ಯಕ್ಷೆ ಜಯಂತಿ ನಾಗರಾಜ್, ಜಿಪಂ ಸಿಇಒ ಪೂವಿತ, ಉಪ ನಿರ್ದೆಶಕ ಬಿ.ವಿ. ಮಲ್ಲೇಶಪ್ಪ, ಮೇಗುಂದ ಹೋಬಳಿ ಬಿಜೆಪಿ ಅಧ್ಯಕ್ಷ ಸಂತೋಷ್, ಮಣಿಕಂಠಸ್ವಾಮಿ ಮುಂತಾದವರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.