![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Aug 7, 2020, 8:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ 19 ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಮತ್ತು ಕೋವಿಡೇತರ ಕಾರಣದಿಂದ ಇಬ್ಬರು ಮೃತಪಟ್ಟಿದ್ದಾರೆ.
53 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿವೆ. 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1043 ಆಗಿದೆ. 393 ಸಕ್ರಿಯ ಪ್ರಕರಣಗಳಿವೆ.
ಕೊಳ್ಳೇಗಾಲ ಪಟ್ಟಣ 57 ವರ್ಷದ ವ್ಯಕ್ತಿ ಆ. 1ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ಮೇಲಾಜಿಪುರದ 75 ವರ್ಷದ ವೃದ್ಧರು ಸ್ಕ್ರಾಟೆಲ್ ಗ್ಯಾಂಗ್ರಿನ್ನಿಂದ ಬಳಲುತ್ತಿದ್ದು, ಆ. 4ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮೃತಪಟ್ಟರು. ಮರಣಾನಂತರ ಕೋವಿಡ್ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ಕೆಜಿಎಫ್ನ 55 ವರ್ಷದ ವ್ಯಕ್ತಿ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಗುಂಡ್ಲುಪೇಟೆಯ ತಮ್ಮ ಬಂಧುಗಳ ಮನೆಗೆ ಬಂದಿದ್ದರು. ಆ. 6ರಂದು ಮೃತಪಟ್ಟಿದ್ದರು. ಮರಣದ ಬಳಿಕ ಪರೀಕ್ಷೆ ನಡೆಸಿದಾಗ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.
ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ನಿಂದ ಒಟ್ಟು 13 ಜನರು ಮೃತಪಟ್ಟಿದ್ಧಾರೆ. ಕೋವಿಡೇತರ ಕಾರಣದಿಂದ ಒಟ್ಟು 4 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ 626 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 573 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ.
ಚಾಮರಾಜನಗರ ತಾಲೂಕಿನಿಂದ 23, ಕೊಳ್ಳೇಗಾಲ ತಾಲೂಕಿನಿಂದ 12, ಗುಂಡ್ಲುಪೇಟೆ ತಾಲೂಕಿನಿಂದ 11, ಯಳಂದೂರು ತಾಲೂಕಿನಿಂದ 5, ಹನೂರು ತಾಲೂಕಿನಿಂದ 02 ಪ್ರಕರಣಗಳು ಶುಕ್ರವಾರ ವರದಿಯಾಗಿವೆ.
ಮಾದರಿಯಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ: ಕೋವಿಡ್ ಪಾಸಿಟಿವ್ ಇದ್ದು, ಇನ್ನಿತರ ಕಾರಣಗಳಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಿ. ವೃಷಭೇಂದ್ರಪ್ಪ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ನಡೆಸಿ ಮಾದರಿಯಾಗಿದ್ದಾರೆ.
ಗುಂಡ್ಲುಪೇಟೆಯಲ್ಲಿ ಕ್ಯಾನ್ಸರ್ನಿಂದ ಮೃತಪಟ್ಟು, ಕೋವಿಡ್ ಪಾಸಿಟಿವ್ ಇದ್ದ 55 ವರ್ಷದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ನಗರದ ಹೊರ ವಲಯದಲ್ಲಿ ನಡೆಸಲಾಯಿತು.
ಗ್ಯಾಂಗ್ರಿನ್ನಿಂದ ಮೃತಪಟ್ಟು ಪಾಸಿಟಿವ್ ಆದ ಮೇಲಾಜಿಪುರ ಗ್ರಾಮದ 75 ವರ್ಷದ ವೃದ್ಧರ ಅಂತ್ಯಕ್ರಿಯೆಯನ್ನು ಕುಟುಂಬದವರ ಕೋರಿಕೆಯ ಮೇಲೆ, ಅದೇ ಗ್ರಾಮದ ಅವರ ತೋಟದಲ್ಲಿ ನಡೆಸಲಾಯಿತು.
ವೃಷಭೇಂದ್ರಪ್ಪ ಅವರ ಜೊತೆ, ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸೂರ್ಯಕುಮಾರ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಆನಂದ್, ಮುಖಂಡ ಮೂಡ್ಲುಪುರ ನಂದೀಶ್, ಜಿಲ್ಲಾ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಂಜುನಾಥ್, ಯುವ ಮುಖಂಡ ಹರಿ ಹಾಗೂ ಕಿರಣ್ ಭಾಗವಹಿಸಿ ಅಂತ್ಯಕ್ರಿಯೆ ನಡೆಸಿಕೊಟ್ಟರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.