ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ


Team Udayavani, Aug 8, 2020, 6:59 AM IST

ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಸೋಂಕು ತಗಲಿ ಮೃತಪಟ್ಟ ಸರಕಾರಿ ಅಧಿಕಾರಿ ಮತ್ತು ಸಿಬಂದಿ ಕುಟುಂಬಕ್ಕೆ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈವರೆಗೆ ಕೋವಿಡ್ 19 ಸೇನಾನಿಗಳು ಎಂದು ಉಲ್ಲೇಖಗೊಂಡವರಿಗೆ ಮಾತ್ರ ಈ ಸೌಲಭ್ಯವಿತ್ತು.

ಇನ್ನು ಮುಂದೆ ಕೋವಿಡ್ 19 ನಿಯಂತ್ರಣದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬಂದಿಯ ಕುಟುಂಬಕ್ಕೆ ಇದು ಅನ್ವಯವಾಗಲಿದೆ.

ಕೋವಿಡ್ 19 ನಿಯಂತ್ರಣದಲ್ಲಿ ಭಾಗಿಯಾದ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳು ಸೋಂಕಿಗೆ ಸಿಲುಕಿದರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ.

ಡಾ| ಯತೀಂದ್ರ ಅವರಿಗೆ ಸೋಂಕು
ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ, ಶಾಸಕ ಡಾ| ಯತೀಂದ್ರ ಅವರಿಗೂ ಕೋವಿಡ್ 19 ಸೋಂಕು ತಗಲಿದೆ. ತನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗುವಂತೆ  ಅವರು ಟ್ವಿಟರ್‌ನಲ್ಲಿ  ಮನವಿ ಮಾಡಿಕೊಂಡಿದ್ದಾರೆ.

3 ಸಾವಿರ ತಲುಪಿದ ಸಾವಿನ ಸಂಖ್ಯೆ
ರಾಜ್ಯದಲ್ಲಿ ಶುಕ್ರವಾರ 101 ಮಂದಿ  ಸೋಂಕಿತರು  ಮೃತಪಟ್ಟಿದ್ದು, ಆ ಮೂಲಕ ಕೋವಿಡ್ 19 ಸೋಂಕಿಗೆ ಬಲಿಯಾದವರ ಸಂಖ್ಯೆ 3,000 ಗಡಿಗೆ ಬಂದು ನಿಂತಿದೆ.

ಜತೆಗೆ ಹೊಸದಾಗಿ 6,670 ಮಂದಿಗೆ ಸೋಂಕು ತಗುಲಿದ್ದು, 3,951 ಮಂದಿ ಗುಣಮುಖರಾಗಿದ್ದಾರೆ.  ಈಗ ಒಟ್ಟಾರೆ ಸೋಂಕು ಪ್ರಕರಣಗಳು 1,64,924ಕ್ಕೆ, ಮೃತರ ಸಂಖ್ಯೆ 2998ಕ್ಕೆ ಹಾಗೂ ಗುಣಮುಖರಾದವರ ಸಂಖ್ಯೆ 84,232ಕ್ಕೇರಿದೆ. ಸದ್ಯ 77,686 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ  678 ಮಂದಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ನಿತ್ಯ ಸರಾಸರಿ 94 ಮಂದಿ ಮೃತಪಟ್ಟಿದ್ದು, ರಾಜ್ಯದ ಮರಣ ದರ ಶೇ. 1.81ರಷ್ಟಿದೆ. ಸೋಂಕಿತರ ಸಾವಿನಲ್ಲಿ ದೇಶದಲ್ಲಿಯೇ ನಾಲ್ಕನೇ ಸ್ಥಾನದಲ್ಲಿದೆ. ಶುಕ್ರವಾರ 23 ಸಾವಿರ ರ್ಯಾಪಿಡ್‌ ಆ್ಯಂಟಿಜೆನ್‌, 20 ಸಾವಿರ ಆರ್‌ಟಿಪಿಸಿಆರ್‌ ಸೇರಿ ಒಟ್ಟು 43,553 ಸೋಂಕು ಪರೀಕ್ಷೆಗಳು ನಡೆದಿದ್ದು, 6,670 ಪಾಸಿಟಿವ್‌ ವರದಿಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 2,147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಳ್ಳಾರಿ 684, ಬೆಳಗಾವಿ 390, ಕಲಬುರಗಿ, ಉಡುಪಿ, ಧಾರವಾಡ ಹಾಗೂ ಮೈಸೂರು ನಾಲ್ಕು ಜಿಲ್ಲೆಗಳಲ್ಲಿ ತಲಾ 200ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಇನ್ನು ಬೆಂಗಳೂರಿನಲ್ಲಿ 1,131, ಬಳ್ಳಾರಿ 627, ಕಲಬುರಗಿ 203 ಸಹಿತ ಒಟ್ಟು 3,951 ಮಂದಿ ಗುಣಮುಖರಾಗಿದ್ದಾರೆ.

ಮೂರು ಲಕ್ಷ ಗಡಿ ದಾಟಿದ ರ್ಯಾಪಿಡ್‌ ಪರೀಕ್ಷೆ
ತ್ವರಿತವಾಗಿ ಸೋಂಕು ಪತ್ತೆಗೆ ರಾಜ್ಯದಲ್ಲಿ ಜುಲೈ 20ರಿಂದ ರ್ಯಾಪಿಡ್‌ ಆ್ಯಂಟಿ ಜೆನ್‌ ಪರೀಕ್ಷೆ ಆರಂಭಿಸಲಾಗಿದ್ದು, ಮೂರು ವಾರಗಳಲ್ಲಿ ಒಟ್ಟು 3,13,737 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಎಂದಿನಂತೆ ಆರ್‌ಟಿಪಿಸಿಆರ್‌ ಪರೀಕ್ಷೆಗಳು ನಡೆಯುತ್ತಿದ್ದು, ಸದ್ಯ ಒಟ್ಟಾರೆ ಪರೀಕ್ಷೆಗಳ ಸಂಖ್ಯೆ 16.2 ಲಕ್ಷಕ್ಕೆ ತಲುಪಿವೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.