ಕೋವಿಡ್ ಕೇರ್ ಸೆಂಟರ್ ಮಾಡಲು ಜಿಂದಾಲ್‍ಗೆ 10 ದಿನಗಳ ಗಡುವು ವಿಧಿಸಿದ ಶಾಸಕ ಸೋಮಶೇಖರರೆಡ್ಡಿ


Team Udayavani, Aug 8, 2020, 2:32 PM IST

ಕೋವಿಡ್ ಕೇರ್ ಸೆಂಟರ್ ಮಾಡಲು ಜಿಂದಾಲ್‍ಗೆ 10 ದಿನಗಳ ಗಡುವು ವಿಧಿಸಿದ ಶಾಸಕ ಸೋಮಶೇಖರರೆಡ್ಡಿ

ಬಳ್ಳಾರಿ: ಜಿಲ್ಲೆಯ ನೆಲ, ಜಲ,ಸಂಪನ್ಮೂಲ ಸೇರಿದಂತೆ ಸಕಲವನ್ನು ಉಪಯೋಗಿಸಿಕೊಂಡು ಲಾಭಗಳಿಸುತ್ತಿರುವ ಜಿಂದಾಲ್ ಈ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ನೆರವಿಗೆ ಪರಿಣಾಮಕಾರಿಯಾಗಿ ಧಾವಿಸಬೇಕಿತ್ತು; ಇದುವರೆಗೆ ಕೈಜೋಡಿಸದಿರುವುದು ವಿಷಾದಕರ. ಜಿಂದಾಲ್ ಕೂಡಲೇ 10 ದಿನದೊಳಗೆ 1 ಸಾವಿರ ಬೆಡ್‍ಗಳ ವ್ಯವಸ್ಥೆಯ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಬೇಕು; ಇಲ್ಲದಿದ್ದಲ್ಲಿ ಬಳ್ಳಾರಿಯಿಂದ ಜಿಂದಾಲ್‍ವರೆಗೆ ಪಾದಯಾತ್ರೆ ನಡೆಸಿ ಕಾರ್ಖಾನೆ ಎದುರು ಪ್ರತಿಭಟನೆಗೆ ಕುಳಿತುಕೊಳ್ಳುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಎಚ್ಚರಿಕೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು, ಬೆಡ್‍ಗಳ ಕೊರತೆ ಕಾಣುತ್ತಿದೆ. ಇದನ್ನು ನೀಗಿಸಲು ಜಿಂದಾಲ್ ಸಂಸ್ಥೆಯವರು ಸಾವಿರ ಬೆಡ್‍ಗಳ ತಾತ್ಕಾಲಿಕ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಬೇಕು ಮತ್ತು ಅಗತ್ಯ ಸಹಾಯ-ಸಹಕಾರ ಕಲ್ಪಿಸಬೇಕು.ಇದಕ್ಕೆ 10 ದಿನಗಳ ಗಡುವು ನೀಡಲಾಗುವುದು. ಅಷ್ಟರೊಳಗೆ ಸ್ಪಂದಿಸದಿದ್ದಲ್ಲಿ ಜಿಂದಾಲ್ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿರುವ ಗಣಿ ಮಾಲೀಕರು ಸಹ ಮುಂದೆ ಬಂದು ಎಲ್ಲರೊಡಗೂಡಿ 2 ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಗಳ ವ್ಯವಸ್ಥೆ ಮಾಡಿಕೊಡಬೇಕು. ಖಾಸಗಿ ಆಸ್ಪತ್ರೆಗಳು ಕೂಡಲೇ ಶೇ.50ರಷ್ಟು ಬೆಡ್‍ಗಳನ್ನು ನೀಡುವುದಕ್ಕೆ ಮುಂದಾಗಬೇಕು ಎಂದರು.

2 ವಾರ ಲಾಕ್‍ಡೌನ್ ಮಾಡಿ

ಜಿಲ್ಲೆಯಲ್ಲಿ ಕೋವಿಡ್ ಪ್ರತಿದಿನ ಅತ್ಯಂತ ವೇಗದಲ್ಲಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತ ಸಂಪೂರ್ಣವಾಗಿ ಎರಡು ವಾರಗಳ ಕಾಲ ಲಾಕ್‍ಡೌನ್ ಮಾಡುವುದಕ್ಕೆ ಮುಂದಾಗಬೇಕು ಎಂದು ಶಾಸಕ ಸೋಮಶೇಖರರೆಡ್ಡಿ ಹೇಳಿದರು.

ಲಾಕ್‍ಡೌನ್ ಮಾಡುವುದಕ್ಕಿಂತ ಮುಂಚೆಯೇ ಜನರು ಪಡಿತರ ಮತ್ತು ತರಕಾರಿಗಳ ಖರೀದಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಸಂಪೂರ್ಣ ಲಾಕ್‍ಡೌನ್ ಆದಾಗ ಈ ವೇಗಕ್ಕೆ ಕಡಿವಾಣ ಬಿಳಬಹುದು ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬಳ್ಳಾರಿ ನಗರಕ್ಕೆ 2 ವೆಂಟಲೇಟರ್ ಅಂಬ್ಯುಲೆನ್ಸ್‍ಗಳನ್ನು ನೀಡುವುದಕ್ಕೆ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಒಪ್ಪಿಕೊಂಡಿದ್ದು,ಎರಡು ವಾರಗಳಲ್ಲಿ ಬಳ್ಳಾರಿಗೆ ಬರಲಿವೆ ಎಂದರು.

ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಗೆ 12ರಿಂದ 15ಕೋಟಿ ರೂ. ಖರ್ಚು ಮಾಡಿದಲ್ಲಿ ಬಳಕೆಗೆ ಸಿದ್ಧವಾಗಲಿದೆ; ಜಿಲ್ಲಾ ಖನಿಜ ನಿಧಿ ಅಡಿ ಖರ್ಚು ಮಾಡಿ ಕೋವಿಡ್ ಸೊಂಕಿತರ ಚಿಕಿತ್ಸೆಗೆ ಬಳಕೆ ಮಾಡಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಮುಖಂಡರಾದ ವೀರಶೇಖರ್,ಶ್ರೀನಿವಾಸ್ ಮೋತ್ಕರ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.