ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ
Team Udayavani, Aug 12, 2020, 6:25 AM IST
ಹೊಸದಿಲ್ಲಿ: ಭಾರತೀಯ ಹಿಂದೂ ಅವಿಭಕ್ತ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳು 2005ಕ್ಕೆ ಮುನ್ನ ತಮ್ಮ ತಂದೆ ತೀರಿಹೋಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಿಗಬೇಕಿರುವ ಸಮಪಾಲು ಪಡೆಯಲುಅರ್ಹರು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ. ಅಲ್ಲದೆ ತನ್ನಿಂದ ಈ ಸ್ಪಷ್ಟನೆಗಾಗಿ ಕಾಯುತ್ತ, ಇತ್ಯರ್ಥಪಡಿಸದೆ ಇರುವ ಆಸ್ತಿ ಹಕ್ಕು ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಎಲ್ಲ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ.
ಹಿಂದೂ ಅವಿಭಕ್ತ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಸಮಪಾಲು ಪಡೆಯುವ ಹಕ್ಕುಳ್ಳವರು ಎಂದು 2005ರ ಸೆ. 9ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆ ತೀರ್ಪಿನ ಅನ್ವಯ ಹಿಂದೂ ಉತ್ತರಾಧಿಕಾರ ಕಾಯ್ದೆ (ಎಚ್ಎಸ್ಎ) ರೂಪಿಸಲಾಗಿದೆ. ಆದರೆ 2005ಕ್ಕೂ ಮುನ್ನ ತಂದೆ ತೀರಿದ್ದಲ್ಲಿ ಈ ಕಾಯ್ದೆ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆ ಇತ್ತು. ಈಗ ಈ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪಿನಿಂದ ಸ್ಪಷ್ಟತೆ ಲಭಿಸಿದೆ. ಅಲ್ಲದೆ 2005ರ ತೀರ್ಪಿನ ಅನಂತರ ತಂದೆ ಅಥವಾ ಪುತ್ರಿ ಬದುಕಿದ್ದರೆ ಮಾತ್ರ ಆಸ್ತಿಯಲ್ಲಿ ಸಮಾನ ಹಕ್ಕು ಕೇಳಬಹುದು ಎಂಬ ಕೆಳ ನ್ಯಾಯಾಲಯಗಳ ತೀರ್ಪುಗಳನ್ನೂ ಈ ತೀರ್ಪು ಬದಿಗಿರಿಸಿದೆ.
ಅನುಕೂಲವೇನು?
ಈ ತೀರ್ಪಿನಿಂದಾಗಿ 2005ರಲ್ಲಿ ಎಚ್ಎಸ್ಎ ಕಾಯ್ದೆ ತಿದ್ದುಪಡಿ ಆಗುವುದಕ್ಕೂ ಮುನ್ನ ಅಥವಾ ತಿದ್ದುಪಡಿಯ ಅನಂತರ ಪುತ್ರಿ ಜೀವಂತ ಇರಲಿ, ಇಲ್ಲದಿರಲಿ; ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹಳಾಗಿರುತ್ತಾಳೆ. ಪುತ್ರಿ ಜೀವಂತವಾಗಿಲ್ಲದಿದ್ದರೂ ಆಕೆಯ ಮಕ್ಕಳು ತಮ್ಮ ತಾಯಿಗೆ ಸಿಗಬೇಕಾದ ಹಕ್ಕುಗಳನ್ನು ಕೇಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.