ಆರೋಪಿಗಳ ಬಂಧನಕ್ಕೆ ಹೋದ ಕುಂಸಿ ಠಾಣೆಯ ಪೋಲೀಸರ ಮೇಲೆ ಗಂಭೀರ ಹಲ್ಲೆ:ಆರೋಪಿಗಳು ಪರಾರಿ
Team Udayavani, Aug 12, 2020, 4:45 PM IST
ಶಿವಮೊಗ್ಗ : ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲು ಹೋದ ಪೋಲೀಸರ ಮೇಲೆ ಆರೋಪಿಗಳು ಗಂಭೀರ ಹಲ್ಲೆ ನಡೆಸಿದ ಘಟನೆ ಬುಧವಾರ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಮಂಡಘಟ್ಟ ನಗರದಲ್ಲಿ ನಡೆದಿದೆ.
ಕುಂಸಿ ಠಾಣೆಯ ಪಿಎಸ್ ಐ ನವೀನ್ ಮಠಪತಿ ಹಾಗೂ ಪಿಸಿ ಬಸವಂತಪ್ಪ ಗಂಭೀರ ಹಲ್ಲೆಗೊಳಗಾದವರು, ಅವರನ್ನು ನಗರದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಮಂಡಘಟ್ಟದ ಮಧು ಹಾಗೂ ಮನು ಎಂಬುವರನ್ನು ಬಂಧಿಸಲು ಕುಂಸಿ ಠಾಣೆಯ ಪೊಲೀಸರು ಆಯನೂರು ಸಮೀಪದ ಮಂಡಗಟ್ಟದಲ್ಲಿರುವ ಆರೋಪಿಗಳ ಮನೆಯ ಮೇಲೆ ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಪಿಎಸ್ ಐ ತಲೆಗೆ ಮಾರಕಾಸ್ತ್ರದಿಂದ ಹೊಡೆಡಿದ್ದಾರೆ ಇದರಿಂದ ಗಂಭೀರ ಗಾಯಗೊಂಡು ಪ್ರಜ್ಞಾಹೀನರಾಗಿ ಬೀಳುತ್ತಿದ್ದಂತೆ ಅವರ ರಕ್ಷಣೆಗೆ ತೆರಳಿದ ಪಿಸಿ ಬಸವಂತಪ್ಪನ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಇದರಿಂದ ಬಸವಂತಪ್ಪ ಅವರ ಕೈ ಮುರಿದಿದೆ ಕೂಡಲೇ ಇಬ್ಬರನ್ನೂ ನಗರದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಪಿಎಸ್ ಐ ನವೀನ್ ಮಠಪತಿ ಚೇತರಿಸಿಕೊಂಡಿದ್ದಾರೆ.
ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಎಗ್ಗಿಲ್ಲದೆ ಸಾಗಿದ್ದು, ಈ ಹಿನ್ನೆಲೆಯಲ್ಲಿ ಪಿಎಸ್ ಐ ನಿರಂತರ ಕಾರ್ಯಾಚರಣೆಗಿಳಿದಿದ್ದರು ಎನ್ನಲಾಗಿದೆ. ಈ ಕುರಿತು ಮಂಡಘಟ್ಟ ಗ್ರಾಮದಲ್ಲಿಯೂ ದಾಳಿ ನಡೆಸಿ ನೂರಾರು ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು.
ಪಿಎಸ್ ಐ ಮೇಲೆ ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.