ಮುನ್ನೆಚ್ಚರಿಕೆ ನಿರ್ಲಕ್ಷ್ಯದಿಂದ ಹೆಚ್ಚುತ್ತಿದೆಯೇ ಅವಘಡ?


Team Udayavani, Aug 20, 2020, 7:01 AM IST

ಮುನ್ನೆಚ್ಚರಿಕೆ ನಿರ್ಲಕ್ಷ್ಯದಿಂದ ಹೆಚ್ಚುತ್ತಿದೆಯೇ ಅವಘಡ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

– ಪ್ರಶಾಂತ್‌ ಪಾದೆ
ಕುಂದಾಪುರ: ಬಹುತೇಕ ಮೀನುಗಾರರು ತಮ್ಮ ಇಲಾಖೆ ಕೊಡುವ ಹವಾಮಾನ ಸಂಬಂಧಿತ ಮುನ್ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆಯೇ ಅಥವಾ ರಿಸ್ಕ್ (ಹುಸಿ ಧೈರ್ಯ) ತೆಗೆದುಕೊಂಡು ಹೋಗುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸುತ್ತಿರುವುದರಿಂದಲೇ ಬೋಟ್‌ ಅಥವಾ ದೋಣಿಗಳ ಅವಘಡ‌ ಹೆಚ್ಚುತ್ತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಕೊಡೇರಿಯಲ್ಲಿ ಸಂಭವಿಸಿದ ದೋಣಿ ದುರಂತದ ಬಳಿಕ ಈ ಪ್ರಶ್ನೆ ಮತ್ತೂಮ್ಮೆ ಮುನ್ನೆಲೆಗೆ ಬಂದಿದೆ.

ದುರಂತ ಸಂಭವಿಸಿದ ರವಿವಾರ ಮೀನುಗಾರಿಕಾ ಅಥವಾ ಜಿಲ್ಲಾಡಳಿತ ಮಳೆ, ಗಾಳಿ, ಅಲೆಯಬ್ಬರದ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರದಿದ್ದರೂ, ಮೀನುಗಾರರ ಆಂತರಿಕ ವಲಯದಲ್ಲಿ ಮಾತ್ರ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲಿಗಿಳಿಯಬಾರದು ಎನ್ನುವ ಸಂದೇಶವಿತ್ತು ಎನ್ನಲಾಗಿದೆ. ಅದಾಗಿಯೂ ಕೆಲವರು ಭಂಡ ಧೈರ್ಯದಿಂದ ಮೀನುಗಾರಿಕೆಗೆ ತೆರಳಿ, ಈ ತರಹದ ಅಪಾಯವನ್ನು ತಂದುಕೊಳುತ್ತಿರುವುದು ಮಾತ್ರ ಕಳವಳದ ಸಂಗತಿ.

ಮೊಬೈಲ್‌ಗೆ ಸಂದೇಶ
ಕಡಲ ಅಲೆಗಳ ಅಬ್ಬರದ ಎತ್ತರ ಹಾಗೂ ಗಾಳಿಯ ವೇಗದ ತೀವ್ರತೆಯ ಕುರಿತು ಪ್ರತಿ ದಿನವೂ ದಿನ ಮುಂಚಿತವಾಗಿ ಖಾಸಗಿ ಸಂಸ್ಥೆಯೊಂದರಿಂದ ಮೀನುಗಾರರ ಮೊಬೈಲ್‌ಗೆ ಸಂದೇಶ ಬರುತ್ತದೆ. ಆ. 15ರಂದು ಮರು ದಿನದ ಮಾಹಿತಿಯನ್ನು ಕಳುಹಿಸಿದ್ದು, ಅದರಲ್ಲಿ ಗಂಗೊಳ್ಳಿ ಭಾಗದಲ್ಲಿ ಅಲೆಯಬ್ಬರ ಅಪಾಯಮಟ್ಟದಲ್ಲಿ ಇರುತ್ತದೆ ಎನ್ನುವ ಸಂದೇಶ ಬಂದಿತ್ತು.

ನಿರ್ಲಕ್ಷ್ಯ ತರವಲ್ಲ
ಅಲೆಗಳ ಅಬ್ಬರ 5 ಅಡಿಗಿಂತ ಜಾಸ್ತಿ ಹಾಗೂ ಗಾಳಿಯ ವೇಗ ಗಂಟೆಗೆ 20 ಕಿ.ಮೀ. ಗಿಂತ‌ ಹೆಚ್ಚಿದ್ದರೆ ಅಪಾಯ ಎಂದು ಗೊತ್ತಿದ್ದರೂ ಕೊಡೇರಿಯಲ್ಲಿ ಮೀನುಗಾರರು ಹವಾಮಾನ ವರದಿಯನ್ನು ನಿರ್ಲಕ್ಷಿಸಿದ್ದಾರೆ. ಈ ತರಹದ ನಿರ್ಲಕ್ಷ್ಯದಿಂದಲೇ ಆಗಾಗ ಸಮುದ್ರದಲ್ಲಿ ಇಂತಹ ದುರಂತಗಳು ಮರುಕಳಿಸುತ್ತಿವೆ. ಹವಾಮಾನ ವರದಿಯು ಹೆಚ್ಚಿನ ಸಂದರ್ಭ ಶೇ. 100ರಷ್ಟು ಸತ್ಯವಾಗಿರುತ್ತದೆ. ಇದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎನ್ನುವುದು ಇಲಾಖೆಯ ಅಧಿಕಾರಿಯೊಬ್ಬರ ಅಭಿಪ್ರಾಯ.

ಪರಿಸ್ಥಿತಿ ಹೇಗಿತ್ತು?
ಸಾಮಾನ್ಯವಾಗಿ ನಾಡದೋಣಿಗಳು ಮೀನುಗಾರಿಕೆಗೆ ತೆರಳಬೇಕಾದರೆ ಅಲೆಗಳ ಅಬ್ಬರ 5 ಅಡಿಗಿಂತ ಕಡಿಮೆ ಇರಬೇಕು. ಗರಿಷ್ಠವೆಂದರೆ 6 ಅಡಿ ಇರಬೇಕು. ಗಾಳಿಯ ವೇಗ ಗಂಟೆಗೆ 18 ಕಿ.ಮೀ. ಒಳಗೆ ಇರಬಹುದು. ದೊಡ್ಡ ಬೋಟ್‌ ಹೊರತುಪಡಿಸಿ, ಪರ್ಸಿನ್‌ ಮತ್ತಿತರ ಸಣ್ಣ ಬೋಟುಗಳು ಕೂಡ ಹೆಚ್ಚು ಕಡಿಮೆ ಇದನ್ನು ಪಾಲಿಸುತ್ತವೆ. ಆದರೆ ದುರಂತ ಸಂಭವಿಸಿದ ದಿನ ಮೀನುಗಾರಿಕೆಗೆ ತೆರಳಿದಾಗ ಅಬ್ಬರ, ಗಾಳಿಯ ವೇಗ ಕಡಿಮೆಯಿದ್ದರೂ ಅವರು ವಾಪಸ್‌ ಬರುವಾಗ ಅಲೆಗಳ ಅಬ್ಬರವು ತೀವ್ರವಾಗಿತ್ತು ಎನ್ನುತ್ತಾರೆ ಮೀನುಗಾರ ರಮೇಶ್‌ ಖಾರ್ವಿ ಕೊಡೇರಿ.

ಮುನ್ನೆಚ್ಚರಿಕೆ ಕೊಟ್ಟಿರಲಿಲ್ಲ
ಮೀನುಗಾರರಿಗೆ ಆ ದಿನ ಕಡಲಿಗಿಳಿ ಯದಂತೆ ಯಾವುದೇ ಮುನ್ನೆಚ್ಚರಿಕೆ ಕೊಟ್ಟಿರಲಿಲ್ಲ. ನಮಗೆ ಹವಾಮಾನ ಇಲಾಖೆಯಿಂದ ಬಂದ ವರದಿ ಪ್ರಕಾರ ಮುನ್ನೆಚ್ಚರಿಕೆ ಕೊಡುವ ಸಂಭವ ಇರಲಿಲ್ಲ. ಆದರೂ ಮೀನುಗಾರರು ಈ ಸಮಯದಲ್ಲಿ ಸಾಧ್ಯವಾದಷ್ಟು ನೋಡಿಕೊಂಡು ಕಡಲಿ ಗಿಳಿಯುವುದು ಸೂಕ್ತ. ರಿಸ್ಕ್ ತೆಗೆದುಕೊಳ್ಳುವುದು ಸರಿಯಲ್ಲ. ಮೃತಪಟ್ಟ ಮೀನುಗಾರರಿಗೆ ಇಲಾಖೆಯ ಮಾನದಂಡದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
– ಗಣೇಶ್‌ ಕೆ., ಉಪ ನಿರ್ದೇಶಕರು, ಮೀನುಗಾರಿಕಾ ಇಲಾಖೆ, ಉಡುಪಿ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.