![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 20, 2020, 3:10 PM IST
ಗಂಗಾವತಿ: ತುಂಗಭದ್ರಾ ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ 1.10 ಲಕ್ಷ ಕ್ಯೂಸೆಕ್ ನೀರನ್ನು ನದಿ ಮೂಲಕ ಹರಿಬಿಡಲಾಗುತ್ತಿದೆ.
ಇದರಿಂದ ಕಲ್ಯಾಣ ಕರ್ನಾಟಕವನ್ನು ಮಧ್ಯೆ ಕರ್ನಾಟಕದಿಂದ ಜೋಡಿಸುತ್ತಿದ್ದ ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆಗೆ ಒಂದು ಅಡಿ ಬಾಕಿ ಇದ್ದು ವಾಹನ ಮತ್ತು ಜನಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿ ಪೊಲೀಸ್ ಕಾವಲು ಹಾಕಿದೆ. ಬಹುತೇಕ
ವಾಹನಗಳು ಕಡೆಬಾಗಿಲು ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸುತ್ತಿವೆ.
ಆನೆಗೊಂದಿಯ ಇತಿಹಾಸ ಪ್ರಸಿದ್ಧ ನವವೃಂದಾವನ ಗಡ್ಡಿ, ಚಿಂತಾಮಣಿ ಹತ್ತಿರ ಇರುವ 60 ಕಾಲಿನ ಮಂಟಪ (ಶ್ರೀಕೃಷ್ಣದೇವರಾಯ ಸಮಾಧಿ ) ಪೂರ್ಣ ಜಲಾವೃತವಾಗಿದೆ. ವಿರೂಪಾಪೂರಗಡ್ಡಿ ಮುಖ್ಯರಸ್ತೆ ನೀರಿನಲ್ಲಿ ಮುಳುಗಡೆಯಾಗಿ ಜನಸಂಚಾರ ಸ್ಥಗಿತವಾಗಿದೆ.
ತುಂಗಭದ್ರಾ ನದಿಯಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ತಾಲೂಕು ಆಡಳಿತ ಡಂಗುರ ಸಾರಿದೆ. ತಾಲೂಕಿನ ಸಾಣಾಪೂರ ಆನೆಗೊಂದಿ, ಚಿಕ್ಕಜಂಗತಲ್ ಸೇರಿ ನದಿ ಪಾತ್ರದ ಗ್ರಾಮಗಳಿಗೆ ತಹಶೀಲ್ದಾರ್
ಆರ್. ಕವಿತಾ, ಗ್ರಾಮೀಣ ಸಿಪಿಐ ಸುರೇಶ ತಳವಾರ, ಪಿಎಸ್ಐ ಜೆ.ದೊಡ್ಡಪ್ಪ ನೇತೃತ್ವದ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.