ಬೆಳ್ತಂಗಡಿಯ ಯಾಕೂಬ್, ಕಲಬುರಗಿಯ ಸುರೇಖಾ ಸೇರಿದಂತೆ ಒಟ್ಟು 47 ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ
ಕೇಂದ್ರೀಯ ವಿದ್ಯಾಲಯ ಸಂಘಟನ್, ಬೆಂಗಳೂರು - ಇಲ್ಲಿ ಶಿಕ್ಷಕರಾಗಿರುವ ಚೆಮ್ಮಲರ್ ಷಣ್ಮುಗನ್ ಅವರೂ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ
Team Udayavani, Aug 21, 2020, 9:12 PM IST
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಷಲ್ ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಸೇರಿದಂತೆ ಒಟ್ಟು 47 ಶಿಕ್ಷಕರಿಗೆ 2020ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಘೋಷಿಸಲಾಗಿದೆ.
ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯವು ಈ ಸಾಲಿನ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು ಅದರಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಶಿಕ್ಷಕರು ಪ್ರಶಸ್ತಿ ಪುರಸ್ಕೃತರಾಗಿರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ.
ಕೇಂದ್ರೀಯ ವಿದ್ಯಾಲಯ ಸಂಘಟನ್, ಬೆಂಗಳೂರು ಇಲ್ಲಿ ಶಿಕ್ಷಕರಾಗಿರುವ ಚೆಮ್ಮಲರ್ ಷಣ್ಮುಗನ್ ಅವರೂ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ.
ಈ ಸಚಿವಾಲಯವು ನೇಮಕ ಮಾಡಿದ್ದ ಸ್ವತಂತ್ರ ತೀರ್ಪುಗಾರರ ಸಮಿತಿಯು ಈ ಪಟ್ಟಿಯನ್ನು ಅಂತಿಮಗೊಳಿಸಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ 7 ಸಾಂಸ್ಥಿಕ ಆಯ್ಕೆ ಸಮಿತಿ ಅಂತಿಮಗೊಳಿಸಿದ್ದ 153 ಶಿಕ್ಷಕರ ಅರ್ಜಿಯನ್ನು ಪರಿಶೀಲಿಸಿ ಒಟ್ಟು 45 ಶಿಕ್ಷಕರನ್ನು ಈ ಬಾರಿಯ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಈ ಬಾರಿಯ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರ ಪಟ್ಟಿಯಲ್ಲಿ ಉತ್ತರ ಪ್ರದೇಶ ಹಾಗೂ ಗುಜರಾತ್ ರಾಜ್ಯಗಳ ತಲಾ 3 ಶಿಕ್ಷಕರಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಒಡಿಸ್ಸಾ, ಪಶ್ಚಿಮ ಬಂಗಾಲ, ಜಾರ್ಖಂಡ್ ಮತ್ತು ತಮಿಳುನಾಡು ರಾಜ್ಯಗಳ ಹಾಗೂ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಂದ ತಲಾ ಇಬ್ಬರು ಶಿಕ್ಷಕರಿಗೆ ಈ ಗೌರವ ಲಭಿಸಿದೆ.
ಇನ್ನುಳಿದಂತೆ ಹರ್ಯಾಣ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಉತ್ತರಾಖಂಡ, ರಾಜಸ್ಥಾನ, ಗೋವಾ, ಮಹಾರಾಷ್ಟ್ರ, ಪುದುಶ್ಯೇರಿ, ಲಢಾಕ್ (ಕೇಂದ್ರಾಡಳಿತ ಪ್ರದೇಶ), ಛತ್ತೀಸ್ ಗಢ, ಮೇಘಾಲಯ, ತ್ರಿಪುರ, ಅಸ್ಸಾಂ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ತಲಾ ಒಬ್ಬರು ಶಿಕ್ಷಕರು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದನ್ನು ಹೊರತುಪಡಿಸಿ, ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜುಕೇಷನ್, ದೆಹಲಿ ; ಅಟೊಮಿಕ್ ಎನರ್ಜಿ ಎಜುಕೇಷನ್ ಸೊಸೈಟಿ, ಮುಂಬಯಿ ; ನವೋದಯ ವಿದ್ಯಾಲಯ ಸಮಿತಿ, ಅಲಪ್ಪುಝ, ಕೇರಳ ; ಏಕಲವ್ಯ ಮಾಡೆಲ್ ರೆಸಿಡೆನ್ಷಿಯಲ್ ಸ್ಕೂಲ್ಸ್, ಉತ್ತರಾಖಂಡ ; ಕೇಂದ್ರೀಯ ವಿದ್ಯಾಲಯ ಸಂಘಟನ್, ಬೆಂಗಳೂರು ; ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ಸ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್, ಜಾರ್ಖಂಡ್ ಇವುಗಳ ತಲಾ ಒಬ್ಬರು ಶಿಕ್ಷಕರೂ ರಾಷ್ಟ್ರಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಈ ಬಾರಿ ಶಿಕ್ಷಕರ ರಾಷ್ಟ್ರಪ್ರಶಸ್ತಿ ಪಟ್ಟಿಯಲ್ಲಿ ಭಿನ್ನ ಸಾಮರ್ಥ್ಯ ವಿಭಾಗದಡಿಯಲ್ಲಿ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದ್ದು ಇವರಲ್ಲಿ ಒಬ್ಬರು ಗುಜರಾತ್ ಹಾಗೂ ಇನ್ನೊಬ್ಬರು ಬಿಹಾರ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.