ಆನ್ಲೈನ್ ಶಿಕಣ: ಶಿಕ್ಷಕರಿಗೆ ಮಾರ್ಗಸೂಚಿ
Team Udayavani, Aug 23, 2020, 12:06 PM IST
ಮುಂಬಯಿ, ಆ. 21: ಮುಂಬಯಿ ಮನಪಾ ಶಿಕ್ಷಣ ವಿಭಾಗವು ಆನ್ ಲೈನ್ ತರಗತಿ ಕುರಿತಂತೆ ಶಿಕ್ಷಕರಿಗೆ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದ್ದು, ಸ್ಪಷ್ಟವಾಗಿ ಮಾತನಾಡಲು, ಸಂಯುಕ್ತ ಮತ್ತು ಸಂಕೀರ್ಣ ವಾಕ್ಯಗಳನ್ನು ತಪ್ಪಿಸಲು ಮತ್ತು ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಬೇಕು ಎಂದು ತಿಳಿಸಿದೆ.
ಕೋವಿಡ್ ಹಿನ್ನೆಲೆ ಶಾಲೆಗಳು ಆನ್ಲೈನ್ ತರಗತಿಗಳನ್ನು ಮಾತ್ರ ನಡೆಸುತ್ತಿರುವುದರಿಂದ ಬೋಧನೆ ಗುಣಮಟ್ಟವನ್ನು ಸುಧಾರಿಸಲು ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕರು ಮಹಾರಾಷ್ಟ್ರ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ಪಠ್ಯಕ್ರಮ ಹಾಗೂ ರಾಜ್ಯ ಶಿಕ್ಷಣ ಇಲಾಖೆಯ ಪಾಠ್ಯ ಯೋಜನೆ ಅನುಸರಿಸುವಂತೆ ಹೇಳಿದೆ. ಕಲಿಕೆಯಲ್ಲಿ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಹಿಂದಿನ ತರಗತಿಗಳಲ್ಲಿ ಕಲಿಸಿದ ವಿಷಯಗಳ ಹಿನ್ನೆಲೆಯ ಮೇಲೆ ಕೇಂದ್ರೀಕರಿಸಲು ಶಿಕ್ಷಕರಿಗೆ ಹೇಳಿದೆ.
ಆರಂಭದಲ್ಲಿ ಅಣಕು ತರಗತಿಗಳನ್ನು ನಡೆಸಬೇಕು ಮತ್ತು ಪಾಠಗಳನ್ನು ಹೆಚ್ಚು ಆಸಕ್ತಿಕರಗೊಳಿಸಲು ಪವರ್ ಪಾಯಿಂಟ್, ಆನಿಮೇಷನ್, ವೀಡಿಯೋ ತುಣುಕುಗಳು ಮುಂತಾದ ಸಂವಾದಾತ್ಮಕ ಸಾಧನಗಳನ್ನು ಬಳಸಲು ಪ್ರಯತ್ನಿಸಬೇಕು. ಮಾತನಾಡುವಾಗ ಅವರು ಸರಿಯಾದ ಧ್ವನಿ, ಆಶ್ಚರ್ಯ, ವಿರಾಮ ಮತ್ತು ವಿಚಾರಣೆಯನ್ನು ಬಳಸಬೇಕು ಎಂದು ಮಾರ್ಗ ಸೂಚಿಯಲ್ಲಿ ಕಟ್ಟುನಿಟ್ಟಾಗಿ ತಿಳಿಸಿವೆ.
ತರಗತಿಗಳು ನಡೆಯುತ್ತಿರುವಾಗ ಯಾವುದೇ ನೆಟ್ವರ್ಕ್ ಸಮಸ್ಯೆಗಳು ಅಥವಾ ಗೊಂದಲಗಳು ಇಲ್ಲ ಎಂದು ಶಿಕ್ಷಕರು ಖಚಿತಪಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಹೇಳಿವೆ. ಶಿಕ್ಷಕರಿಗೆ ಸಹಾಯ ಮಾಡಲು ಕೆಲವು ಮಾರ್ಗಸೂಚಿಗಳ ಅಗತ್ಯವಿದೆ ಎಂದು ಬಿಎಂಸಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಆನ್ಲೈನ್ ಕಲಿಕೆ ಎಂದರೆ ಅದು ಏಕಮುಖ ಪ್ರಕ್ರಿಯೆ ಎಂದಲ್ಲ. ಈ ಪ್ರಕ್ರಿಯೆಯನ್ನು ಸುಲಭ ಮತ್ತು ವಿದ್ಯಾರ್ಥಿ ಸ್ನೇಹಿಯನ್ನಾಗಿ ಮಾಡಲು ಬಿಎಂಸಿ ಪ್ರಯತ್ನಿಸುತ್ತಿರುವುದು ಒಳ್ಳೆಯ ವಿಷಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.