ಅರಸು ಮಾದರಿ ಅನುಸರಿಸಲು ಡಿಕೆಶಿ “ಸಿದ್ಧ’
ಹೊಸ ಮುಖಗಳಿಗೆ ಹುಡುಕಾಟ ಸಿದ್ದರಾಮಯ್ಯರಿಂದ ಸಹಕಾರದ ಭರವಸೆ
Team Udayavani, Aug 25, 2020, 6:07 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ ಹೊಸ ಮುಖಗಳ ಹುಡುಕಾಟ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು “ದೇವರಾಜ ಅರಸು ಮಾದರಿ’ಯನ್ನು ಪಾಲಿಸಲು ಸಿದ್ಧರಾಗಿದ್ದಾರೆ. ಈ ಪ್ರಯೋಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಯಾವುದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಎದುರಾ ದರೂ ಅಭ್ಯರ್ಥಿಗಳು ಸಿದ್ಧರಾಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ 65ರಿಂದ 70 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಜಿಲ್ಲಾಧ್ಯಕ್ಷರಿಗೆ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಖಾಲಿ ಕ್ಷೇತ್ರಗಳಿಗೆ ಆದ್ಯತೆ
ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರಸ್ತುತ 64 ಕಾಂಗ್ರೆಸ್ ಶಾಸಕರಿದ್ದಾರೆ. ಉಳಿದೆಡೆ ಮಾಜಿ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎನ್ನುವುದರ ಮಾಹಿತಿ ಪಡೆಯಲು ಡಿಕೆಶಿ ನಿರ್ಧರಿಸಿದ್ದಾರೆ. ಸೋತವರು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದ್ದಾರೆ. ಜತೆಗೆ ಕಳೆದ ಚುನಾವಣೆಯಲ್ಲಿ 20 ಸಾವಿರಕ್ಕಿಂತ ಅಧಿಕ ಮತಗಳಿಂದ ಸೋತವರು ಹಾಗೂ ಸತತವಾಗಿ ಮೂರು ಚುನಾವಣೆಗಳಲ್ಲಿ ಪರಾಭವಗೊಂಡವರಿಗೂ ಟಿಕೆಟ್ ನೀಡದಿರಲು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಕಾಂಗ್ರೆಸ್ ಇಬ್ಭಾಗವಾದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ನ ಬಹುತೇಕ ಹಿರಿಯ ನಾಯಕರು ವೀರೇಂದ್ರ ಪಾಟೀಲ್ ನೇತೃತ್ವದ ಸಂಸ್ಥಾ ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿದ್ದರು. ಆಗ ರಾಜ್ಯದಲ್ಲಿ ಇಂದಿರಾ ಕಾಂಗ್ರೆಸ್ನ ನೇತೃತ್ವ ವಹಿಸಿಕೊಂಡಿದ್ದ ಡಿ. ದೇವರಾಜ್ ಅರಸು ಅವರು ಚುನಾವಣೆಯಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದ್ದರು. ಅದರಲ್ಲಿ ಯಶಸ್ವಿಯಾದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಹೊಸಬರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ಮಾಧ್ಯಮ ಜತೆಯೂ ಕೆಲವರು ಸೇರಿಕೊಂಡಿದ್ದಾರೆ: ರಮ್ಯಾ
ಬೆಂಗಳೂರು: ಕಾಂಗ್ರೆಸ್ನ ಕೆಲವು ನಾಯಕರು ಬಿಜೆಪಿ ಜತೆ ಮಾತ್ರ ಸೇರಿ ಕೊಂಡದ್ದಲ್ಲ, ಅವರು ಮಾಧ್ಯಮಗಳ ಜತೆಯೂ ಸೇರಿಕೊಂಡಿದ್ದಾರೆ ಎಂದು ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಪೂರಕವಾಗಿ ಇವರು ಮೇಲಿನ ಆರೋಪದ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AFC U20 Asian Cup Qualifiers: ಅಂಡರ್-20 ಏಷ್ಯಾ ಅರ್ಹತಾ ಫುಟ್ಬಾಲ್ಗೆ ಭಾರತ ತಂಡ
Duleep Trophy: ಇಂಡಿಯಾ ಎ, ಡಿ ತಂಡಗಳಿಗೆ 300 ಲೀಡ್
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.