ತುರ್ತು ಸಂದರ್ಭದಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ವಿಶ್ವದ ದೊಡ್ಡಣ್ಣ ಗ್ರೀನ್‌ ಸಿಗ್ನಲ್‌


Team Udayavani, Aug 25, 2020, 6:16 AM IST

ತುರ್ತು ಸಂದರ್ಭದಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ವಿಶ್ವದ ದೊಡ್ಡಣ್ಣ ಗ್ರೀನ್‌ ಸಿಗ್ನಲ್‌

ಲಂಡನ್‌: ಇಲ್ಲಿನ ಸಂತಾ ಸ್ಕೂಲ್‌ನ ಹೊರಗೆ ತಾಪಮಾನ ಪರೀಕ್ಷೆ ನಡೆಸುತ್ತಿರುವುದು.

ವಾಷಿಂಗ್ಟನ್‌: ಸೋಂಕು ಪೀಡಿತ ರಾಷ್ಟ್ರಗಳಲ್ಲಿ ಅಗ್ರಸ್ಥಾನದಲ್ಲಿರುವ ಅಮೆರಿಕ ಸೋಂಕಿನ ವಿರುದ್ಧದ ಚಿಕಿತ್ಸೆಗೆ ತುರ್ತು ಸಂದರ್ಭದಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಗುಣಮುಖರಾದ ಸೋಂಕಿತ ರೋಗಿಗಳ ರಕ್ತದ ಪ್ಲಾಸ್ಮಾವನ್ನು ವೈದ್ಯರು ತುರ್ತು ಸಂದರ್ಭದಲ್ಲಿ ಮತ್ತೂಬ್ಬ ರೋಗಿಯ ಚಿಕಿತ್ಸೆಗೆ ಬಳಸಲು ಅಮೆರಿಕದ ಅಧಿಕಾರಿಗಳು ಅನುಮತಿ ನೀಡಿದ್ದಾರೆ.

ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಧ್ವಂಸಗೊಳಿಸಿರುವ ಹಾಗೂ ನವೆಂಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಎರಡನೇ ಅವಧಿಗೆ ದೇಶದ ಅಧ್ಯಕ್ಷರಾಗುವ ಕನಸು ಕಾಣುತ್ತಿರುವ ಟ್ರಂಪ್‌ ಅವರ ಮೇಲೆ ಮಾರಕ ಸಾಂಕ್ರಾಮಿಕವನ್ನು ನಿಯಂತ್ರಿಸುವ ಬಲುದೊಡ್ಡ ಸವಾಲು ಇರುವ ಸನ್ನಿವೇಶದಲ್ಲಿ, ಫ‌ುಡ್‌ ಆ್ಯಂಡ್‌ ಡ್ರಗ್‌ ಅಡ್ಮಿನಿಸ್ಟ್ರೇಷನ್‌ ವಿಭಾಗ ಈ ಆದೇಶ ಹೊರಡಿಸಿದೆ.

ಪ್ಲಾಸ್ಮಾದಲ್ಲಿ ಶಕ್ತಿಶಾಲಿ ಆ್ಯಂಟಿಬಾಡಿಗಳಿದ್ದು, ಇದು ಸೋಂಕಿತರು ವೇಗವಾಗಿ ಗುಣಮುಖರಾಗಲು ನೆರವಾಗಲಿದೆ ಹಾಗೂ ರೋಗಿಗಳ ಸ್ಥಿತಿ ಗಂಭೀರವಾಗುವುದನ್ನು ತಡೆಯುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಪ್ಲಾಸ್ಮಾ ಕೋವಿಡ್‌ ಚಿಕಿತ್ಸೆಯಲ್ಲಿ ಪರಿಣಾಮಕಾರಿ, ಇದರ ಸಂಭಾವ್ಯ ಪ್ರಯೋಜನಗಳನ್ನು ಮತ್ತು ಅಪಾಯ ಸಾಧ್ಯತೆಯ ನ್ನು ಅಂದಾಜಿಸಲಾಗಿದೆ ಎಂದು ಎಫ್ಡಿಎ ಹೇಳಿಕೆ ನೀಡಿದ್ದು, ಈ ಚಿಕಿತ್ಸಾ ವಿಧಾನವನ್ನು ಹಲವು ದೇಶಗಳಲ್ಲಿ ಅನುಸರಿಸಲಾಗುತ್ತಿದ್ದರೂ, ಇದರ ಪರಿಣಾಮದ ಬಗ್ಗೆ ತಜ್ಞರ ಮಟ್ಟದಲ್ಲಿ ಇನ್ನೂ ಚರ್ಚೆ ಮುಂದುವರಿದಿದೆ.

ಟೋಕಿಯೊ ಪ್ಯಾರಾಲಿಂಪಿಕ್‌ ಮೇಲೆ ಕೊರೊನಾ ಕರಿನೆರಳು
ಟೋಕಿಯೊ: ಎಲ್ಲ ಸರಿ ಇದ್ದರೆ ಸೋಮವಾರ ಟೋಕಿಯೊ ಪ್ಯಾರಾಲಿಂಪಿಕ್‌ ಕ್ರೀಡಾಕೂಟ ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್‌ ಸೋಂಕಿನಿಂದಾಗಿ ಆಗಸ್ಟ್‌ 24 ರಿಂದ ಆರಂಭವಾಗಬೇಕಿದ್ದ ಈ ಕ್ರೀಡಾಕೂಟ ಒಂದು ವರ್ಷಕ್ಕೆ ಮುಂದೂಡಿಕೆಯಾಗಿದೆ.

ಜುಲೈನಿಂದಲೂ ಒಲಿಂಪಿಕ್‌ ಆತಿಥೇಯ ನಗರವಾಗಿರುವ ಟೋಕಿಯೊದಲ್ಲಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಕ್ರೀಡಾಕೂಟದ ಆಯೋಜ ನೆ ಕುರಿತು ಅನಿಶ್ಚಿತತೆ ಕಾಡುತ್ತಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.

ಸೋಂಕು ತ್ವರಿತವಾಗಿ ಹರಡುತ್ತಿದ್ದು, ಮುನ್ನೆಚ್ಚರಿಕೆ ಕ್ರಮದಿಂದ ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಅನ್ನು 2021 ರ ಬೇಸಿಗೆಗೆ ಮುಂದೂಡಲು ಅಂ.ರಾ.ಒಲಿಂಪಿಕ್‌ ಸಮಿತಿ ಮತ್ತು ಸ್ಥಳೀಯ ಸಂಘಟಕರು ಮಾರ್ಚ್‌ ಅಂತ್ಯದಲ್ಲಿ ನಿರ್ಧರಿಸಿತ್ತು.

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.