![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 25, 2020, 7:39 PM IST
ಬೀದರ್: ಜಿಲ್ಲೆಯಲ್ಲಿ ಮಂಗಳವಾರ ಹೆಮ್ಮಾರಿ ಕೋವಿಡ್ ಸೋಂಕಿನ 61 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4213ಕ್ಕೆ ಏರಿಕೆ ಆಗಿದೆ.
ಬೀದರ ನಗರ-ತಾಲೂಕಿನಲ್ಲಿ 23 ಜನರಿಗೆ ಸೋಂಕು ತಗುಲಿದ್ದು, ತಾಲೂಕಿನ ಒಟ್ಟು ಸೋಂಕಿತರ ಸಂಖ್ಯೆ 1516ಗೆ ವೃದ್ಧಿಸಿದೆ. ಬಸವಕಲ್ಯಾಣ- ಹುಲಸೂರಿನಲ್ಲಿ 14 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 686ಗೆ ಏರಿಕೆ ಆಗಿದೆ.
ಭಾಲ್ಕಿ ತಾಲೂಕಿನ 9 ಜನರಿಗೆ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 611ಕ್ಕೆ ವೃದ್ಧಿಸಿದೆ. ಔರಾದ- ಕಮಲನಗರ ತಾಲೂಕಿನ 8 ಜನರಿಗೆ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 632ಕ್ಕೆ ತಲುಪಿದೆ. ಹುಮನಾಬಾದ- ಚಿಟಗುಪ್ಪ ತಾಲೂಕಿನ 6 ಜನರಿಗೆ ಸೋಂಕು ಕಂಡು ಬಂದಿದ್ದು, ತಾಲೂಕಿನ ಸೋಂಕಿತರ ಸಂಖ್ಯೆ 741ಕ್ಕೆ ಏರಿಕೆ ಕಂಡಿದ್ದರೆ ಅನ್ಯ ರಾಜ್ಯ, ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 27ಕ್ಕೆ ತಲುಪಿದೆ.
ಮಂಗಳವಾರ ಹೊಸ ಸೋಂಕಿತರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 4213ಗೆ ತಲುಪಿದ್ದು, ಈ ಪೈಕಿ 128 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಒಂದೇ ದಿನ 84 ಜನ ಸೇರಿ ಈವರೆಗೆ 3382 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಸದ್ಯಕ್ಕೆ 699 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 63,614 ಜನರ ಗಂಟಲು ಮಾದರಿ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 59,001 ಜನರದ್ದು ನೆಗೆಟಿವ್ ಬಂದಿದ್ದು, ಇನ್ನೂ 401 ಜನರ ವರದಿ ಬರುವುದು ಬಾಕಿ ಇದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.