ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ


Team Udayavani, Aug 30, 2020, 6:50 AM IST

ಒಂದು ದೇಶ, ಒಂದು ಚುನಾವಣೆ ಸನ್ನಿಹಿತ? ತ್ರಿಸ್ತರ ಏಕಕಾಲ ಚುನಾವಣೆ

ಹೊಸದಿಲ್ಲಿ: ಬಿಜೆಪಿಯ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ “ಒಂದು ದೇಶ -ಒಂದು ಚುನಾವಣೆ’ಯ ದಿನಗಳು ಸನ್ನಿಹಿತವಾಗುತ್ತಿವೆಯೇ?

ಇತ್ತೀಚಿನ ಬೆಳವಣಿಗೆಗಳು ಇದಕ್ಕೆ ಪೂರಕವಾಗಿವೆ. ಆ.13ರಂದು ಪ್ರಧಾನಿ ಕಾರ್ಯಾಲಯವು “ದೇಶಕ್ಕೊಂದೇ ಮತದಾರರ ಪಟ್ಟಿ’ ತಯಾರಿಸುವ ಸಲುವಾಗಿ ಅಧಿಕಾರಿಗಳ ಸಭೆ ನಡೆಸಿದೆ. ಸದ್ಯ ಕೇಂದ್ರ ಚುನಾವಣ ಆಯೋಗ ಮತ್ತು ರಾಜ್ಯ ಚುನಾವಣ ಆಯೋಗಗಳು ಪ್ರತ್ಯೇಕವಾಗಿ ಮತದಾರರ ಪಟ್ಟಿ ತಯಾರಿಸುತ್ತಿವೆ. ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಒಂದು ದೇಶ, ಒಂದು ಚುನಾವಣೆ ಸುಲಭ ಎಂಬ ಉದ್ದೇಶದಿಂದ ಸಭೆ ನಡೆಸಲಾಗಿದೆ.

ಪ್ರಧಾನಮಂತ್ರಿಗಳ ಪ್ರಿನ್ಸಿಪಲ್‌ ಸೆಕ್ರೆಟರಿ ಪಿ.ಕೆ.ಮಿಶ್ರಾ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದೆ. ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್‌ ಚೌಬಾ, ಸಂಸದೀಯ ಕಾರ್ಯದರ್ಶಿ ಜಿ. ನಾರಾಯಣ ರಾಜು, ಪಂ.ರಾಜ್‌ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಮತ್ತು ಕೇಂದ್ರ ಚುನಾವಣ ಆಯೋಗದ ಮಹಾ ಕಾರ್ಯದರ್ಶಿ ಉಮೇಶ್‌ ಸಿನ್ಹಾ ಭಾಗಿಯಾಗಿದ್ದರು.

ಒಂದು ವೇಳೆ ದೇಶಕ್ಕೊಂದೇ ಮತದಾರರ ಪಟ್ಟಿ ಸಿದ್ಧವಾದರೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶಕ್ಕೆ ಇನ್ನಷ್ಟು ಸನಿಹವಾದಂತಾಗುತ್ತದೆ ಎಂಬುದು ಕೇಂದ್ರ ಸರಕಾರದ ಚಿಂತನೆ.

ಎರಡು ಆಯ್ಕೆಗಳ ಬಗ್ಗೆ ಚರ್ಚೆ
ಈ ಸಭೆಯಲ್ಲಿ ಪ್ರಮುಖವಾಗಿ ಎರಡು ಆಯ್ಕೆಗಳ ಬಗ್ಗೆ ಚರ್ಚೆಯಾಗಿದೆ. ಒಂದು, ಆರ್ಟಿಕಲ್‌ 243 ಕೆ ಮತ್ತು 243 ಝಡ್ಎಗೆ ಸಾಂವಿಧಾನಿಕ ತಿದ್ದುಪಡಿ ತರುವುದು. ಈ ಮೂಲಕ ದೇಶದ ಎಲ್ಲ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ಕಡ್ಡಾಯ ಮಾಡುವುದು.

ಎರಡು, ರಾಜ್ಯ ಸರಕಾರಗಳ ಮನವೊಲಿಸಿ, ಕೇಂದ್ರ ಚುನಾವಣ ಆಯೋಗ ರೂಪಿಸುವ ಮತದಾರರ ಪಟ್ಟಿಯನ್ನೇ ಎಲ್ಲ ಚುನಾವಣೆಗಳಲ್ಲಿ ಬಳಸುವಂತೆ ಮಾಡುವುದು.

ಏನಿದು 243 ಕೆ ಮತ್ತು 243 ಝಡ್‌ಎ?
ಈ ಎರಡೂ ಪರಿಚ್ಛೇದಗಳು ರಾಜ್ಯ ಚುನಾವಣ ಆಯೋಗಗಳಿಗೆ ವಿಶೇಷ ಅಧಿಕಾರ ನೀಡಿವೆ. ರಾಜ್ಯ ಚುನಾವಣ ಆಯೋಗವು ಸ್ಥಳೀಯ ಸಂಸ್ಥೆಗಳಾದ ಪಾಲಿಕೆ ಮತ್ತು ಪಂಚಾಯತ್‌ಗಳಿಗೆ ಚುನಾವಣೆ ನಡೆಸುತ್ತದೆ. ಹೀಗಾಗಿ ರಾಜ್ಯ ಚು. ಆಯೋಗಗಳಿಗೆ ಮತದಾರರ ಪಟ್ಟಿ ರೂಪಿಸುವ ಸಲುವಾಗಿ ನಿರ್ದೇಶನ ನೀಡುವ, ನಿಯಂತ್ರಿಸುವ ಮತ್ತು ಚುನಾವಣೆ ನಡೆಸುವ ಅಧಿಕಾರ ನೀಡಲಾಗಿದೆ. ಹೀಗಾಗಿಯೇ ರಾಜ್ಯ ಆಯೋಗಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕ ಮತದಾರ ಪಟ್ಟಿ ರೂಪಿಸುತ್ತವೆ.

ಕೆಲವು ರಾಜ್ಯಗಳಲ್ಲಿ ಮಾತ್ರ
ಕರ್ನಾಟಕ ಸಹಿತ ಕೆಲವು ರಾಜ್ಯಗಳು ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಕೇಂದ್ರ ಚುನಾವಣ ಆಯೋಗದ ಮತದಾರರ ಪಟ್ಟಿಯನ್ನೇ ಬಳಸಿಕೊಳ್ಳುತ್ತವೆ. ಆದರೆ ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ ಮತ್ತು ಕೆಲವು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಮತದಾರರ ಪಟ್ಟಿ ಮಾಡಿಕೊಳ್ಳುತ್ತವೆ.

ರಾಜ್ಯಗಳ ಮನವೊಲಿಕೆ
ಆ. 13ರಂದು ನಡೆದ ಸಭೆಯಲ್ಲಿ ಕೇಂದ್ರ ಚುನಾವಣ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯನ್ನೇ ಬಳಕೆ ಮಾಡುವಂತೆ ರಾಜ್ಯ ಚುನಾವಣ ಆಯೋಗಗಳ ಮನವೊಲಿಕೆ ಮಾಡುವ ನಿಲುವು ವ್ಯಕ್ತಪಡಿಸಲಾಗಿದೆ. ಪಿ.ಕೆ. ಮಿಶ್ರಾ ಅವರು ಕ್ಯಾಬಿನೆಟ್‌ ಕಾರ್ಯದರ್ಶಿ ರಾಜೀವ್‌ ಚೌಬಾ ಅವರಿಗೆ ರಾಜ್ಯ ಸರಕಾರಗಳನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.